CrimeNEWSಬೆಂಗಳೂರು

ಕಂಠಮಟ್ಟ ಕುಡಿದು ಕಾರು ಓಡಿಸಿದ ಪಡ್ಡೈಕ್ಳು: ಎಂಟು ಬೈಕ್‌ಗಳು ಸಂಪೂರ್ಣ ಜಖಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಂಠಮಟ್ಟ ಕುಡಿದು ನಶೆಯಲ್ಲಿ ಕಾರು ಓಡಿಸಿದ ಪರಿಣಾಮ ಎಂಟು ಬೈಕ್‌ಗಳು ಸಂಪೂರ್ಣ ಜಖಂಗೊಂಡಿರುವ ಘಟನೆ ಉಲ್ಲಾಳು ಬಳಿಯ ಕೆಎಲ್‌ಇ ಲಾ ಕಾಲೇಜು ಬಳಿ ನಡೆದಿದೆ.

ಭರತ್ ಎಂಬ ಯುವಕ ತನ್ನ ಕಾರಿನಲ್ಲಿ ನಾಲ್ವರು ಸ್ನೇಹಿತರನ್ನು ಕರೆದುಕೊಂಡು ಹೋಗಿ ಪಾರ್ಟಿ ಮಾಡಿದ್ದಾನೆ. ಬಳಿಕ ಸ್ನೇಹಿತ ಗುರುದೀಪ್‌ಗೆ ಕಾರು ಚಲಾಯಿಸಲು ಹೇಳಿದ್ದಾನೆ. ಲಾಂಗ್‌ ಡ್ರೈವ್‌ ಹೋಗಿದ್ದು, ಕುಡಿದಿದ್ದರಿಂದ ಕಾರನ್ನು ನಿಯಂತ್ರಿಸಲು ಸಾಧ್ಯವಾಗದೆ ಬೈಕ್‌ಗಳಿಗೆ ಗುದಿದ್ದಾನೆ.

ಪೋಷಕರು ತಮ್ಮ ಮಕ್ಕಳು ಚೆನ್ನಾಗಿ ಇರಲಿ ಎಂದು ಓಡಾಡಲು ಕಾರು ಕೊಡಿಸಿದ್ದಾರೆ. ಅದರ ಜತೆಗೆ ಪಾಕೆಟ್ ಮನಿ ಅದೂ ಇದು ಅಂತಾ ಕೊಡುತ್ತಿರುತ್ತಾರೆ. ಆ ಎಲ್ಲ ಹಣದಲ್ಲಿ ಖರ್ಚಾಗಿ ಉಳಿಸಿದ್ದರಲ್ಲಿ ಕಂಠಮಟ್ಟ ಕುಡಿದು ಕಾರಿನಲ್ಲಿ ಮೋಜಿನ ರೈಡ್ ಹೋಗಿ ಈ ಅಪಘಾತ ಮಾಡಿಕೊಂಡಿದ್ದಾರೆ ಪಡ್ಡೈಕ್ಳು ಎಂದು ಹೇಳಲಾಗುತ್ತಿದೆ.

ಮದ್ಯದ ನಶೆಯಲ್ಲಿದ್ದ ಗುರುದೀಪ್ ಕೆಎಲ್‌ಇ ಲಾ ಕಾಲೇಜಿನ ಬಳಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿದ್ದಾನೆ. ಈ ವೇಳೆ ಕಾರು ನಿಯಂತ್ರಣ ತಪ್ಪಿ ಬೇಕರಿ ಬಳಿ ನಿಂತಿದ್ದ ಬೈಕ್‌ಗಳ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಎಂಟು ಬೈಕುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಅಪಘಾತ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭರತ್ ಹಾಗೂ ಗುರುದೀಪ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ