NEWSನಮ್ಮಜಿಲ್ಲೆ

ದುಶ್ಚಟಗಳಿಗೆ ಬಲಿಯಾಗಿ ಅಮೂಲ್ಯ ಜೀವನ ಹಾಳುಮಾಡಿ ಕೊಳ್ಳಬೇಡಿ: ಕಾರ್ಮಿಕರಿಗೆ ನ್ಯಾ. ಕೃಪಾ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ಕಾರ್ಮಿಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳುಮಾಡಿ ಕೊಳ್ಳಬೇಡಿ, ತಂಬಾಕು ಮುಕ್ತ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಜನ ಸಾಮಾನ್ಯರಲ್ಲಿ ಅರಿವಿನ ಜಾಗೃತಿ ಮೂಡಿಸಬೇಕೆಂದು ಕೃಷ್ಣರಾಜಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕೃಪಾ ಕರೆ ನೀಡಿದರು.

ಅವರು ಶನಿವಾರ ಕೃಷ್ಣರಾಜಪೇಟೆ ಪಟ್ಟಣದ ಆಚಾರ್ಯ ವಿದ್ಯಾ ಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಶಿಕ್ಷಣ ಮತ್ತು ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಮತ್ತು ವಿಶ್ವ ತಂಬಾಕು ರಹಿತ ದಿನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕರು ಈ ರಾಷ್ಟ್ರದ ಸಂಪತ್ತು. ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಶ್ರಮದ ದುಡಿಮೆಯು ಅಪಾರವಾಗಿದೆ. ಕೈಗಾರಿಕೆಗಳು, ಕಟ್ಟಡಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ತಮ್ಮ ಜೀವದ ಹಂಗು ತೊರೆದು ದುಡಿಯುತ್ತಿರುವ ಕಾರ್ಮಿಕರು ತಮ್ಮ ವೈಯಕ್ತಿಕ ಜೀವನದ ಕಡೆಗೂ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಇನ್ನು ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸರ್ಕಾರದ ವತಿಯಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡು ನೆಮ್ಮದಿಯ ಬದುಕು ನಡೆಸಬೇಕು ಎಂದು ಕಿವಿ ಮಾತು ಹೇಳಿದ ನ್ಯಾಯಾಧೀಶರು, ಕಾರ್ಮಿಕ ಬಂಧುಗಳು ತಮ್ಮ ಮಕ್ಕಳನ್ನು ದುಡಿಮೆಗೆ ಬಳಸಿಕೊಂಡು ಅವರ ಉಜ್ವಲವಾದ ಭವಿಷ್ಯವನ್ನು ಹಾಳು ಮಾಡದೇ ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡಿಸಿ ಸಾಧನೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಅಪರ ಸಿವಿಲ್ ನ್ಯಾಯಾಧೀಶರಾದ ಅರ್ಪಿತಾ ಮಾತನಾಡಿ, ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ವಿವಿಧ ತಂಬಾಕು ಉತ್ಪನ್ನಗಳನ್ನು ಬಳಸುತ್ತಿರುವುದರಿಂದ ನಾವು ನಮ್ಮ ಅಮೂಲ್ಯವಾದ ಆರೋಗ್ಯವನ್ನು ಹಾಳುಮಾಡಿ ಕೊಳ್ಳುತ್ತಿರುವುದಲ್ಲದೆ, ಅಪಾಯಕಾರಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಅಕಾಲಿಕವಾಗಿ ಸಾವಿಗೆ ಸಿಲುಕಿ ನಮ್ಮನ್ನು ನಂಬಿದವರನ್ನು ಅರ್ಧ ದಾರಿಯಲ್ಲಿ ಕೈಬಿಟ್ಟು ಅನಾಥರನ್ನಾಗಿ ಮಾಡುತ್ತಿದ್ದೇವೆ.

ಹೀಗಾಗಿ ನಾಗರಿಕ ಸಮಾಜದಲ್ಲಿರುವ ನಾವೆಲ್ಲರೂ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ತಂಬಾಕನ್ನು ಬಳಸುವುದಿಲ್ಲವೆಂದು ಶಪಥ ಮಾಡಬೇಕು ಎಂದು ಮನವಿ ಮಾಡಿದ ಅವರು ಕಾರ್ಮಿಕ ಬಂಧುಗಳು ಕೂಡ ತಮಗೆ ಸಂವಿಧಾನ ಬದ್ದವಾಗಿ ಸಿಗಬೇಕಾದ ಸೌಲಭ್ಯಗಳನ್ನು ಬಳಸಿಕೊಂಡು ನೆಮ್ಮದಿಯ ಜೀವನ ನಡೆಸಬೇಕು ಎಂದು ಕರೆ ನೀಡಿದರು.

ಸರ್ಕಾರಿ ಅಭಿಯೋಜಕ ಶಿವಪ್ಪ, ಹಿರಿಯ ವಕೀಲ ಹೆಚ್.ರವಿ, ಕೆ. ಎನ್.ನಾಗರಾಜು, ವಕೀಲರ ಸಂಘದ ಅಧ್ಯಕ್ಷ ರವಿಶಂಕರ್, ಕಾರ್ಯದರ್ಶಿ ರಾಜೇಗೌಡ, ಕಾರ್ಮಿಕ ನಿರೀಕ್ಷಕ ಗಂಗಾಧರ, ಸಂಪನ್ಮೂಲ ವ್ಯಕ್ತಿಗಳಾದ ನೀಲಾಮಣಿ, ಜ್ಞಾನೇಶ್, ಶಾಲೆಯ ಮುಖ್ಯ ಶಿಕ್ಷಕಿ ಹುಧಾ ಫಾತಿಮಾ ಡೆಲ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೆ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರಿಗೆ ತಂಬಾಕು ಜಾಗೃತಿ ಕುರಿತು ಪ್ರತಿಜ್ಞಾ ವಿಧಿಯನ್ನು ನ್ಯಾಯಾಧೀಶೆ ಕೃಪಾ ಭೋದಿಸಿದರು. ಶಿಕ್ಷಕರಾದ ನಟೇಶ್ ಕಾರ್ಯಕ್ರಮ ನಿರೂಪಿಸಿದರೆ ಶಿಕ್ಷಕಿ ಗೀತಾ ಪ್ರಾರ್ಥಿಸಿದರು. ಶಾಲಾಮಕ್ಕಳ ಶಿಸ್ತು ಬದ್ಧ ಸ್ವಾಗತವು ಅತಿಥಿಗಳ ಗಮನ ಸೆಳೆಯಿತು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ