ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಅರಮನೆ ಆರವಣ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ.
ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ. ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.
ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ.
ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ನಗರ ಹಾಗೂ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಲಾಗಿದೆ. ಜತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ.
ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.
Related

You Might Also Like
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...
KKRTC ಯಾದಗಿರಿ: ಇಬ್ಬರು ವಿಭಾಗಮಟ್ಟದ ಅಧಿಕಾರಗಳ ವಿರುದ್ಧ ಜಾತಿ ನಿಂದನೆ, ಲೈಂಗಿಕ ಕಿರುಕುಳ-2ಪ್ರತ್ಯೇಕ ಪ್ರಕಣಗಳು ದಾಖಲು
ಯಾದಗಿರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಇಬ್ಬರು ಪ್ರಮುಖ ಅಧಿಕಾರಿಗಳ ವಿರುದ್ಧ ವಿಭಾಗದ ಸಿಬ್ಬಂದಿಗಳೇ ಪ್ರತ್ಯೇಕವಾಗಿ ದೂರು ನೀಡಿದ್ದು, ವಾರದೊಳಗೆ ಅಧಿಕಾರಿಗಳ ಮೇಲೆ ಪ್ರತ್ಯೇಕ ಎರಡು...
KSRTC: 2006ರಲ್ಲಿ ಡ್ಯೂಟಿಗೆ ಸೇರಿ ಹಲವರು ನಿವೃತ್ತರಾಗುತ್ತಿದ್ದಾರೆ- ಅಚ್ಚರಿ ಎಂದರೆ ಬೇಸಿಕ್ ಪೇ 27 ಸಾವಿರ ದಾಟಲೇ ಇಲ್ಲಆದರೆ..!
ಸರ್ಕಾರಿ ಡಿ ಗ್ರೂಪ್ ನೌಕರರ ಮೂಲ ವೇತನ ಸೇರಿದ ಕೂಡಲೇ 27 ಸಾವಿರ ಬೇಸಿಕ್ ಪೇ ನಮ್ಮ ಈ ದುರಂತ ಕತೆಗೆ ನಾಯಕರು ಯಾರು? ಜಂಟಿ ಸಂಘಟನೆಗಳ...
ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿಕೆಶಿ ಅವರೇ: ಕೇಂದ್ರ ಸಚಿವ ಎಚ್ಡಿಕೆ ಪ್ರಶ್ನೆ
ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ...