CRIMENEWSದೇಶ-ವಿದೇಶ

ಚಲಿಸುವ ವಾಹನದಿಂದ ಪ್ರಯಾಣಿಕ ಬಿದ್ದರೆ ಚಾಲಕ ಹೊಣೆಯಲ್ಲ: ಸುಪ್ರಿಂ ಕೋರ್ಟ್ ಮಹತ್ವದ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸರ್ಕಾರಿ ಸಾರಿಗೆ ವಾಹನಗಳನ್ನೊಳಗೊಂಡು ಯಾವುದೇ ವಾಹನದಿಂದ ಪ್ರಯಾಣಿಕ ಆಕಸ್ಮಿಕವಾಗಿ ಬಿದ್ದು ಮೃತಪಟ್ಟರೆ, ಅದಕ್ಕೆ ವಾಹನದ ಚಾಲಕರು ಜವಾಬ್ದಾರರಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ 2024ರ ಜುಲೈನಲ್ಲೇ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಕೆ.ಟಿ. ಥಾಮಸ್‌ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ತೀರ್ಪು ನೀಡಿದ್ದು, ಯಾವುದೇ ವಾಹನವು ಅಪಘಾತಕ್ಕೀಡಾದರೆ ಚಾಲಕನ ನಿರ್ಲಕ್ಷತನವೇ ಕಾರಣವೆಂದು ಭಾವಿಸುವುದು ತಪ್ಪು ಎಂದು ಹೇಳಿದೆ.

ಇನ್ನು ಸೆಷನ್ಸ್ ನ್ಯಾಯಾಲಯ ಹಾಗೂ ಆಂಧ್ರ ಪ್ರದೇಶದ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿದ್ದ ಚಾಲಕನನ್ನು ಆರೋಪದಿಂದ ಬಿಡುಗಡೆ ಮಾಡುವಂತೆ ಈ ಪೀಠ ಈ ತೀರ್ಪು ನೀಡುವ ಮೂಲಕ ಆದೇಶ ಮಾಡಿದೆ.

ಆಂಧ್ರಪ್ರದೇಶದ ರಸ್ತೆ ಸಾರಿಗೆ ಸಂಸ್ಥೆಯ ಚಲಿಸುವ ಬಸ್ಸಿನಿಂದ ಮಹಿಳೆಯೋರ್ವಳು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದರು. ಆಗ ಬಸ್ಸಿನ ಚಾಲಕ ಮೊಹಮದ್ ಆಯುದ್ದೀನ್‌ನನ್ನು ತಪ್ಪಿತಸ್ಥನನ್ನಾಗಿ ಮಾಡಿ ಆತನ ನಿರ್ಲಕ್ಷ್ಯವೇ ಮಹಿಳೆ ಬೀಳಲು ಕಾರಣವೆಂದು ಭಾವಿಸಲಾಗಿತ್ತು. ಅಷ್ಟೇ ಅಲ್ಲದೆ ಅವನಿಗೆ ಭಾರತೀಯ ದಂಡ ಸಂಹಿತೆಯ 304 3 ತಿಂಗಳು ಜೈಲು ಶಿಕ್ಷೆಯನ್ನೂ ವಿಧಿಸಿತ್ತು.

ತನಗೆ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಬಸ್ ಚಾಲಕ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದನು. ಆತನ ಮೇಲ್ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಥಾಮಸ್ ಚಲಿಸುವ ವಾಹನದಿಂದ ಪ್ರಯಾಣಿಕ ಕೆಳಗುರುಳಿ ಬಿದ್ದ ಸಂದರ್ಭದಲ್ಲಿ ವಾಹನದ ಚಾಲಕ ಅದಕ್ಕೆ ಜವಾಬ್ದಾರನಾಗಲಾರ ಎಂದು ಹೇಳಿ ಚಾಲಕನ ಪರ ತೀರ್ಪು ನೀಡಿರು.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...