ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರನ್ನು ಹಾಳು ಮಾಡಲು ಹೊರಟಿರುವುದು ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟ ಈ ಎರಡು ಬಣಗಳ ಮುಖಂಡರು.
ಜಂಟಿ ಕ್ರಿಯಾ ಸಮಿತಿ ಬಣದ ಮುಖಂಡರು ಹಾಗೂ ಪದಾಧಿಕಾರಿಗಳು ನೌಕರರ ಒಕ್ಕೂಟದ ಮುಖಂಡರು ಹಾಗೂ ಪದಾಧಿಕಾರಿಗಳ ಬಗ್ಗೆ ಕೆಟ್ಟ ಪದಗಳನ್ನು ಬಳಸಿ ನಿಂದಿಸುವುದು ಅದರಂತೆ ಒಕ್ಕೂಟದ ಮುಖಂಡರು, ಪದಾಧಿಕಾರಿಗಳು ಜಂಟಿ ಕ್ರಿಯಾ ಸಮಿತಿಯವರ ಬಗ್ಗೆ ನಿಂದಿಸುವುದು ಇದೇ ಆಯಿತು.
ಈ ನಡುವೆ ಈ ಬಣಗಳ ಬಡಿದಾಟದಿಂದ ನೌಕರರು ಯಾವರೀತಿ ನಡೆದುಕೊಳ್ಳಬೇಕೋ ಎಂಬ ಗೊಂದಲದಲ್ಲೇ ಪ್ರಮುಖವಾಗಿ ಪಡೆಯಬೇಕಾದ ವೇತನ ಸೌಲಭ್ಯವನ್ನು ಪಡೆಯಲಾಗದೆ ಹೆಣಗಾಡುತ್ತಿದ್ದಾರೆ.
ಇನ್ನು ಈ ಬಣಗಳ ಜತೆಗೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಹಾಗೂ ಆಡಳಿತ ವರ್ಗದ ಸಿಬ್ಬಂದಿಗಳ ಸಂಘಟನೆಗಳು ಕೂಡ ಬಸ್ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ನಮ್ಮ ಬೆಂಬಲವಿಲ್ಲ. ಆದರೆ ಶಾಂತಿಯುತ ಧರಣಿಯನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳುತ್ತಿದ್ದಾರೆ.
ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಹಾಗೂ ನೌಕರರ ಒಕ್ಕೂಟದ ಪದಾಧಿಕಾರಿಗಳು ತಮ್ಮ ಸ್ವ ಪ್ರತಿಷ್ಠೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಒಬ್ಬರಿಗೊಬ್ಬರು ನಿಂದಿಸಿಕೊಂಡು ನಾವು ವೇತನ ಹೆಚ್ಚಳ ಮಾಡಿಸುತ್ತೇವೆ ನೀವು ಸಮ್ಮನಿದ್ದು ಬಿಡಿ ಎಂದು ಉತ್ತರನ ಪೌರುಷ ಒಲೆಮುಂದೆ ಎಂಬಂತೆ ಕಳೆದ 5 ವರ್ಷಗಳಿಂದಲೂ ಹೇಳಿಕೊಂಡೆ ಬರುತ್ತಿದ್ದಾರೆ.
ಈ ನಡುವೆ ವಿಧಾನಸಭೆ ಚುನಾವಣೆ ವೇಳೆ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ವೇತನ ಹೆಚ್ಚಳವಾದಗ ನಾವು ಇದನ್ನು ಒಪ್ಪುವುದಿಲ್ಲ ನಮ್ಮ ಕಾರ್ಮಿಕರಿಗೆ ಅನ್ಯಾಯವಾಗಿದೆ. ಶೇ.25ರಷ್ಟು ಕೊಡಲೇಬೇಕು ಎಂದು ಹೌಹಾರಿದ ಮುಖಂಡು ಬಳಿಕ ಅಂದಿನ ಸಿಎಂಗೆ ಹೂ ಗುಚ್ಛ ನೀಡಿ ಬಳಿಕ ನಮ್ಮಿಂದಲೇ ಶೇ.15ರಷ್ಟು ವೇತನ ಹೆಚ್ವಳವಾಯಿತು ಎಂದು ಹೇಳಿಕೊಂಡರು. ಅದನ್ನು ಈಗಲೂ ಹೇಳುತ್ತಿದ್ದಾರೆ.
ಆದರೆ, ಶೇ.15ರಷ್ಟು ವೇತನ ಹೆಚ್ಚಳದ ಘೋಷಣೆ ಆಗಿ ಎರಡು ವರ್ಷಗಳು ಕಳೆಯುತ್ತ ಬಂದರೂ ಈವರೆಗೂ ಇವರಿಗೆ 38 ತಿಂಗಳ ಹಿಂಬಾಕಿ ಕೊಡಿಸಲು ಆಗಿಲ್ಲ. ಕೇಳಿದರೆ ಮತ್ತದೆ ಕಾರಣ ಏನು ನಾವು ಶೇ.15ರಷ್ಟು ವೇತನ ಹೆಚ್ಚಳ ಮಾಡಿಸಿದ್ದೇವೆ ನೀವು ಹಿಂಬಾಕಿ ಕೊಡಿಸಿ ಎಂದು ಜಾರಿಕೊಳ್ಳುವುದು.
ಇತ್ತ ನೌಕರರ ಒಕ್ಕೂಟದ ಪದಾಧಿಕಾರಿಗಳು ನಾವೇಕೆ ಹಿಂಬಾಕಿ ಕೊಡಿಸಬೇಕು. ಶೇ.15ರಷ್ಟು ವೇತನ ಹೆಚ್ಚಳವಾಗಿರುವುದು ನಮ್ಮಿಂದಲೇ ಎಂದು ಹೇಳಿಕೊಂಡು ಬೊಬ್ಬೆ ಹೊಡೆಯುತ್ತಿದ್ದೀರಲ್ಲ ನೀವೇ 38 ತಿಂಗಳ ಹಿಂಬಾಕಿ ಕೊಡಿಸಿ ಏಕೆ ನಿಮ್ಮಿಂದ ಅದು ಸಾಧ್ಯವಾಗುತ್ತಿಲ್ಲವೇ ಎಂದು ಮರು ಪ್ರಶ್ನೆ ಹಾಕಿಕೊಂಡು ಕಾಲ ಕಳೆದುಕೊಂಡೆ ಬರುತ್ತಿರುವುದು.
ಅಂದರೆ ಇಲ್ಲಿ ನೌಕರರು ಸ್ಪಷ್ಟವಾಗಿ ತಿಳಿದುಕೊಳ್ಳಬೇಕಿರುವುದು ಶೇ.15ರಷ್ಟು ವೇತನ ಹೆಚ್ಚಳ ಮಾಡಿದ್ದು ಸರ್ಕಾರ. ಇಲ್ಲಿ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿಯೂ ಅಲ್ಲ ನೌಕರರ ಒಕ್ಕೂಟವು ಅಲ್ಲ ಎಂದು. ಏಕೆಂದರೆ ನಿಜವಾಗಲು ಜಂಟಿ ಕ್ರಿಯಾ ಸಮಿತಿ ಶೇ.15ರಷ್ಟು ವೇತನ ಹೆಚ್ಚಳ ಮಾಡಿಸಿದ್ದರೆ ಈಗಾಗಲೇ 38 ತಿಂಗಳ ಹಿಂಬಾಕಿಯನ್ನು ಕೊಡಿಸುತ್ತಿತ್ತು.
ಆದರೆ ಈವರೆಗೂ ಅದು ಸಾಧ್ಯವಾಗಿಲ್ಲ ಎಂದರೆ ಅಂದಿನ ಬಿಜೆಪಿ ಸರ್ಕಾರವೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಮಾಡಿದೆ ಎಂಬುವುದು ಇಲ್ಲಿ ಸ್ಪಷ್ಟ. ಇನ್ನು ಏನೆ ಒಳ್ಳೆಯದಾದರೂ ಅದರ ಲಾಭ ಪಡೆಯಲು ನಾವೇ ಮಾಡಿಸಿದ್ದು ಎಂದು ಹೇಳುವುದಕ್ಕೆ ಎರಡೂ ಬಣಗಳು ಮುಂದೆ ಬರುತ್ತವೆ. ಆಗಬೇಕಿರುವುದನ್ನು ಏಕೆ ಮಾಡಿಸಿಲ್ಲ ಎಂದರೆ ಒಬ್ಬರಮೇಲೆ ಒಬ್ಬರು ವಿರುದ್ಧ ಹೇಳಿಕೆ ಕೊಡುತ್ತ ಅವರಿಂದಲೇ ಮಾಡಿಸಿಕೊಳ್ಳಿ ಎಂದು ಬೊಬ್ಬೆಹೊಡೆಯುತ್ತಾರೆ.
ಇನ್ನಾದರೂ ಇದೆಲ್ಲವನ್ನು ಬಿಟ್ಟು ನೌಕರರಿಗೆ ಅನುಕೂಲ ಮಾಡುವುದಿದ್ದರೆ ಕಾಳಜಿಯಿಂದ ಮಾಡಿ, ಇಲ್ಲ ಇಂದು ಅಂದರೆ ಮಾ.10ರಂದು ವಕೀಲರೊಬ್ಬರು ನೌಕರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹೆಜ್ಜೆಹಾಕುತ್ತಿದ್ದಾರೆ. ಅವರನ್ನಾದರೂ ಬೆಂಬಲಿಸಿ ಬರಿ ಬೊಗಳೆ ಬಿಟ್ಟುಕೊಂಡು ನೌಕರರ ದಾರಿತಪ್ಪಿಸುವುದನ್ನು ಇನ್ನಾದರೂ ನಿಲ್ಲಿಸಿ ಎಂಬುವುದು ನೊಂದ ನೌಕರರ ಒತ್ತಾಯಪೂರ್ವಕ ಮನವಿ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...