NEWSನಮ್ಮರಾಜ್ಯ

ಕೆಲ ಗ್ರಾಪಂಗಳಲ್ಲಿ ಇ-ಸ್ವತ್ತು ಪಡೆಯಲು ತಿಣುಕಾಟ: ಇನ್ನೂ ಅಪ್‌ಟೇಡ್‌ ಆಗಿಯೇ ಇಲ್ಲ ಸಾಫ್ಟ್‌ವೇರ್ ಅನ್ನುತ್ತಿರುವ ಸಿಬ್ಬಂದಿ!

ವಿಜಯಪಥ ಸಮಗ್ರ ಸುದ್ದಿ

ಕಡಬಗೆರೆ: ಕರ್ನಾಟಕ ಸರ್ಕಾರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 19-01-2026ರಂದು ಸೈಬ‌ರ್ ಸೆಂಟರ್‌ನಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲಕ ಪರಿವರ್ತಿತ/ ಪರಿವರ್ತನೆಯಿಲ್ಲದ ಅಥವಾ ಕೃಷಿ ಭೂಮಿಯಲ್ಲಿನ ನಿವೇಶನಗಳು ವರ್ಗೀಕರಣದಡಿ ಸಲ್ಲಿಸಲಾದ ಅರ್ಜಿಯನ್ನು ಸ್ವೀಕರಿಸಲಾಗಿದೆ.

ಜತೆಗೆ 01-03-2004 ರಿಂದ 11-01-2026 ರವರೆಗೆ ಕ್ರಯಗಳು ಹಾಗೂ ಋಣಭಾರಗಳ ಪ್ರಮಾಣಪತ್ರವನ್ನು ಸಹ ಪಡೆಯಲಾಗಿದೆ. ಆದರೆ, ಬೆಂಗಳೂರು ಉತ್ತರ ತಾಲೂಕಿನಲ್ಲಿರುವ ಕಡಬಗೆರೆ ಗ್ರಾಮ ಪಂಚಾಯಿತಿಯಲ್ಲಿ ಈ ಯಾವುದು ಕೂಡ ಇನ್ನು ಜಾರಿಗೆ ಬಂದಿಲ್ಲ. ಅಂದರೆ ಗಣಕಯಂತ್ರವನ್ನು ಈವರೆಗೂ ಅಪ್‌ಡೇಟ್‌ ಮಾಡಿಲ್ಲ ಎಂದು ಕಚೇರಿಯ ಸಿಬ್ಬಂದಿ ಹೇಳುತ್ತಿದ್ದಾರೆ.

ಆದರೆ, ಈ ಬಗ್ಗೆ ಉತ್ತರ ಕೊಡಬೇಕಾದ ಗ್ರಾಪಂ ಕಾರ್ಯದರ್ಶಿಯಾಗಲಿ ಇಲ್ಲ ಪಿಡಿಒ ಆಗಲಿ ಇಂದು ಕಚೇರಿಗೆ ಹೋದಾಗ ಇರಲಿಲ್ಲ. ಇದರಿಂದ ಗ್ರಾಪಂ ವ್ಯಾಪ್ತಿಯ ನಿವಾಸಿಗಳು ಈ ಸಂಬಂಧ ಅರ್ಜಿ ಹಾಕುವುದು ಸೇರಿದಂತೆ ಇತರೆ ಕಾರ್ಯಗಳಿಗೆ ಹೋದರೆ ಈ ಅಧಿಕಾರಿಗಳು ಸಿಗುತ್ತಿಲ್ಲ ಎಂದು ಎನ್.ಶ್ರೀನಿವಾಸ ಎಂಬುವರು ಆರೋಪ ಮಾಡಿದ್ದಾರೆ.

ಹೌದು! ಕಡಬಗೆರೆ ಗ್ರಾಮ ಪಂಚಾಯಿತಿ ಕಚೇರಿಗೆ ಹೋಗಿ ಇ-ಸ್ವತ್ತಿಗೆ ಸಲ್ಲಿಸಲಾಗುವ ಅರ್ಜಿಯ ಪ್ರತಿ ಹಾಗೂ ದಾಖಲೆಗಳನ್ನು ನೀಡಲು ಹೋದಾಗ ಅಲ್ಲಿ ಪಿಡಿಒ ಹಾಗೂ ಕಾರ್ಯದರ್ಶಿಗಳಾಗಲ್ಲಿ ಇರಲಿಲ್ಲ.

ಅಲ್ಲಿದ್ದ ಸಿಬ್ಬಂದಿಗಳನ್ನು ವಿಚಾರಿಸಿದಾಗ ಈ ಬಗ್ಗೆ ನಮ್ಮ ಕಚೇರಿಯ ಗಣಕ ಯಂತ್ರಗಳಲ್ಲಿ (ಕಂಪ್ಯೂಟರ್‌) ಇ-ಸ್ವತ್ತು ಅರ್ಜಿಗಳ ವಿಲೇವಾರಿ ಬಗ್ಗೆ ಯಾವುದೇ ರೀತಿಯ ಸಾಫ್ಟ್‌ವೇರ್ ಅಪ್‌ಡೇಟಾಗಿಲ್ಲ ಎಂದು ತಿಳಿಸಿದರು.

ಆದರೆ, ಖಾಸಗಿ ಸೈಬರ್/ ಕಂಪ್ಯೂಟರ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಈ ಕಚೇರಿಗಳ ಗಣಕ ಯಂತ್ರಗಳಲ್ಲಿ ಸಾಫ್ಟ್‌ವೇರ್ ಅಪ್‌ಡೇಟ್ ಆಗಿಲ್ಲವೆಂದರೆ ಇದು ಖಾಸಗಿ ಸೈಬರ್/ ಕಂಪ್ಯೂಟರ್ ಕೇಂದ್ರಗಳವರಿಗೆ ಹಣ ಮಾಡುವ ದಂದೆಯೇ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಸಂಬಂಧಪಟ್ಟವರು ಇದಕ್ಕೆ ಉತ್ತರಿಸಬೇಕು ಎಂದು ಕೇಳಿರುವ ಅವರು ಬಹುತೇಕ ರಾಜ್ಯದ ಎಲ್ಲ ಗ್ರಾಪಂಗಳಲ್ಲೂ ಈ ಸಮಸ್ಯೆ ಇದೆ ಎಂದು ಹೇಳಿದ್ದಾರೆ. ಈ ಎಲ್ಲರದ  ಜತೆಗೆ ಬೆಂಗಳೂರು ನಗರದ ಸುತ್ತ ಮುತ್ತ ಕಂದಾಯ ಭೂಮಿಯಲ್ಲಿ ನಿವೇಶನಕೊಂಡಿರುವ ನಾಗರಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸಹ  ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ