ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರನ್ನು ಹಾಳು ಮಾಡಲು ಹೊರಟಿರುವುದು ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟ ಈ ಎರಡು ಬಣಗಳ ಮುಖಂಡರು.
ಜಂಟಿ ಕ್ರಿಯಾ ಸಮಿತಿ ಬಣದ ಮುಖಂಡರು ಹಾಗೂ ಪದಾಧಿಕಾರಿಗಳು ನೌಕರರ ಒಕ್ಕೂಟದ ಮುಖಂಡರು ಹಾಗೂ ಪದಾಧಿಕಾರಿಗಳ ಬಗ್ಗೆ ಕೆಟ್ಟ ಪದಗಳನ್ನು ಬಳಸಿ ನಿಂದಿಸುವುದು ಅದರಂತೆ ಒಕ್ಕೂಟದ ಮುಖಂಡರು, ಪದಾಧಿಕಾರಿಗಳು ಜಂಟಿ ಕ್ರಿಯಾ ಸಮಿತಿಯವರ ಬಗ್ಗೆ ನಿಂದಿಸುವುದು ಇದೇ ಆಯಿತು.
ಈ ನಡುವೆ ಈ ಬಣಗಳ ಬಡಿದಾಟದಿಂದ ನೌಕರರು ಯಾವರೀತಿ ನಡೆದುಕೊಳ್ಳಬೇಕೋ ಎಂಬ ಗೊಂದಲದಲ್ಲೇ ಪ್ರಮುಖವಾಗಿ ಪಡೆಯಬೇಕಾದ ವೇತನ ಸೌಲಭ್ಯವನ್ನು ಪಡೆಯಲಾಗದೆ ಹೆಣಗಾಡುತ್ತಿದ್ದಾರೆ.
ಇನ್ನು ಈ ಬಣಗಳ ಜತೆಗೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಹಾಗೂ ಆಡಳಿತ ವರ್ಗದ ಸಿಬ್ಬಂದಿಗಳ ಸಂಘಟನೆಗಳು ಕೂಡ ಬಸ್ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ನಮ್ಮ ಬೆಂಬಲವಿಲ್ಲ. ಆದರೆ ಶಾಂತಿಯುತ ಧರಣಿಯನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳುತ್ತಿದ್ದಾರೆ.
ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಹಾಗೂ ನೌಕರರ ಒಕ್ಕೂಟದ ಪದಾಧಿಕಾರಿಗಳು ತಮ್ಮ ಸ್ವ ಪ್ರತಿಷ್ಠೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಒಬ್ಬರಿಗೊಬ್ಬರು ನಿಂದಿಸಿಕೊಂಡು ನಾವು ವೇತನ ಹೆಚ್ಚಳ ಮಾಡಿಸುತ್ತೇವೆ ನೀವು ಸಮ್ಮನಿದ್ದು ಬಿಡಿ ಎಂದು ಉತ್ತರನ ಪೌರುಷ ಒಲೆಮುಂದೆ ಎಂಬಂತೆ ಕಳೆದ 5 ವರ್ಷಗಳಿಂದಲೂ ಹೇಳಿಕೊಂಡೆ ಬರುತ್ತಿದ್ದಾರೆ.
ಈ ನಡುವೆ ವಿಧಾನಸಭೆ ಚುನಾವಣೆ ವೇಳೆ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ವೇತನ ಹೆಚ್ಚಳವಾದಗ ನಾವು ಇದನ್ನು ಒಪ್ಪುವುದಿಲ್ಲ ನಮ್ಮ ಕಾರ್ಮಿಕರಿಗೆ ಅನ್ಯಾಯವಾಗಿದೆ. ಶೇ.25ರಷ್ಟು ಕೊಡಲೇಬೇಕು ಎಂದು ಹೌಹಾರಿದ ಮುಖಂಡು ಬಳಿಕ ಅಂದಿನ ಸಿಎಂಗೆ ಹೂ ಗುಚ್ಛ ನೀಡಿ ಬಳಿಕ ನಮ್ಮಿಂದಲೇ ಶೇ.15ರಷ್ಟು ವೇತನ ಹೆಚ್ವಳವಾಯಿತು ಎಂದು ಹೇಳಿಕೊಂಡರು. ಅದನ್ನು ಈಗಲೂ ಹೇಳುತ್ತಿದ್ದಾರೆ.
ಆದರೆ, ಶೇ.15ರಷ್ಟು ವೇತನ ಹೆಚ್ಚಳದ ಘೋಷಣೆ ಆಗಿ ಎರಡು ವರ್ಷಗಳು ಕಳೆಯುತ್ತ ಬಂದರೂ ಈವರೆಗೂ ಇವರಿಗೆ 38 ತಿಂಗಳ ಹಿಂಬಾಕಿ ಕೊಡಿಸಲು ಆಗಿಲ್ಲ. ಕೇಳಿದರೆ ಮತ್ತದೆ ಕಾರಣ ಏನು ನಾವು ಶೇ.15ರಷ್ಟು ವೇತನ ಹೆಚ್ಚಳ ಮಾಡಿಸಿದ್ದೇವೆ ನೀವು ಹಿಂಬಾಕಿ ಕೊಡಿಸಿ ಎಂದು ಜಾರಿಕೊಳ್ಳುವುದು.
ಇತ್ತ ನೌಕರರ ಒಕ್ಕೂಟದ ಪದಾಧಿಕಾರಿಗಳು ನಾವೇಕೆ ಹಿಂಬಾಕಿ ಕೊಡಿಸಬೇಕು. ಶೇ.15ರಷ್ಟು ವೇತನ ಹೆಚ್ಚಳವಾಗಿರುವುದು ನಮ್ಮಿಂದಲೇ ಎಂದು ಹೇಳಿಕೊಂಡು ಬೊಬ್ಬೆ ಹೊಡೆಯುತ್ತಿದ್ದೀರಲ್ಲ ನೀವೇ 38 ತಿಂಗಳ ಹಿಂಬಾಕಿ ಕೊಡಿಸಿ ಏಕೆ ನಿಮ್ಮಿಂದ ಅದು ಸಾಧ್ಯವಾಗುತ್ತಿಲ್ಲವೇ ಎಂದು ಮರು ಪ್ರಶ್ನೆ ಹಾಕಿಕೊಂಡು ಕಾಲ ಕಳೆದುಕೊಂಡೆ ಬರುತ್ತಿರುವುದು.
ಅಂದರೆ ಇಲ್ಲಿ ನೌಕರರು ಸ್ಪಷ್ಟವಾಗಿ ತಿಳಿದುಕೊಳ್ಳಬೇಕಿರುವುದು ಶೇ.15ರಷ್ಟು ವೇತನ ಹೆಚ್ಚಳ ಮಾಡಿದ್ದು ಸರ್ಕಾರ. ಇಲ್ಲಿ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿಯೂ ಅಲ್ಲ ನೌಕರರ ಒಕ್ಕೂಟವು ಅಲ್ಲ ಎಂದು. ಏಕೆಂದರೆ ನಿಜವಾಗಲು ಜಂಟಿ ಕ್ರಿಯಾ ಸಮಿತಿ ಶೇ.15ರಷ್ಟು ವೇತನ ಹೆಚ್ಚಳ ಮಾಡಿಸಿದ್ದರೆ ಈಗಾಗಲೇ 38 ತಿಂಗಳ ಹಿಂಬಾಕಿಯನ್ನು ಕೊಡಿಸುತ್ತಿತ್ತು.
ಆದರೆ ಈವರೆಗೂ ಅದು ಸಾಧ್ಯವಾಗಿಲ್ಲ ಎಂದರೆ ಅಂದಿನ ಬಿಜೆಪಿ ಸರ್ಕಾರವೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಮಾಡಿದೆ ಎಂಬುವುದು ಇಲ್ಲಿ ಸ್ಪಷ್ಟ. ಇನ್ನು ಏನೆ ಒಳ್ಳೆಯದಾದರೂ ಅದರ ಲಾಭ ಪಡೆಯಲು ನಾವೇ ಮಾಡಿಸಿದ್ದು ಎಂದು ಹೇಳುವುದಕ್ಕೆ ಎರಡೂ ಬಣಗಳು ಮುಂದೆ ಬರುತ್ತವೆ. ಆಗಬೇಕಿರುವುದನ್ನು ಏಕೆ ಮಾಡಿಸಿಲ್ಲ ಎಂದರೆ ಒಬ್ಬರಮೇಲೆ ಒಬ್ಬರು ವಿರುದ್ಧ ಹೇಳಿಕೆ ಕೊಡುತ್ತ ಅವರಿಂದಲೇ ಮಾಡಿಸಿಕೊಳ್ಳಿ ಎಂದು ಬೊಬ್ಬೆಹೊಡೆಯುತ್ತಾರೆ.
ಇನ್ನಾದರೂ ಇದೆಲ್ಲವನ್ನು ಬಿಟ್ಟು ನೌಕರರಿಗೆ ಅನುಕೂಲ ಮಾಡುವುದಿದ್ದರೆ ಕಾಳಜಿಯಿಂದ ಮಾಡಿ, ಇಲ್ಲ ಇಂದು ಅಂದರೆ ಮಾ.10ರಂದು ವಕೀಲರೊಬ್ಬರು ನೌಕರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹೆಜ್ಜೆಹಾಕುತ್ತಿದ್ದಾರೆ. ಅವರನ್ನಾದರೂ ಬೆಂಬಲಿಸಿ ಬರಿ ಬೊಗಳೆ ಬಿಟ್ಟುಕೊಂಡು ನೌಕರರ ದಾರಿತಪ್ಪಿಸುವುದನ್ನು ಇನ್ನಾದರೂ ನಿಲ್ಲಿಸಿ ಎಂಬುವುದು ನೊಂದ ನೌಕರರ ಒತ್ತಾಯಪೂರ್ವಕ ಮನವಿ.
Related

You Might Also Like
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...
ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು
ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ...
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...
ಬೀಡನಹಳ್ಳಿ: ಸಂಭ್ರಮದ ಚಾಮುಂಡೇಶ್ವರಿ ವರ್ಧಂತಿ – ಭಕ್ತರಿಗೆ ಅನ್ನಸಂತರ್ಪಣೆ
ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು...