NEWSನಮ್ಮಜಿಲ್ಲೆನಮ್ಮರಾಜ್ಯ

ವಿಜಯಪಥ ವರದಿ ಪರಿಣಾಮ- ಬಿಎಂಟಿಸಿ ಘಟಕ 21ರ ಚಾಲಕ ಆತ್ಮಹತ್ಯೆ ಪ್ರಕರಣ: ಡಿಪೋ ವ್ಯವಸ್ಥಾಪಕ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉತ್ತಮ ಚಾಲಕ ಎಂದು ಬೆಳ್ಳೆ ಪದಕ ಪಡೆದಿದ್ದ ಚಾಲಕ ಹೊಳೆ ಬಸಪ್ಪ ಅವರು ಡಿಪೋನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಸಂಬಂಧ ಬಿಎಂಟಿಸಿ ಚನ್ನಚಂದ್ರ ಡಿಪೋ 21ರ ವ್ಯವಸ್ಥಾಪಕ ಮಲ್ಲಿಕಾರ್ಜುನಯ್ಯ ಅವರನ್ನು ಅಮಾನತು ಮಾಡಲಾಗಿದೆ.

ಈ ಪ್ರಕರಣದ ಬಗ್ಗೆ ವಿಜಯಪಥ ಸಮಗ್ರವಾಗಿ ಮತ್ತು ನಿರಂತರವಾಗಿ ವರದಿ ಮಾಡಿತ್ತು. ಹೀಗಾಗಿ ವಿಜಯಪಥ ವರದಿಯಿಂದ ಎಚ್ಚೆತ್ತ ನಿಗಮದ ಅಧಿಕಾರಿಗಳು ವ್ಯವಸ್ಥಾಪಕರನ್ನು ಅಮಾನತು ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಇನ್ನು ಮಲ್ಲಿಕಾರ್ಜುನಯ್ಯ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ಹೊಳೆಬಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಮೃತರ ಪತ್ನಿ ದೂರು ನೀಡಿದ್ದರು. ಆ ದೂರನ್ನು ಅಮಾನತು ಮಾಡುವ ವೇಳೆ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.

ಹೊಳೆಬಸಪ್ಪ ಅವರು ಆ.29 ರಂದು ಡಿಪೋ -21 ರಲ್ಲಿ ಕರ್ತವ್ಯಕ್ಕೆ ಹಾಜರಾದ ವೇಳೆ ಡ್ಯೂಟಿ ಸಿಗಲಿಲ್ಲ ಮತ್ತು ವ್ಯವಸ್ಥಾಪಕರ ಕಿರುಕುಳ ಹೆಚ್ಚಾಗಿದೆ ಎಂದು ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಸಂಬಂಧ ಹೊಳೆಬಸಪ್ಪ ಅವರು ಆತ್ಮಹತ್ಯೆಗೂ ಮುನ್ನಾ ಡೆತ್‌ನೋಟ್‌ ಬರೆದಿಟ್ಟಿದ್ದರು. ಅದು ಅವರ ಒಳ ಉಡುಪಿನಲ್ಲಿ ಸಿಕ್ಕಿತು. ವಿಜಯಪಥ ವರದಿ ಬಳಿಕ ಬಿಎಂಟಿಸಿ ಎಂಡಿ ಜಿ.ಸತ್ಯವತಿ ಅವರು ತನಿಖೆಗೆ ಆದೇಶ ಮಾಡಿದ್ದರು. ಬಿಎಂಟಿಸಿಯ ಜಾಗೃತ ಮತ್ತು ಭದ್ರತಾದಳದ ಮುಖ್ಯ ಅಧಿಕಾರಿ ರಾಧಿಕಾ ತನಿಖೆ ಮಾಡಿ ರಿಪೋರ್ಟ್ ಸಲ್ಲಿಸಿದರು. ವರದಿಯಲ್ಲಿ ಮಲ್ಲಿಕಾರ್ಜುನಯ್ಯ ಹಣಕ್ಕೆ ಒತ್ತಾಯಿಸಿದ್ದು ಗಮನಕ್ಕೆ ಬಂದಿದ್ದು, ಚಾಲಕ ಮತ್ತು ನಿರ್ವಾಹಕರಿಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಆರೋಪ ಸಾಬೀತಾಗಿದೆ.

ಶವವಿಟ್ಟು ಪ್ರತಿಭಟನೆ ಮಾಡಿದ್ದ ಕುಟುಂಬಸ್ಥರು: ಎರಡು ದಿನದ ಹಿಂದೆ ಚನ್ನಸಂದ್ರ ಡಿಪೋ ಮುಂದೆ ಬಿಎಂಟಿಸಿ ನೌಕರ ಹೊಳೆಬಸಪ್ಪ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದರು. ಮೃತ ಹೊಳೆಬಸಪ್ಪ ಅವರ ಪತ್ನಿ ಇಬ್ಬರು ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದರು. ಧರಣಿಗೆ ಆಮ್ ಆದ್ಮಿ ಪಕ್ಷ, ಕೆಆರ್​ಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬೆಂಬಲ ನೀಡಿದ್ದರು. ಜತೆಗೆ ನೂರಾರು ಸಂಖ್ಯೆಯಲ್ಲಿ ನೌಕರರು ಜಮಾಯಿಸಿ ಸ್ಥಳಕ್ಕೆ ಸಾರಿಗೆ ಸಚಿವರು ಬರುವಂತೆ ಪಟ್ಟು ಹಿಡಿದಿದ್ದರು. ಅಲ್ಲೆ ಡಿಪೋ ವ್ಯವಸ್ಥಾಪಕರನ್ನು ಅಮಾನತು ಮಾಡಬೇಕು, ಬಂಧಿಸಬೇಕು ಎಂದು ಪಟ್ಟು ಹಿಡಿದಿದ್ದರು.

ಪ್ರತಿಭಟನಾ ಸ್ಥಳಕ್ಕೆ ಆರ್​ಆರ್ ನಗರ ಪೊಲೀಸರು ಭೇಟಿ ನೀಡಿ ಪ್ರತಿಭಟನೆ ಕೈ ಬಿಡಬೇಕು ಎಂದು ಮನವಿ ಮಾಡಿದ್ದರು ಹಾಗೂ ಅಂತ್ಯಕ್ರಿಯೆ ಮಾಡಲು ವ್ಯವಸ್ಥೆ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದರು. ಈ ವೇಳೆ ಇತ್ತ ಘಟಕ ವ್ಯವಸ್ಥಾಪಕ ಮಲ್ಲಿಕಾರ್ಜುನಯ್ಯನನ್ನು ವಶಕ್ಕೆ ಪಡೆಯಬೇಕು ಅದನ್ನು ಬಿಟ್ಟು ಆತನನ್ನು ಅಮಾನತು ಕೂಡ ಮಾಡದೇ ಬೇರೆ ಡಿಪೋದಲ್ಲಿ ಡ್ಯೂಟಿ ಮಾಡಲು ಅವಕಾಶ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಎಂಟಿಸಿ ಡಿಪೋ-21ರ ಎಟಿಎಸ್‌ ಕೂಡ ಅಮಾನತು: ಡಿಪೋನಲ್ಲಿ ಲಂಚವತಾರ ಹೆಚ್ಚಿದೆ ಎಂಬ ವಿಜಯಪಥ ವರದಿಯಿಂದ ಎಚ್ಚೆತ್ತ ಬಿಎಂಟಿಸಿ ಎಂಡಿ ಅವರು ಡಿಪೋ-21ರ ಸಹಾಯಕ ಸಂಚಾರ ಅಧೀಕ್ಷಕ (ATS) ಅವರನ್ನೂ ಅಮಾನತುಗೊಳಿದ್ದಾರೆ. ಸಹಾಯಕ ಸಂಚಾರ ಅಧೀಕ್ಷಕ ಮಹಾದೇವ ದಾಬೋಜಿ ಅಮಾನತುಗೊಂಡ ಎಟಿಎಸ್‌.

ಬಿಎಂಟಿಸಿ ಡಿಪೋದಲ್ಲಿ ಗಣೇಶ ಉತ್ಸವ, ಬೀಳ್ಕೊಡುಗೆ ಹೆಸರಿನಲ್ಲಿ ಬಿಎಂಟಿಸಿ ಚಾಲಕರು, ನಿರ್ವಾಹಕರು, ಮೆಕ್ಯಾನಿಕ್​ಗಳಿಂದ ಹಣ ಸುಲಿಗೆ ಮಾಡಲಾಗುತ್ತಿತ್ತು. ಸಹೋದ್ಯೋಗಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ATS ಮಹಾದೇವ ದಾಬೋಜಿ ಅವರನ್ನು ಅಮಾನತುಗೊಳಿಸಿ ಎಂಡಿ ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ