NEWSಕೃಷಿನಮ್ಮಜಿಲ್ಲೆಶಿಕ್ಷಣ-

ಮನುಷ್ಯನಿಗೆ ಆಹಾರ ಎಷ್ಟು ಮುಖ್ಯವೋ, ಪರಿಸರವು ಅಷ್ಟೇ ಮುಖ್ಯ: ಕುರುಬೂರ್ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೇವರಕಾಡು, ಗೋಮಾಳ, ಮೀಸಲು ಅರಣ್ಯ ಕಾಣೆಯಾಗುತ್ತಿವೆ ಹೀಗಾದರೆ ಪರಿಸರ ಉಳಿಯಲು ಹೇಗೆ ಸಾಧ್ಯ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾಧ ರೈತರತ್ನ ಕುರುಬೂರ್ ಶಾಂತಕುಮಾರ್ ಆತಂಕ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲೆಯ ವರರ್ಕೂಡಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಇಂದು ವಿಶ್ವಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಗಿಡ ನೆಟ್ಟು ಮರ ಬೆಳೆಸಿ ಪರಿಸರ ರಕ್ಷಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನುಷ್ಯನಿಗೆ ಆಹಾರ ಎಷ್ಟು ಮುಖ್ಯವೋ, ಪರಿಸರವು ಅಷ್ಟೇ ಮುಖ್ಯವಾಗಿದೆ. ಜನಸಂಖ್ಯೆ ಏರಿಕೆಗೆ ಅನುಗುಣವಾಗಿ ಪರಿಸರ ಬೆಳೆಯುತ್ತಿಲ್ಲದ ಅರಣ್ಯ ಪ್ರದೇಶ ಕಡಿಮೆಯಾಗುತ್ತಿದೆ, ಕಾರಣ ಹವಾಗುಣ ವೈಪರಿತ್ಯವಾಗುತ್ತಿದೆ ಎಂದು ಹೇಳಿದರು.

ಇನ್ನು ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಜನ ಜಾಗೃತಿ ಮೂಡಿಸಬೇಕು. ಪರಿಸರ ಸಂಪತ್ತು ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಮಳೆ ಮಾರುತ ಬದಲಾಗುತ್ತಿದೆ. ಅಂತರ್ಜಲ ಕುಗ್ಗುತಿದೆ. ಇದು ಕೃಷಿ ಕ್ಷೇತ್ರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ, ಅದಕ್ಕಾಗಿ ರೈತರು ಜಾಗೃತರಾಗಿ ಪರಿಸರ ಸಂರಕ್ಷಿಸಲು ಮುಂದಾಗಬೇಕು ಎಂದರು.

ನೂರಾರು ಹಸಿರು ಗಿಡಗಳನ್ನು ನೆಟ್ಟು ರೈತ ಸಂಕುಲಕ್ಕೆ ಸಂದೇಶ ಸಾರಿದ ಪರಿಸರ ಸ್ನೇಹಿ ರೈತ ಹುಣಸೂರಿನ ತಮ್ಮಯ್ಯ ಮಾತನಾಡಿ, ಪರಿಸರ ದಿನ ನಾಮ್‌ಕೇವಾಸ್ತೆ ಆಗಬಾರದು. ಪರಿಸರ, ಪ್ರಕೃತಿ ಆರೋಗ್ಯ ಚೆನ್ನಾಗಿದ್ದರೆ ನಾವೆಲ್ಲ ನೆಮ್ಮದಿ ಹಾಗೂ ಶಾಂತಿಯಿಂದ ಆರೋಗ್ಯವಂತರಾಗಿ ಬಾಳಬಹುದು ಎಂದರು.

ನಾವು ಮುಂದಿನ ತಲೆಮಾರಿಗೆ ಆಸ್ತಿ, ಹಣ ಬಿಟ್ಟು ಹೋಗುವ ಬದಲು ಉತ್ತಮ ಪರಿಸರ ಪ್ರಕೃತಿಯನ್ನು ಕಟ್ಟಿ ಬಿಟ್ಟು ಹೋದರೆ ನಮ್ಮ ಜೀವನ ಸಾರ್ಥಕ. ಪರಿಸರ, ಪ್ರಕೃತಿಗೆ ಮನುಷ್ಯನ ಎಲ್ಲ ಆಸೆಗಳನ್ನು ಪೂರೈಸುವ ಶಕ್ತಿ ಇದೆ. ಆದರೆ ದುರಾಸೆಗಳನ್ನು ಅಲ್ಲ ನಮಗೆ ಜನ್ಮ ಕೊಟ್ಟ ತಂದೆ ತಾಯಿಗಳನ್ನು ಕಳೆದುಕೊಂಡರೆ ಮತ್ತೆ ಸಿಗುವುದಿಲ್ಲ ಅದೇ ರೀತಿ ಪ್ರಕೃತಿ ಪರಿಸರವನ್ನು ನಾಶ ಮಾಡಿದರೆ ನಮ್ಮ ಆರೋಗ್ಯ ಉತ್ತಮ ಸ್ಥಿತಿಯಲ್ಲಿ ಇರಲು ಸಾಧ್ಯವಿಲ್ಲ ಇದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡರೆ ಸಾರ್ಥಕ ಎಂದರು.

ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಗಿಡ ಮರ ನೆಟ್ಟು ರಕ್ಷಣೆ ಮಾಡುವ ಕಾರ್ಯವೆಸಗಿದರೆ ಉತ್ತಮ ಸಮಾಜಕ್ಕೆ ಕೊಡುಗೆಯಾಗುತ್ತದೆ ಎಂದು ತಿಳಿಸಿದರು.

ಸಾಮಾಜಿಕ ವಲಯ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜು ಮಾತನಾಡಿ, ಭಾರತ ದೇಶದಲ್ಲಿ ಶೇ.33ರಷ್ಟು ಅರಣ್ಯ ಪ್ರದೇಶ ಇರಬೇಕು. ಈಗ 21% ಗೆ ಇಳಿಕೆಯಾಗಿದೆ. ಕಾಡಿನಲ್ಲಿ ವಾಸ ಮಾಡುವ ವನ್ಯಪ್ರಾಣಿಗಳು ಪರಿಸರಕ್ಕೆ ಅತ್ಯವಶ್ಯಕವಾಗಿದೆ. ಪರಿಸರ ಜಾಗೃತಿ ಮೂಡಿಸಲು ಶಿಕ್ಷಣ ಸಂಸ್ಥೆಗಳು ಸಂಘ ಸಂಸ್ಥೆಗಳು ಹೆಚ್ಚು ಒತ್ತು ನೀಡಬೇಕು ಎಂದರು.

ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯೋಪಾಧ್ಯಾಯ ನಿಂಗಪ್ಪನವರು ಪರಿಸರ ಮಹತ್ವದ ಬಗ್ಗೆ ತಿಳಿಸಿದರು. ವಸತಿ ಶಾಲೆಯ ವಿದ್ಯಾರ್ಥಿಗಳು, ಮೈಸೂರು ಚಾಮರಾಜನಗರ ಜಿಲ್ಲೆಯ ರೈತ ಸಂಘಟನೆಗಳ ಪದಾಧಿಕಾರಿಗಳು ಶಾಲಾ ಆವರಣದಲ್ಲಿ ನೂರಾರು ಗಿಡ ನೆಟ್ಟು ಪರಿಸರದ ಬಗ್ಗೆ ಕಾಳಜಿ ಮೆರೆದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಸ್ವಾಗತಿಸಿದರೆ, ಅತ್ತಹಳ್ಳಿ ದೇವರಾಜ್, ಕಿರಗಸೂರ್ ಶಂಕರ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಮೊರಾಜಿ ದೇಸಾಯಿ ವಸತಿ ಶಾಲೆಯ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಒಂದೊಂದು ಹಣ್ಣಿನ ಗಿಡವನ್ನು ಸಾಮಾಜಿಕ ವಲಯ ಅರಣ್ಯ ಇಲಾಖೆ ವತಿಯಿಂದ ನೆನಪಿಗಾಗಿ ನೀಡಲಾಯಿತು.‌

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ