NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನೌಕರರ ಸಂಘ : ಬೇಡಿಕೆ ಈಡೇರದಿದ್ದರೆ ಕೆಲಸಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ – ಖಡಕ್‌ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಇನ್ನು ಏಳು ದಿನಗಳೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್‌ 1ರಿಂದ ಎಲ್ಲ ಸರ್ಕಾರಿ ನೌಕರರು ಮತ್ತು ಅನುದಾನಿತ ಸಂಸ್ಥೆಗಳ ನೌಕರರು ಕೆಲಸಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಈ ವರ್ಷದ ಬಜೆಟ್​ನಲ್ಲಿ 7ನೇ ವೇತನ ಆಯೋಗ ಹಾಗೂ ಒಪಿಎಸ್​ ಪಿಂಚಣಿ ಯೋಜನೆಯ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳವಾರ ಸರ್ಕಾರಿ ನೌಕರರ ಸಂಘ ಸಭೆ ನಡೆಸಿದ್ದು, ಇನ್ನು ಏಳು ದಿನಗಳಲ್ಲಿ 7ನೇ ವೇತನ ಆಯೋಗ ಹಾಗೂ ಹಳೆಯ​ ಪಿಂಚಿಣಿ ಯೋಜನೆಯನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿದೆ. ಒಂದು ವೇಳೆ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿಗೆ ಹೋರಾಟ ಮಾಡುವುದಾಗಿ ಸಭೆಯಲ್ಲಿ ನಿರ್ಧರಿಸಿದೆ.

ಸರ್ಕಾರಿ ನೌಕರರ ಸಂಘದ ತುರ್ತು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 7ನೇ ವೇತನ ಆಯೋಗ ಹಾಗೂ ಒಪಿಎಸ್​ ಪಿಂಚಣಿ ಯೋಜನೆ ಅನುಷ್ಠಾನ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಫೆಬ್ರವರಿ 22ರಿಂದ 28ರವರೆಗೆ ಏಳು ದಿನಗಳ ಕಾಲ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಒಂದು ವೇಳೆ ಸರ್ಕಾರ ಗಡುವಿಗೆ ಸ್ಪಂದಿಸದೇ ಹೋದರೆ ಅನಿರ್ಧಿಷ್ಟಾವಧಿ ಹೋರಾಟ ಮಾಡುತ್ತೇವೆ ಎಂದು ನೌಕರರ ಸಂಘ ತಿಳಿಸಿದೆ.

ನೌಕರರ ಸಂಘ ಗಡುವು ನೀಡಿರುವ 7 ದಿನಗಳಲ್ಲಿ ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಮಾರ್ಚ್​ 1ರಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಸರ್ಕಾರಿ ನೌಕರರ ಸಂಘದ ತುರ್ತು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಅಲ್ಲದೆ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರವನ್ನು ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರಿ ನೌಕರ ಸಂಘದ ಕಚೇರಿ ಮುಂದೆ ಜರುಗುತ್ತಿರುವ ಸಭೆಯಲ್ಲಿ ಸುಮಾರು ಆರು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದರು.

ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಈಡೇರಿಸಬೇಕು. ಫೆಬ್ರವರಿ 28ರೊಳಗೆ ಸರ್ಕಾರಿ ನೌಕರರ ಸಂಘದ‌ ಜತೆ ಮಾತನಾಡಬೇಕು. ಬೇಡಿಕೆ ಈಡೇರಿಸದೇ ಹೋದಲ್ಲಿ ಮಾರ್ಚ್​ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲಾಗುವುದು ಎಂದು ಬಹಿರಂಗ ಸಭೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು, ಬಿಬಿಎಂಪಿ, ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ನಿವೃತ್ತ ನೌಕರರಿಂದಲೂ ಬೆಂಬಲ: ಈ ಮುಷ್ಕರಕ್ಕೆ ನಿವೃತ್ತ ನೌಕರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸುಮಾರು ಆರು ಲಕ್ಷ ನಿವೃತ್ತ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಇನ್ನು ಇತ್ತ ಸರ್ಕಾರ 7 ದಿನಗಳೊಳಗೆ ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮಾರ್ಚ್​ 1ರಿಂದ ಬೆಂಗಳೂರಿನಲ್ಲಿ ಕಸ ಎತ್ತುವುದಿಲ್ಲ ಎಂದು ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ‌ ಅಮೃತ್ ರಾಜ್ ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು