NEWSಕೃಷಿನಮ್ಮಜಿಲ್ಲೆ

ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ನಂಜನಗೂಡು:ಬರಗಾಲದ ರೈತರ ಕಷ್ಟ ಅರಿಯದ. ಬರ ಪರಿಹಾರ ನೀಡದ ಸರ್ಕಾರಕ್ಕೆ ರೈತರ ಓಟು ಕೇಳುವ ನೈತಿಕತೆ ಇಲ್ಲ ಇಂದು ರಾಜಕೀಯ ಪಕ್ಷಗಳ ಕುಟುಂಬ ರಾಜಕಾರಣ ವ್ಯಾಪಾರಿಕರಣವಾಗಿದ್ದು, ಮತ ನೀಡಿದ ಪ್ರಜೆಗಳು ಸಂಕಷ್ಟ ಪಡುವಂತಾಗಿದೆ ಎಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ.

ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲ. ಆದರೆ, ಅಧಿಕಾರ ಹಿಡಿಯಲು ಪೈಪೋಟಿ ನಡೆಸುತ್ತಿದ್ದಾರೆ. ರಾಜಕೀಯ ಕ್ಷೇತ್ರ ವ್ಯಾಪಾರಕ್ಕಿಂತಲೂ ಹೆಚ್ಚು ಲಾಭಗಳಿಸುವ ಕ್ಷೇತ್ರವಾಗಿದೆ ಎಂದು ಎಲ್ಲರೂ ಚುನಾವಣೆಗೆ ಪೈಪೋಟಿ ನಡೆಸುತ್ತಿದ್ದಾರೆ ಎಂದು ನಂಜನಗೂಡು ತಾಲೂಕು ರೈತರ ಸಭೆಯಲ್ಲಿ ಆಕ್ರೋಶ ಹೊರಹಾಕಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬರದ ಸಂಕಷ್ಟ ಕಾಲದಲ್ಲಿ ಜಗಳವಾಡುತ್ತಾ ಸಂಕಷ್ಟದ ಜನರಿಗೆ ಮನರಂಜನೆ ನಿಡುತ್ತಿದ್ದಾರೆ ಇದರಿಂದ ರೈತರ ಹೊಟ್ಟೆ ತುಂಬುವುದಿಲ್ಲ, ಈ ನಾಟಕ ಬಿಡಿ ಪರಿಹಾರ ನೀಡಿ, ಇಲ್ಲವೇ ಮತ ಕೇಳಲು ಬರಬೇಡಿ ಎಂದು ಮತ ಕೇಳಲು ಬರುವ ಅಭ್ಯರ್ಥಿಗಳನ್ನು ಊರಿಂದ ಹೊರಗಿಡಿ ಎಂದು ಕರೆ ನೀಡಿದರು.

ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲವಾಗಿದ್ದಾರೆ ಹಳ್ಳಿಗಳಲ್ಲಿ ಕುಡಿಯುವ ನೀರು ದನಕರುಗಳಿಗೆ ಮೇವು ಸಿಗದಂತಾಗಿದೆ ಅಧಿಕಾರಿಗಳು ಚುನಾವಣೆ ಕಾರಣ ಹೇಳಿ ರೈತರನ್ನು ನಿರ್ಲಕ್ಷ್ಯ ಮಾಡಿದ್ದಾರೆ . ಎಂಎಲ್ಎ ಮಂತ್ರಿಗಳು ಅಧಿಕಾರ ಹಿಡಿಯುವ ಹುಚ್ಚಿನಲ್ಲಿ ತೇಲಾಡುತ್ತಿದ್ದಾರೆ.

ಬರಗಾಲದ ಕಾರಣ ಕೊಳವೆ ಬಾವಿಗಳಲ್ಲಿ ನೀರು ಬತ್ತಿ ಹೋಗಿವೆ. ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಇದು ರಾಜಕೀಯ ಪಕ್ಷಗಳಿಗೆ ಕಾಣುತ್ತಿಲ್ಲವೇ ಜನರನ್ನ ಆಕರ್ಷಿಸಲು ಸುಳ್ಳಿನ ಪ್ರಣಾಳಿಕೆಗಳನ್ನು ಹೊರಡಿಸಿದ್ದಾರೆ ಎಂದರು.

ಕಾಡಂಚಿನ ಪ್ರದೇಶದ ರೈತರ ಬೆಳೆಗಳನ್ನು ಪ್ರಾಣಿಗಳು ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನ ಇದಕ್ಕೆ ಕಾರಣವಾಗಿದೆ. ರೈತರು ಹಳ್ಳಿಗಳಲ್ಲಿ ಕೆರೆ ಕಟ್ಟೆಗಳ ಹೂಳೆತ್ತುವ, ಪುನಶ್ಚೇತನಗೊಳಿಸುವ, ಹೊಸದಾಗಿ ಕೆರೆಕಟ್ಟಿ ನಿರ್ಮಿಸುವ ಕೆಲಸದಲ್ಲಿ ಶ್ರದ್ದೆ ವಹಿಸಿದರೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ಏರಿಕೆಯಾಗಿ ನೀರು ಶೇಖರಣೆಯಾಗಿ ಕೃಷಿ ಕ್ಷೇತ್ರ ಸಮೃದ್ಧಿಯಾಗಲು ಸಹಕಾರಿಯಾಗುತ್ತದೆ. ಇಂದಿನ ರಾಜಕಾರಣಿಗಳಿಗೆ ಇದೆಲ್ಲ ಕಾಣುವುದಿಲ್ಲ ಅವರಿಗೆ ಬೇಕಾಗಿಯೂ ಇಲ್ಲ ಎಂದರು.

ನಾವು ಆಯ್ಕೆ ಮಾಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ರೈತರ ಪಾಲಿಗೆ ಮರಳುಗಾಡಿನ ಮರೀಚಿಕೆ ಇದ್ದಂತೆ ಎಂಬುದನ್ನು ಅರಿತುಕೊಳ್ಳಬೇಕು.

ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ತಾಲೂಕ ಅಧ್ಯಕ್ಷ ದೇವನೂರು ವಿಜಯೇಂದ್ರ, ಅಂಬಳೆ ಮಂಜುನಾಥ್, ಅಲತ್ತೂರು ಪುಟ್ಟಸ್ವಾಮಿ, ಸಿಂದುವಳ್ಳಿ ಬಸವಣ್ಣ, ಕಮಲಮ್ಮ, ಶಿವಶಂಕರ್ ಬಿಲಿಗೆರೆ, ಅತ್ತಹಳಿ ದೇವರಾಜ್, ಕಿರಗಸೂರು ಶಂಕರ, ಬರಡನಪುರ ನಾಗರಾಜು, ನೀಲಕಂಠಪ್ಪ, ರೇವಣ್ಣ ಸೇರಿದಂತೆ 200ಕ್ಕೂ ಹೆಚ್ಚಿನ ರೈತರು ಇದ್ದರು.

Leave a Reply

error: Content is protected !!
LATEST
ಮೊಮ್ಮಗನ ಹಗರಣ ತಾತನಿಗೆ ಮುಳುವಾಯಿತೇ!! ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ ಬೆನ್ನೆಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ ಪ್ರಜ್ವಲ್ ರೇವಣ್ಣ ಸರಣಿ ಅತ್ಯಾಚಾರ ಪ್ರಕರಣದ ನೊಂದ ಮಹಿಳೆಯರ ಬೆಂಬಲಕ್ಕೆ ನಿಂತ ಆಮ್ ಆದ್ಮಿ ಪಾರ್ಟಿ ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ: ಮುಖ್ಯಮಂತ್ರಿ ಚಂದ್ರು ಬಿಸಿಲ ಝಳಕ್ಕೆ ಬಿಎಂಟಿಸಿ ನಿರ್ವಾಹಕ ಸೇರಿ ಇಬ್ಬರು ಮೃತ ಬೇಸಿಗೆಯ ಬಿರು ಬಿಸಿಲು- ತಂಪೆರೆದ ಭರಣಿ ಮಳೆ: ರೈತರ ಮುಖದಲ್ಲಿ ಮಂದಹಾಸ ಬೇಟಿ ಬಚಾವೋ ಬೇಟಿ ಪಢಾವೋ ಎಂದರೆ ಅತ್ಯಾಚಾರಿಗಳಿಗೆ ಟಿಕೆಟ್‌ ನೀಡುವುದೇ?:  ಮುಖ್ಯಮಂತ್ರಿ ಚಂದ್ರು ಪ್ರಶ್ನೆ ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಕ್ಷಣೆ ನೀಡಿ: ಮೋಹನ್ ದಾಸರಿ ಆಗ್ರಹ ಕೊರೊನಾದಿಂದ ಜೀವಕಳೆದುಕೊಂಡ KSRTCಯ 114ಕ್ಕೂ ಹೆಚ್ಚು ನೌಕರರ ಕುಟುಂಬಕ್ಕೆ ಇನ್ನೂ ಸಿಕ್ಕಿಲ್ಲ 30 ಲಕ್ಷ ಪರಿಹಾರ!!? ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇಲ್ಲ - ವಕೀಲ ಶಿವರಾಜು