ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರನ್ನು ಹಾಳು ಮಾಡಲು ಹೊರಟಿರುವುದು ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟ ಈ ಎರಡು ಬಣಗಳ ಮುಖಂಡರು.
ಜಂಟಿ ಕ್ರಿಯಾ ಸಮಿತಿ ಬಣದ ಮುಖಂಡರು ಹಾಗೂ ಪದಾಧಿಕಾರಿಗಳು ನೌಕರರ ಒಕ್ಕೂಟದ ಮುಖಂಡರು ಹಾಗೂ ಪದಾಧಿಕಾರಿಗಳ ಬಗ್ಗೆ ಕೆಟ್ಟ ಪದಗಳನ್ನು ಬಳಸಿ ನಿಂದಿಸುವುದು ಅದರಂತೆ ಒಕ್ಕೂಟದ ಮುಖಂಡರು, ಪದಾಧಿಕಾರಿಗಳು ಜಂಟಿ ಕ್ರಿಯಾ ಸಮಿತಿಯವರ ಬಗ್ಗೆ ನಿಂದಿಸುವುದು ಇದೇ ಆಯಿತು.
ಈ ನಡುವೆ ಈ ಬಣಗಳ ಬಡಿದಾಟದಿಂದ ನೌಕರರು ಯಾವರೀತಿ ನಡೆದುಕೊಳ್ಳಬೇಕೋ ಎಂಬ ಗೊಂದಲದಲ್ಲೇ ಪ್ರಮುಖವಾಗಿ ಪಡೆಯಬೇಕಾದ ವೇತನ ಸೌಲಭ್ಯವನ್ನು ಪಡೆಯಲಾಗದೆ ಹೆಣಗಾಡುತ್ತಿದ್ದಾರೆ.
ಇನ್ನು ಈ ಬಣಗಳ ಜತೆಗೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಹಾಗೂ ಆಡಳಿತ ವರ್ಗದ ಸಿಬ್ಬಂದಿಗಳ ಸಂಘಟನೆಗಳು ಕೂಡ ಬಸ್ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ನಮ್ಮ ಬೆಂಬಲವಿಲ್ಲ. ಆದರೆ ಶಾಂತಿಯುತ ಧರಣಿಯನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳುತ್ತಿದ್ದಾರೆ.
ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಹಾಗೂ ನೌಕರರ ಒಕ್ಕೂಟದ ಪದಾಧಿಕಾರಿಗಳು ತಮ್ಮ ಸ್ವ ಪ್ರತಿಷ್ಠೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಒಬ್ಬರಿಗೊಬ್ಬರು ನಿಂದಿಸಿಕೊಂಡು ನಾವು ವೇತನ ಹೆಚ್ಚಳ ಮಾಡಿಸುತ್ತೇವೆ ನೀವು ಸಮ್ಮನಿದ್ದು ಬಿಡಿ ಎಂದು ಉತ್ತರನ ಪೌರುಷ ಒಲೆಮುಂದೆ ಎಂಬಂತೆ ಕಳೆದ 5 ವರ್ಷಗಳಿಂದಲೂ ಹೇಳಿಕೊಂಡೆ ಬರುತ್ತಿದ್ದಾರೆ.
ಈ ನಡುವೆ ವಿಧಾನಸಭೆ ಚುನಾವಣೆ ವೇಳೆ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ವೇತನ ಹೆಚ್ಚಳವಾದಗ ನಾವು ಇದನ್ನು ಒಪ್ಪುವುದಿಲ್ಲ ನಮ್ಮ ಕಾರ್ಮಿಕರಿಗೆ ಅನ್ಯಾಯವಾಗಿದೆ. ಶೇ.25ರಷ್ಟು ಕೊಡಲೇಬೇಕು ಎಂದು ಹೌಹಾರಿದ ಮುಖಂಡು ಬಳಿಕ ಅಂದಿನ ಸಿಎಂಗೆ ಹೂ ಗುಚ್ಛ ನೀಡಿ ಬಳಿಕ ನಮ್ಮಿಂದಲೇ ಶೇ.15ರಷ್ಟು ವೇತನ ಹೆಚ್ವಳವಾಯಿತು ಎಂದು ಹೇಳಿಕೊಂಡರು. ಅದನ್ನು ಈಗಲೂ ಹೇಳುತ್ತಿದ್ದಾರೆ.
ಆದರೆ, ಶೇ.15ರಷ್ಟು ವೇತನ ಹೆಚ್ಚಳದ ಘೋಷಣೆ ಆಗಿ ಎರಡು ವರ್ಷಗಳು ಕಳೆಯುತ್ತ ಬಂದರೂ ಈವರೆಗೂ ಇವರಿಗೆ 38 ತಿಂಗಳ ಹಿಂಬಾಕಿ ಕೊಡಿಸಲು ಆಗಿಲ್ಲ. ಕೇಳಿದರೆ ಮತ್ತದೆ ಕಾರಣ ಏನು ನಾವು ಶೇ.15ರಷ್ಟು ವೇತನ ಹೆಚ್ಚಳ ಮಾಡಿಸಿದ್ದೇವೆ ನೀವು ಹಿಂಬಾಕಿ ಕೊಡಿಸಿ ಎಂದು ಜಾರಿಕೊಳ್ಳುವುದು.
ಇತ್ತ ನೌಕರರ ಒಕ್ಕೂಟದ ಪದಾಧಿಕಾರಿಗಳು ನಾವೇಕೆ ಹಿಂಬಾಕಿ ಕೊಡಿಸಬೇಕು. ಶೇ.15ರಷ್ಟು ವೇತನ ಹೆಚ್ಚಳವಾಗಿರುವುದು ನಮ್ಮಿಂದಲೇ ಎಂದು ಹೇಳಿಕೊಂಡು ಬೊಬ್ಬೆ ಹೊಡೆಯುತ್ತಿದ್ದೀರಲ್ಲ ನೀವೇ 38 ತಿಂಗಳ ಹಿಂಬಾಕಿ ಕೊಡಿಸಿ ಏಕೆ ನಿಮ್ಮಿಂದ ಅದು ಸಾಧ್ಯವಾಗುತ್ತಿಲ್ಲವೇ ಎಂದು ಮರು ಪ್ರಶ್ನೆ ಹಾಕಿಕೊಂಡು ಕಾಲ ಕಳೆದುಕೊಂಡೆ ಬರುತ್ತಿರುವುದು.
ಅಂದರೆ ಇಲ್ಲಿ ನೌಕರರು ಸ್ಪಷ್ಟವಾಗಿ ತಿಳಿದುಕೊಳ್ಳಬೇಕಿರುವುದು ಶೇ.15ರಷ್ಟು ವೇತನ ಹೆಚ್ಚಳ ಮಾಡಿದ್ದು ಸರ್ಕಾರ. ಇಲ್ಲಿ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿಯೂ ಅಲ್ಲ ನೌಕರರ ಒಕ್ಕೂಟವು ಅಲ್ಲ ಎಂದು. ಏಕೆಂದರೆ ನಿಜವಾಗಲು ಜಂಟಿ ಕ್ರಿಯಾ ಸಮಿತಿ ಶೇ.15ರಷ್ಟು ವೇತನ ಹೆಚ್ಚಳ ಮಾಡಿಸಿದ್ದರೆ ಈಗಾಗಲೇ 38 ತಿಂಗಳ ಹಿಂಬಾಕಿಯನ್ನು ಕೊಡಿಸುತ್ತಿತ್ತು.
ಆದರೆ ಈವರೆಗೂ ಅದು ಸಾಧ್ಯವಾಗಿಲ್ಲ ಎಂದರೆ ಅಂದಿನ ಬಿಜೆಪಿ ಸರ್ಕಾರವೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಮಾಡಿದೆ ಎಂಬುವುದು ಇಲ್ಲಿ ಸ್ಪಷ್ಟ. ಇನ್ನು ಏನೆ ಒಳ್ಳೆಯದಾದರೂ ಅದರ ಲಾಭ ಪಡೆಯಲು ನಾವೇ ಮಾಡಿಸಿದ್ದು ಎಂದು ಹೇಳುವುದಕ್ಕೆ ಎರಡೂ ಬಣಗಳು ಮುಂದೆ ಬರುತ್ತವೆ. ಆಗಬೇಕಿರುವುದನ್ನು ಏಕೆ ಮಾಡಿಸಿಲ್ಲ ಎಂದರೆ ಒಬ್ಬರಮೇಲೆ ಒಬ್ಬರು ವಿರುದ್ಧ ಹೇಳಿಕೆ ಕೊಡುತ್ತ ಅವರಿಂದಲೇ ಮಾಡಿಸಿಕೊಳ್ಳಿ ಎಂದು ಬೊಬ್ಬೆಹೊಡೆಯುತ್ತಾರೆ.
ಇನ್ನಾದರೂ ಇದೆಲ್ಲವನ್ನು ಬಿಟ್ಟು ನೌಕರರಿಗೆ ಅನುಕೂಲ ಮಾಡುವುದಿದ್ದರೆ ಕಾಳಜಿಯಿಂದ ಮಾಡಿ, ಇಲ್ಲ ಇಂದು ಅಂದರೆ ಮಾ.10ರಂದು ವಕೀಲರೊಬ್ಬರು ನೌಕರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹೆಜ್ಜೆಹಾಕುತ್ತಿದ್ದಾರೆ. ಅವರನ್ನಾದರೂ ಬೆಂಬಲಿಸಿ ಬರಿ ಬೊಗಳೆ ಬಿಟ್ಟುಕೊಂಡು ನೌಕರರ ದಾರಿತಪ್ಪಿಸುವುದನ್ನು ಇನ್ನಾದರೂ ನಿಲ್ಲಿಸಿ ಎಂಬುವುದು ನೊಂದ ನೌಕರರ ಒತ್ತಾಯಪೂರ್ವಕ ಮನವಿ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...