CRIMENEWSನಮ್ಮಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಸಾರಿಗೆ ಬಸ್: ಪ್ರಯಾಣಿಕರು ಪಾರು

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಚಾಲಕ ನಿಯಂತ್ರಣ ತಪ್ಪಿದ ಸಾರಿಗೆ ಬಸ್​ ಕಂದಕಕ್ಕೆ ಉರುಳಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಇಂದು ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ಅಥಣಿಯಿಂದ ಜಮಖಂಡಿ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಈ ವೇಳೆ ಬಸ್​ನಲ್ಲಿದ್ದ ಏಳೆಂಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಅಪಘಾತ ಸಂಭವಿಸಿದ್ದನ್ನು ನೋಡಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಬಸ್​ನ ಹಿಂಬದಿಯ ಗಾಜು ಒಡೆದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದು. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ. ರೋಡ್​ಹಂಪ್‌ ಹತ್ತಿ ಇಳಿಯುವ ವೇಳೆ ಬಸ್ಸಿನ ಪಾಟಾ ಮುರಿದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ರೋಡ್‌ನಲ್ಲಿ ರಸ್ತೆ ಡುಬ್ಬವನ್ನು ಅವೈಜ್ಞಾನಿಕವಾಗಿ ಹಾಕುತ್ತಿರುವುದರಿಂದ ಹಲವು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಅವೈಜ್ಞಾನಿಕವಾಗಿ ಹಾಕಿರುವ ರಸ್ತೆ ಡುಬ್ಬಗಳನ್ನು ತೆರವುಗೊಳಿಸಿ ವೈಜ್ಞಾನಿಕವಾದ ರಸ್ತೆ ಉಬ್ಬುಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಟಿಕೆಟ್‌ ತೋರಿಸದಿದ್ದಕ್ಕೆ ತನಿಖಾ ಅಧಿಕಾರಿಯಿಂದ ವೃದ್ಧನ ಮೇಲೆ ಹಲ್ಲೆ ಆರೋಪ- ಅಧಿಕಾರಿ ವಿರುದ್ಧ FIR ದಾಖಲು ಲಾರಿ -ಟಿ.ಟಿ.ವಾಹನ ನಡುವೆ ಭೀಕರ ಅಪಘಾತ: ಕಾಶಿ ತೀರ್ಥಯಾತ್ರೆಗೆ ಹೊರಟಿದ್ದ ಮೂವರು ಮೃತ, 12 ಮಂದಿಗೆ ಗಾಯ GBA: ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು- ಆಯುಕ್ತ ರಾಜೇಂದ್ರ ಚೋಳನ್ ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು