LatestNEWSಶಿಕ್ಷಣಸಂಸ್ಕೃತಿ

ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿ: ಡೋಲು-ನಾದಸ್ವರ ತರಬೇತಿಗೆ ಅರ್ಜಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: 2025-26 ನೇ ಸಾಲಿನ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಮೂಲಕ ದೇವನಹಳ್ಳಿ ತಾಲೂಕಿನಲ್ಲಿರುವ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ: ಹಿಂದುಳಿದ ವರ್ಗಗಳ 1) ಪ್ರವರ್ಗ-2(ಎ)ರಲ್ಲಿ ಬರುವ ಸವಿತಾ ಸಮಾಜ ಅಥವಾ ಅದರ ಉಪಜಾತಿಗಳಿಗೆ ಸೇರಿದರಾಗಿರಬೇಕು.

2) ಕನಿಷ್ಠ ವಯೋಮಿತಿ 10 ವರ್ಷ ಹಾಗೂ ಗರಿಷ್ಠ ವಯೋಮಿತಿ 15 ವರ್ಷ (ಒಂದು ವೇಳೆ ಅಧ್ಯಯನ ಮಾಡುತ್ತಿರುವ 15 ವರ್ಷದೊಳಗಿನ ವಿದ್ಯಾರ್ಥಿಗಳು ದೊರೆಯದ ಪಕ್ಷದಲ್ಲಿ ಮಾತ್ರ 18 ವರ್ಷದವರನ್ನು ಅರ್ಜಿ ಹಾಕಲು ಅವಕಾಶವಿದೆ).

3)ಅರ್ಜಿಯನ್ನು ಸಲ್ಲಿಸಲು ಕುಟುಂಬದ ವಾರ್ಷಿಕ ಆದಾಯದ ₹2 ಲಕ್ಷ ಮೀರಬಾರದು. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನ ಜೂನ್ 20. ಕಚೇರಿಯ ಸಮಯ 5 ಗಂಟೆಯ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮಿನಿ ವಿಧಾನಸೌಧದ ಹಿಂಭಾಗ, ಡಿ.ವಿ.ಎಂ ಕಾಲೋನಿ, ದೇವನಹಳ್ಳಿ ತಾಲ್ಲೂಕಿಗೆ ಹಾಗೂ ಸಹಾಯವಾಣಿ ಸಂಖ್ಯೆ: 080-22449999 ಗೆ ಕರೆ ಮಾಡಿ ಅಥವಾ ನೇರವಾಗಿ ಹೋಗಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ