NEWSನಮ್ಮಜಿಲ್ಲೆನಮ್ಮರಾಜ್ಯ

ಫೆ.19ರ ಸಾರಿಗೆ ನೌಕರರ ಪ್ರತಿಭಟನೆಗೆ EPS-95, BMTC KSRTC ನಿನೌ ಸಂಘ ಬೆಂಬಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನಗಳ ಜಂಟಿ ಕ್ರಿಯಾ ಸಮಿತಿ ಇದೇ ಫೆ.19ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ “ಬೆಂಗಳೂರು ಚಲೋ” ಬೃಹತ್ ಪ್ರತಿಭಟನೆಗೆ ಇಪಿಎಸ್-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ನಂಜುಂಡೇಗೌಡ ಅವರು, ಸಾರಿಗೆ ಸಂಸ್ಥೆಯ ನೌಕರರಿಗೆ (ನಿವೃತ್ತಿ ನೌಕರರು ಸೇರಿ) ನೀಡಬೇಕಾದ 38 ತಿಂಗಳ ವೇತನ ಪರಿಷ್ಕರಣಾ ಬಾಗಿ ಹಾಗೂ ಜನವರಿ 01, 2024 ರಿಂದ ಅನ್ವಯವಾಗುವಂತೆ ಕೈಗಾರಿಕಾ ಒಪ್ಪಂದವನ್ನು ರಾಜ್ಯ ಸರ್ಕಾರ ಕಾರ್ಮಿಕ ಮುಖಂಡರ ಜತೆ ಚರ್ಚಿಸಿ, ಕೂಡಲೇ ಜಾರಿ ಮಾಡಬೇಕು ಎಂದು ಅಗ್ರಹಿಸಿ ಜಿಂಟಿ ಕ್ರಿಯಾ ಸಮಿತಿ ನೀಡಿರುವ ಕರೆಗೆ ನಾವು ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ಇದೇ ಫೆ.13ರಂದು ಇಪಿಎಸ್-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆಯನ್ನು ನಗರದ ಕಾವೇರಿ ಭವನದ ಹಿಂಭಾಗದ ಕಟ್ಟಡದಲ್ಲಿ ನಡೆಸಿದ್ದು, ಸಂಘದ ಕಾರ್ಯಕಾರಿ ಸಮಿತಿಯು ಮಹತ್ವದ ನಿರ್ಣಯವನ್ನು ಕೈಗೊಂಡಿದೆ.

ಫೆ. 19ರಂದು ಫ್ರೀಡಂ ಪಾರ್ಕಿನಲ್ಲಿ ಜರುಗುವ 4 ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿಯ ಸಮಾವೇಶಕ್ಕೆ ತನ್ನ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದು, 2020ರ ನಂತರ ನಿವೃತ್ತರಾದ ಸಾವಿರಾರು ಸಂಖ್ಯೆಯ ನಿವೃತ್ತ ನೌಕರರು, ವೇತನ ಪರಿಷ್ಕರಣಾ ವ್ಯಾಪ್ತಿಯಲ್ಲಿ ಬರುತ್ತಿದ್ದು, ಹಾಗಾಗಿ ಹಾಲಿ ಸೇವೆಯಲ್ಲಿರುವ ನಮ್ಮ ಸಹೋದರ ನೌಕರರಿಗೆ ನಾವೆಲ್ಲರೂ ಬೆನ್ನೆಲುಬಾಗಿ ನಿಂತು ಆ ದಿನದ ಪ್ರತಿಭಟನೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ನಿರ್ಧರಿಸಲಾಗಿದೆ.

ರಾಜ್ಯ ಸರ್ಕಾರವು ಎಸ್ಮಾ ಕಾಯಿದೆ, ವೇತನ ಕಡಿತ, ವಜಾ ಎಂದು ಸೇವೆಯಲ್ಲಿರುವ ನೌಕರರಿಗೆ ಬೆದರಿಕೆ ತಂತ್ರ ಬಳಸಿ ಬಾಯಿ ಮುಚ್ಚಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದು, ನೌಕರರು ಒಂದು ಕಡೆ ತನ್ನ ಕುಟುಂಬ ನಿರ್ವಹಣೆ ಬದುಕಿನ ಆಶ್ರಯಕ್ಕಾಗಿ ಉದ್ಯೋಗ, ಆರ್ಥಿಕ ಸಂಕಷ್ಟ ಇವುಗಳ ಮಧ್ಯೆ ಸಿಲುಕಿ ಹೈರಾಣಾಗಿ ಹೋಗಿದ್ದಾನೆ. ನಿವೃತ್ತ ನೌಕರರಾದ ನಮಗೆ ಈ ಯಾವ ಬೆದರಿಕೆಗಳೂ ಅನ್ವಯವಾಗುವುದಿಲ್ಲ. ಇವೆಲ್ಲವನ್ನೂ ನಾವು ದಾಟಿ ಬಂದಿದ್ದು, ಹೋರಾಟಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ಹೇಳಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು: ಚಾಲಕನಿಗೆ ಗಂಭೀರ ಗಾಯ KSRTC: ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತಾ ಅವಧಿ ಏ.10ರವರೆಗೆ ವಿಸ್ತರಿಸಿ ಆದೇಶ ಬಟ್ಟೆ ಬ್ಯಾಗ್‌ ಖರೀದಿ ಅವ್ಯವಹಾರ ಪ್ರಕರಣ: ರೋಹಿಣಿ ಸಿಂಧೂರಿಗೆ ಸಂಕಷ್ಟ NWKRTC ಹಾವೇರಿ: ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಪ್ಲಾಟ್‌ಫಾರಂನಲ್ಲಿ ನಿಂತಿದ್ದವರಿಗೆ ಡಿಕ್ಕಿ- ಮಗು ಸಾವು ಗ್ಯಾಸ್‌ ಸಿಲಿಂಡರ್‌ಗೆ 195.50 ರೂ ಏರಿಕೆ: ಶಾಕ್‌ಕೊಟ್ಟ ಕೇಂದ್ರ ಸರ್ಕಾರ KSRTC: ಏ.6ರ ಸಭೆಯಲ್ಲಿ ನೌಕರರ ಬೇಡಿಕೆ ಈಡೇರದಿದ್ದರೆ 8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ -ಕೂಟದ ಸಭೆಯಲ್ಲಿ ನ... ಡೀಸೆಲ್‌ ಟ್ಯಾಂಕರ್‌-ಕಾರಿನ ನಡುವೆ ಭೀಕರ ಅಪಘಾತ: ತಪ್ಪಿದ ಭಾರಿ ದುರಂತ KSRTC: ಸಿಬ್ಬಂದಿಗಳಿಗೆ 38 ತಿಂಗಳ ಹಿಂಬಾಕಿ, ವೇತನ ಹೆಚ್ಚಳ ಮಾಡೋಕೆ ಹಣವಿಲ್ಲವೆನ್ನೋ ಸಚಿವರಿಗೆ ಅನಾವಶ್ಯ ಖರ್ಚು ಮಾಡೋಕ... ರೈತರತ್ನ ಕುರುಬೂರು ಶಾಂತಕುಮಾರ್ ಹುಟ್ಟು ಹಬ್ಬ ನೆನಪಿಗಾಗಿ ಕೃಷಿ ಕಾರ್ಮಿಕ ಮಹಿಳೆಯರಿಗೆ ಸನ್ಮಾನ ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟ...