NEWSನಮ್ಮಜಿಲ್ಲೆನಮ್ಮರಾಜ್ಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: KKRTC ವಿಜಯಪುರ ಸಾರಿಗೆ ಡಿಸಿಗೆ ಕಡ್ಡಾಯ ರಜೆ ಮೇಲೆ ತೆರಳುವ ಶಿಕ್ಷೆ

ಜೆ. ಮಹಮ್ಮದ್ ಪೈಜ್
ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗೆ ಏಪ್ರಿಲ್‌ 17ರಿಂದ ಏಪ್ರಿಲ್‌ 29ರ ವರೆಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಮಾಡಿದ್ದಾರೆ.

ಕೆಕೆಆರ್‌ಟಿಸಿ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜೆ. ಮಹಮ್ಮದ್ ಪೈಜ್ ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪ ಎದುರಿಸುತ್ತಿರುವವರು.

ಇನ್ನು ಈ ತೆರೆವಾದ ಸ್ಥಾನಕ್ಕೆ ವಿಭಾಗೀಯ ಸಂಚಾರ ಅಧಿಕಾರಿಯಾಗಿರುವ ದೇವಾನಂದ ಎ. ಬಿರಾದಾರ ಅವರನ್ನು ಮುಂದಿನ ಆದೇಶದವರೆಗೆ ಅವರ ಹುದ್ದೆಯ ಕಾರ್ಯದ ಜತೆಗೆ ಹೆಚ್ಚುವರಿಯಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ಹುದ್ದೆಯ ದೈನಂದಿನ ಕಾರ್ಯಭಾರ ನಿರ್ವಹಿಸುವಂತೆ ಆದೇಶಿಸಿದ್ದಾರೆ.

ದೇವಾನಂದ ಎ. ಬಿರಾದಾರ

ಇದೇ ಏಪ್ರಿಲ್‌ 14ರಂದು ವಿಜಯಪುರ ಜಿಲ್ಲಾಧಿಕಾರಿ ಅವರು ಇಮೇಲ್ ಮಾಡುವ ಮೂಲಕ ವಿಭಾಗೀಯ ನಿಯಂತ್ರಣಾಧಿಕಾರಿ ಜೆ. ಮಹಮ್ಮದ್ ಪೈಜ್ ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಜಿಲ್ಲಾಧಿಕಾರಿಗಳ ಇಮೇಲ್ ಬಂದ ಬಳಿಕ ಪರಿಶೀಲನೆ ನಡೆಸಿದ್ದು, ಜೆ. ಮಹಮ್ಮದ್ ಪೈಜ್ ಅವರು ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಚುನಾವಣೆ ನೀತಿ ಸಂಹಿತೆಗೆ ಬಾದಕವಾಗಬಾರದೆಂದು ಏ.17 ರಿಂದ 29ರವರೆಗೆ ಕಡ್ಡಾಯ ರಜೆ ಮೇಲೆ ತೆರಳಲು ಆದೇಶಿಸಲಾಗಿದೆ.

ಈ ಸಂಬಂಧ ನಿಗಮದ ಮುಖ್ಯ ಲೆಕ್ಕಾಧಿಕಾರಿ, ಎಲ್ಲ ಇಲಾಖಾ ಮುಖ್ಯಸ್ಥರು, ವಿಭಾಗೀಯ ನಿಯಂತ್ರಣಾಧಿಕಾರಿ, ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಪ್ರಾಂಶುಪಾಲರು, ಕಾರ್ಯ ನಿರ್ವಾಹಕ ಅಭಿಯಂತರರು, ಕಾರ್ಯ ವ್ಯವಸ್ಥಾಪಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರ ಆಪ್ತ ಕಾರ್ಯದರ್ಶಿ ಅವರಿಗೂ ಮಾಹಿತಿಗಾಗಿ ಪ್ರತಿಯನ್ನು ಕಳುಹಿಸಲಾಗಿದೆ ಎಂದು ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ