NEWSನಮ್ಮರಾಜ್ಯರಾಜಕೀಯ

ಡ್ರೋನ್‌ ಸರ್ವೇ ಅಕ್ರಮ: ಆರ್.ಅಶೋಕ್‌ ವಿರುದ್ಧ ತನಿಖೆಗೆ ಜಗದೀಶ್‌ ವಿ ಸದಂ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡ್ರೋನ್‌ ಸರ್ವೇ ಕಾರ್ಯದಲ್ಲಿ ಅಕ್ರಮವಾಗಿದೆಯೆಂದು ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕಂದಾಯ ಸಚಿವ ಆರ್‌.ಅಶೋಕ್‌ ವಿರುದ್ಧ ಸೂಕ್ತ ತನಿಖೆಯಾಗಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಗ್ರಹಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಜಗದೀಶ್‌ ವಿ ಸದಂ, “ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದಿರುವ 423 ಕೋಟಿ ರೂಪಾಯಿ ಮೊತ್ತದ ಡ್ರೋನ್‌ ಸರ್ವೇ ಯೋಜನೆಯಲ್ಲಿ ಅಕ್ರಮ ನಡೆದಿದೆ. ತಮಗೆ ಬೇಕಾದ ರೀತಿಯಲ್ಲಿ ಟೆಂಡರ್‌ ಮಾರ್ಗಸೂಚಿಗಳನ್ನು ರೂಪಿಸಿಕೊಂಡು, ತಮಗೆ ಬೇಕಾದವರಿಗೆ ಟೆಂಡರ್‌ ನೀಡುತ್ತಿದ್ದಾರೆ.

5000 ಚದರ ಕಿಲೋಮೀಟರ್‌ ವ್ಯಾಪ್ತಿಯನ್ನು 1000 ಚದರ ಕಿಲೋಮೀಟರ್‌ಗೆ ಇಳಿಕೆ ಮಾಡಿದ್ದಾರೆ. ಗುತ್ತಿಗೆಯನ್ನು ತುಂಡುಗುತ್ತಿಗೆಯಾಗಿ ಮಾರ್ಪಾಡು ಮಾಡಿ, 1.5 ಕೋಟಿ ರೂಪಾಯಿಯಿಂದ 8 ಕೋಟಿ ರೂಪಾಯಿ ಮೊತ್ತದ ಟೆಂಡರ್‌ಗಳನ್ನಾಗಿ ಮಾಡಿದ್ದಾರೆ. ಆರ್ಥಿಕ ಇಲಾಖೆಯ ಗಮನಕ್ಕೆ ತರಬೇಕೆಂಬ ನಿಯಮವನ್ನು ಗಾಳಿಗೆ ತೂರಿದ್ದಾರೆ.

ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರು ಮಾಡಿರುವ ಆ ಆರೋಪಗಳನ್ನು ಗಮನಿಸಿದರೆ ಭಾರೀ ಪ್ರಮಾಣದ ಕಿಕ್‌ಬ್ಯಾಕ್‌ ಪಡೆದಿರುವ ಸಂಶಯ ವ್ಯಕ್ತವಾಗುತ್ತಿದೆ. ಇದರಲ್ಲಿ ಸಚಿವ ಆರ್‌.ಅಶೋಕ್‌, ಐಎಎಸ್‌ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಮನೀಶ್‌ ಮೌದ್ಗಿಲ್ ಪಾತ್ರದ ಕುರಿತು ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಡ್ರೋನ್‌ ಸರ್ವೇ ಮಾಡಿಸಲು ಎರಡನೇ ಹಂತದಲ್ಲಿ ಟೆಂಡರ್‌ ಕರೆಯಲು ಸಿದ್ಧತೆ ನಡೆಸಿಕೊಂಡಿರುವ ಮನೀಶ್‌ ಅವರು ಆರವ್‌ ಎನ್ನುವ ಸಂಸ್ಥೆಗೆ ಸಹಾಯ ಮಾಡಲು ಮಾರ್ಗಸೂಚಿಗಳನ್ನು ಬದಲಾಯಿಸಿದ್ದಾರೆ. ಈ ಹಿಂದಿನ ಗುತ್ತಿಗೆಗಳಿಗೆ ಗುತ್ತಿಗೆದಾರರಾಗಿದ್ದ ಸಂಸ್ಥೆಗಳಿಗೆ ಈ ಆರವ್‌ ಸಂಸ್ಥೆಯು ಸಬ್‌ ಕಂಟ್ರ್ಯಾಕ್ಟರ್‌ ಆಗಿತ್ತು.

ಆದರೆ ಈಗ ಪ್ರಮುಖ ಸಂಸ್ಥೆಗಳಿಗೇ ಟೆಂಟರ್‌ ಸಿಗದಂತೆ ಮಾರ್ಗಸೂಚಿಗಳನ್ನು ರೂಪಿಸುವ ಮೂಲಕ ಅಕ್ರಮ ನಡೆಸಿದ್ದಾರೆ. ಮನೀಶ್‌ ಅವರ ಪತ್ನಿಯಾಗಿರುವ ರೂಪಾ ಮೌದ್ಗಿಲ್‌ ಅವರೇ ಈ ವಿಷಯವನ್ನು ಬಹಿರಂಗಪಡಿಸಿದ್ದು, ತಕ್ಷಣವೇ ಟೆಂಡರ್‌ ಪ್ರಕ್ರಿಯೆಯನ್ನು ರದ್ದುಪಡಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಸದಂ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ