NEWSನಮ್ಮಜಿಲ್ಲೆನಮ್ಮರಾಜ್ಯ

ಅ.9ರಂದು ಫ್ರೀಡಂ ಪಾರ್ಕ್‌ನಲ್ಲಿ EPS ಪಿಂಚಣಿ ದಾರರ ಬೃಹತ್‌ ಪ್ರತಿಭಟನೆ: BMTC – KSRTC ನಿವೃತ್ತ ನೌ.ಸಂ. ಅಧ್ಯಕ್ಷ ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 238ನೇ ಸಿಬಿಟಿ ಸಭೆ ಅಕ್ಟೋಬರ್ 11, 12, 2025 ರಂದು ಬೆಂಗಳೂರುನಲ್ಲಿ ನಡೆಯುತ್ತಿದ್ದು, ಅಂದಿನ ಸಭೆಯ ಕಾರ್ಯ ಸೂಚಿ (ಅಜಾಂಡ) ಇನ್ನೂ ಪ್ರಕಟಗೊಂಡಿಲ್ಲ ಎಂದು ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಇನ್ನು ಈ ನಡುವೆ ಇಪಿಎಸ್ ನಿವೃತ್ತರ ಪಾಲಿಗೆ ಇದು ನಿರ್ಣಾಯಕ ಸಭೆಯಾಗಿರುವುದರಿಂದ ಎಲ್ಲ ಇಪಿಎಸ್ ನಿವೃತ್ತರು ಕಾರ್ಯಪ್ರವೃತ್ತರಾಗಿ ಕನಿಷ್ಠ ಪಿಂಚಣಿ ಸೇರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ಮೈದಾನದಲ್ಲಿ ಅಕ್ಟೋಬರ್ 09ರಂದು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಒಟ್ಟು 41 ಸದಸ್ಯರನ್ನು ಹೊಂದಿರುವ ಸಿಬಿಟಿ ಸಭೆಯಲ್ಲಿ ಕೇಂದ್ರ ಕಾರ್ಮಿಕ ಸಚಿವ ಮುನ್ಸೂಖ್ ಮಾಂಡವಿಯ, ಕೇಂದ್ರೀಯ ಮುಖ್ಯ ಭವಿಷ್ಯ ನಿಧಿ ಪ್ರಾಧಿಕಾರಸ್ಥರು, ಆದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ 5 ಜನ ಕೇಂದ್ರ ಸರ್ಕಾರದ ಪ್ರತಿನಿಧಿಗಳು, 15 ಜನ ರಾಜ್ಯ ಸರ್ಕಾರದ ಪ್ರತಿನಿಧಿಗಳು, 10 ಜನ ಉದ್ಯೋಗದಾತ ಪ್ರತಿನಿಧಿಗಳು, 08 ಜನ ಕಾರ್ಮಿಕ ಪ್ರತಿನಿಧಿಗಳು ಸಭೆಯಲ್ಲಿರುತ್ತಾರೆ.

ಇನ್ನು ನೌಕರರ ಪಿಂಚಣಿ ಕಾಯಿದೆ ಅನ್ವಯ ಸಿಬಿಟಿ ರಚನೆಯಾಗಿದ್ದು, ಇಪಿಎಸ್ ವ್ಯಾಪ್ತಿಯಲ್ಲಿ ಬರುವ ಕೋಟ್ಯಂತರ ದುಡಿಯುವ ವರ್ಗದ ನೌಕರರಿಂದ ದೇಣಿಗೆ ಸ್ವೀಕರಿಸಿ, ನೌಕರರ ಕಲ್ಯಾಣ ರೂಪಿಸುವುದು ಸಿಬಿಟಿಯ ಉದ್ದೇಶವಾಗಿತ್ತು. ಆದರೆ, ನಿವೃತ್ತರ ಭವಿಷ್ಯ ಎಷ್ಟರ ಮಟ್ಟಿಗೆ ಉದ್ದಾರವಾಗಿದೆ ಎಂಬುದು ಈಗ ಯಕ್ಷಪ್ರಶ್ನೆಯಾಗಿದೆ.

ಕಳೆದೊಂದು ದಶಕದಿಂದ ಇಪಿಎಸ್ ನಿವೃತ್ತರು ನಡೆಸಿದ ಹೋರಾಟಕ್ಕೆ ದೊರೆತ ಪ್ರತಿಫಲ ಶೂನ್ಯ. ಪ್ರಮುಖವಾಗಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರು ಸಾರ್ವಜನಿಕ ಸೇವೆಯಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹಗಲಿರುಳೆನ್ನದೇ ಸೇವೆ ಸಲ್ಲಿಸಿದ್ದು, ಅವರ ಇಂದಿನ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿದೆ.

ಜನಪ್ರತಿನಿಧಿಗಳು ನಮ್ಮ ಮೂಲಭೂತ ಬೇಡಿಕೆಗಳಿಗೆ ಸ್ಪಂದಿಸದೆ ಇರುವುದು ಅತ್ಯಂತ ದುರಂತದ ಸಂಗತಿ. ಏನೇ ಆಗಲಿ ಈ ಬಾರಿ ತಕ್ಕ ಪಾಠ ಕಲಿಸಿಯೆ ತೀರೋಣ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇಪಿಎಸ್ ನಿವೃತ್ತರನ್ನು ಬಲಿಕೊಟ್ಟು, ನಮ್ಮ ಎಲ್ಲ ಸವಲತ್ತುಗಳನ್ನು ಅನುಭವಿಸುತ್ತಿರುವುದು ನೋವಿನ ಸಂಗತಿ.

ಲಗಾಯ್ತೀನಿಂದಲೂ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಸಂಘದ ಜತೆ ಬೆಂಬಲವಾಗಿ ನಿಂತ ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಟ್ರಸ್ಟಿನ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಬಾರಿ ನಮ್ಮ ಪ್ರತಿಭಟನಾ ಸಭೆಯ ಸಂಪೂರ್ಣ ನಿರ್ವಹಣೆ ನಡೆಸಲಿದ್ದಾರೆ.

ಆಗಿನ ಕಾಲದಲ್ಲಿ ಭಗವಾನ್ ಬುದ್ಧ ಹಾಗೂ ಬಸವಣ್ಣ ಬೋಧಿಸಿದ ತತ್ವ “ಸರ್ವರು ಸಮಾನರು, ಸರ್ವರಿಗೂ ಸಮ ಪಾಲು, ಸಮ ಬಾಳು” ಈ ಸಿದ್ಧಾಂತ ಇಂದಿಗೂ ಪ್ರಸ್ತುತ. ರಾಜ್ಯಾದ್ಯಂತ ಇರುವ ಎಲ್ಲ ಸಂಘಟನೆಗಳು ಈ ಸಮಾವೇಶದಲ್ಲಿ ಭಾಗವಹಿಸಲು ಅವಕಾಶವಿದೆ. ಹೀಗಾಗಿ ಈ ಬಾರಿ “ಮಾಡು ಇಲ್ಲವೇ ಮಡಿ ಹೋರಾಟ”ಕ್ಕೆ ಮುಂದಾಗೋಣ ಎಲ್ಲ ಬನ್ನಿ ಎಂದು ಕಾರ್ಯಕಾರಿ ಸಮಿತಿ ಪರವಾಗಿ ನಂಜುಂಡೇಗೌಡ ಮನವಿ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ