NEWSನಮ್ಮರಾಜ್ಯಬೆಂಗಳೂರು

ಮನೆ ಮನೆಗೆ ಇ-ಖಾತೆ ತಲುಪಿಸುವ ಇ-ಖಾತಾ ಮೇಳ ಅರ್ಥಪೂರ್ಣ ಕಾರ್ಯಕ್ರಮ: ಸಚಿವ ಭೈರತಿ ಸುರೇಶ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇ-ಖಾತಾ ಮೇಳವು ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಸದುದ್ದೇಶವನ್ನು ಹೊಂದಿರುವ ಅರ್ಥಪೂರ್ಣ ಕಾರ್ಯಕ್ರಮ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬಿ.ಎಸ್.ಸುರೇಶ್ (ಭೈರತಿ) ತಿಳಿಸಿದರು.

ಪಾಲಿಕೆಯ ಹೆಬ್ಬಾಳ‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್.ಟಿ.ನಗರದ ಎಚ್.ಎಮ್.ಟಿ ಮೈದಾನದಲ್ಲಿ ಇಂದು ಹಾಗೂ ನಾಳೆ ಹಮ್ಮಿಕೊಂಡಿರುವ ಬೃಹತ್ ಇ-ಖಾತಾ ಮೇಳಕ್ಕೆ ಇಂದು ಚಾಲನೆ ನೀಡಿ ಮಾತನಾಡಿ, ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ ಎಂದು ತಿಳಿಸಿದರು.

ಈಗಾಗಲೇ ಹೆಬ್ಬಾಳ‌ ವಿಧಾನಸಭಾ ಕ್ಷೇತ್ರದಲ್ಲಿ 50,000 ಸ್ವತ್ತುಗಳ ಪೈಕಿ 13,000 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ. ನಾಗರೀಕರು ಇ-ಖಾತಾ ಮೇಳದ ಸದುಪಯೋಗ ಪಡೆದು, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸುಲಭವಾಗಿ ಇ-ಖಾತಾವನ್ನು ಪಡೆಯುವಂತೆ ನಾಗರೀಕರಲ್ಲಿ ವಿನಂತಿಸಿದರು.

ಪೂರ್ವ ವಲಯದ ಆಯುಕ್ತರಾದ ಶ್ರೀಮತಿ ಸ್ನೇಹಲ್.ಆರ್ ರವರು ಮಾತನಾಡಿ ಪೂರ್ವ ವಲಯದಲ್ಲಿ ಇ-ಖಾತಾ ಮೇಳದ ಆಯೋಜನೆಯ ಮೂಲಕ‌ ಸುಲಭವಾಗಿ ಇ-ಖಾತಾ ನೀಡಲು ವ್ಯವಸ್ಥೆ ಮಾಡಲಾಗಿದೆ. ಪೂರ್ವ ವಲಯದಲ್ಲಿ ಒಟ್ಟು 3,45,858 ಸ್ವತ್ತುಗಳ ಪೈಕಿ 55,917 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ ಎಂದು ತಿಳಿಸಿದರು.

ಇ-ಖಾತಾ ಮೇಳದ‌ ಸೌಲಭ್ಯವನ್ನು ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ, ಆರ್.ಟಿ.ನಗರದ ಹೆಚ್.ಎಮ್.ಟಿ ಮೈದಾನದಲ್ಲಿ ಈ ಮೇಳವನ್ನು ನಾಳೆಯೂ ಮುಂದುವರೆಸಲಾಗುತ್ತದೆ. ಇ-ಖಾತಾ ಪಡೆಯಬೇಕಿರುವ ನಾಗರಿಕರು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಇ-ಖಾತಾ ಪಡೆಯುವಂತೆ ಅವರು ತಿಳಿಸಿದರು.

ಈ ವೇಳೆ ಮಾಜಿ ಉಪ ಮಹಾಪೌರರು, ವಲಯ ಆಯುಕ್ತರಾದ ಸ್ನೇಹಲ್.ಆರ್, ಜಂಟಿ ಆಯುಕ್ತರಾದ ಸರೋಜ, ಉಪ ಆಯುಕ್ತರಾದ ರಾಜು, ಕಂದಾಯ ಅಧಿಕಾರಿ ಶ್ರೀನಿವಾಸ್ ಮೂರ್ತಿ, ಕಾರ್ಯಪಾಲಕ ಅಭಿಯಂತರರು ಚಂದ್ರಶೇಖರ್, ಮಾಜಿ ಪಾಲಿಕೆ ಸದಸ್ಯರುಗಳು, ಸ್ಥಳೀಯ ಹಿರಿಯ ಮುಖಂಡರುಗಳು, ಹಾಗೂ‌ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ