Please assign a menu to the primary menu location under menu

NEWSನಮ್ಮರಾಜ್ಯವಿಡಿಯೋ

NWKRTC: ಸೋರುತಿಹುದು ಬಸ್‌ ಮಾಳಿಗೆ ಅಧಿಕಾರಿಗಳ ಅಜ್ಞಾನದಿಂದ ಮಳೆಗೆ ಸೋರುತಿಹುದು..!!

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಮಾಳಿಗೆ ಮಳೆಗೆ ಸೋರುತಿದ್ದು  ಇದು ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಸಂಸ್ಥೆಯ ಧಾರವಾಡ  ಘಟಕದ ಬಸ್‌ ಛಾವಣಿ ತೂತು ಬಿದ್ದಿದ್ದು ಮಳೆಗೆ ಅದು ಸೋರುತ್ತಿದೆ. ಆ ಬಸ್ಸನ್ನೇ ಚಾಲಕ ಕೊಡೆ ಹಿಡಿದುಕೊಂಡು ಮಳೆಯೊಳಗೆ ಓಡಿಸುತ್ತಿರುವುದನ್ನು ಪ್ರಯಾಣಿಕರು ವಿಡಿಯೋ ಮಾಡಿದ್ದಾರೆ.

ಇದು ಘಟಕದ ಅಧಿಕಾರಿಗಳು ಮತ್ತು ಸಂಸ್ಥೆಯ ಅಧಿಕಾರಿಗಳ ನಡೆಯನ್ನು ತೋರಿಸುವಂತಿದೆ. ಬಸ್‌ಗಳನ್ನು ರಿಪೇರಿ ಮಾಡದೆ ಬಸ್‌ಗಳ ಫಿಟ್‌ನೆಸ್‌ ನೋಡದೆ ಚಾಲಕರ ಕೈಗೆ ಬಸ್‌ಕೊಟ್ಟು ಕಳುಹಿಸುವ ಚಾಳಿಯಿಂದ ಈ ರೀತಿಯ ಅವಾಂತರಗಳು ನಡೆಯುತ್ತಿವೆ.

ಇನ್ನು ಚಾಲಕರು ಇಂಥ ಬಸ್‌ ಬೇಡ ಎಂದು ಹೇಳಿದರೆ ಅವರಿಗೆ ಮೆಮೋ ಕೊಡುವುದು ಇಲ್ಲ ಬೇರೆ ಬಸ್‌ ಕೊಡದೆ ಡಿಪೋನಲ್ಲೇ ಕೂರಿಸಿ ಬಳಿಕ ಗೈರು ಹಾಜರಿ ಮಾಡಿ ವೇತನ ಬರದಂತೆ ಮಾಡುವುದು.

ಇದನ್ನು ಪ್ರಶ್ನಿಸಿದರೆ ಮೇಲಧಿಕಾರಿಗಳಿಗೆ ಎದುರು ಮಾತನಾಡಿದ ಎಂದು ಹೇಳಿ ಮೆಮೋ ಕೊಟ್ಟು ಬಳಿಕ ಅಮಾನತು ಮಾಡುವುದು. ಇಲ್ಲಿ ಚಾಲಕರು ಬಸ್‌ ಸರಿಯಿಲ್ಲ ಎಂದು ಹೇಳುವುದಕ್ಕೂ ಬಿಡದೆ ಈ ರೀತಿ ಅಧಿಕಾರಿಗಳು ದಬ್ಬಾಳಿಕ ಮಾಡುತ್ತಿರುವುದರಿಂದ ಇಂದು ಕೊಡೆ ಹಿಡಿದುಕೊಂಡು ಬಸ್‌ ಓಡಿಸುವ ಸ್ಥಿತಿ ಚಾಲಕರಿಗೆ ಬಂದಿದೆ.

ಇನ್ನಾದರೂ ಈ ಬಗ್ಗೆ ಸಾರಿಗೆ ಸಚಿವರು ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರು  ಗಮನ ಹರಿಸಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರಯಾಣಿಕರೆ ಒತ್ತಾಯಿಸಿದ್ದಾರೆ.

  • ಸ್ಪಷ್ಟನೆ: ಈ ಮೊದಲು ಅಂದರೆ ಗುರುವಾರ ನ್ಯೂಸ್‌ ಬಂದ ಸಮಯದಲ್ಲಿ ಧಾರವಾಡ ಗ್ರಾಮಾಂತರ ಘಟಕ ಎಂಬುದರ ಬದಲಿಗೆ  ಹಾವೇರಿ ವಿಭಾಗದ ಹಾವೇರಿ ಘಟಕದ ಬಸ್‌ ಮಳೆಗೆ ಸೋರುತ್ತಿದೆ ಎಂದು ವರದಿ ಪ್ರಸಾರವಾಗಿದ್ದಕ್ಕೆ ವಿಷಾದಿಸುತ್ತೇವೆ. -ಸಂ

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ