ಏ.28ರಂದು ಕನಿಷ್ಠ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ನಂಜುಂಡೇಗೌಡ

ಬೆಂಗಳೂರು: ಕನಿಷ್ಠ ಪಿಂಚಣಿಗೆ ಆಗ್ರಹಿಸಿ ಇದೇ ಏ.28ರಂದು “ನಿಧಿ ಆಪ್ಕೆ ನಿಕಟ್” ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ಕಳೆದ ಸೆಪ್ಟೆಂಬರ್ 01, 2014ರ ನಂತರ ನಿವೃತ್ತರಾದ ಇಪಿಎಸ್ ಪಿಂಚಣಿದಾರರಿಗೆ ಸಂಬಂಧಿಸಿದಂತೆ, ಸರ್ವೋಚ್ಚ ನ್ಯಾಯಾಲಯವು ನವೆಂಬರ್ 04, 2022 ರಂದು ನೀಡಿದ ತನ್ನ ತೀರ್ಪಿನಲ್ಲಿ, ಕಂಡಿಕೆ 44 (iv) ರಲ್ಲಿ ಸ್ಪಷ್ಟ ಆದೇಶ ನೀಡಿ, ವಿನಾಯ್ತಿ ಅಥವಾ ವಿನಾಯ್ತಿಯೇತರ ( exempted or unexempted) ಸಂಸ್ಥೆಯ ಎಲ್ಲ ನೌಕರರಿಗೆ ಅಧಿಕ ಪಿಂಚಣಿಯನ್ನು ಲೆಕ್ಕಾಚಾರ ಮಾಡಿ ನೀಡಬೇಕೆಂದು ಉಲ್ಲೇಖಿಸಿದೆ.
ಅದರಂತೆ ಇಪಿಎಫ್ಒ ಅಧಿಕಾರಿಗಳು ನಮ್ಮಿಂದ ಜಂಟಿ ಆಯ್ಕೆ ಪತ್ರ ಪಡೆದು, ಎರಡುವರೆ ವರ್ಷಗಳ ನಂತರ, ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿ, ವಿನಾಯ್ತಿ ಸಂಸ್ಥೆಗಳ ನಿವೃತ್ತ ನೌಕರರ ಜಂಟಿ ಆಯ್ಕೆ ಪತ್ರಗಳನ್ನು ತಿರಸ್ಕರಿಸಿ, ಅಧಿಕಾರಿಗಳು ನೀಡಿರುವ ಹಿಂಬರಹ ಅಕ್ಷಮ್ಯ ಅಪರಾದವಾಗಿದೆ. ಮಾತ್ರವಲ್ಲದೇ ನ್ಯಾಯಾಲಯದ ತೀರ್ಪಿನ ಉಲ್ಲಂಘನೆಯಾಗಿದೆ.
ಹೀಗಾಗಿ ಅಧಿಕ ಪಿಂಚಣಿ ಬಯಸಿ, ಜಂಟಿ ಆಯ್ಕೆ ಪತ್ರ ಸಲ್ಲಿಸಿರುವ ಎಲ್ಲ ಇಪಿಎಸ್ ಪಿಂಚಣಿದಾರರು ಈ ಹೋರಾಟದಲ್ಲಿ ಭಾಗಿಯಾಗಬೇಕು. ಈ ಸಂಬಂಧ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಪಿಎಫ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರೆ ನೀಡಿದ್ದಾರೆ.
ಕನಿಷ್ಠ ಹೆಚ್ಚುವರಿ ಪಿಂಚಣಿಗೆ ₹7,500 + ಭತ್ಯೆ, ವೈದ್ಯಕೀಯ ಸೌಲಭ್ಯವನ್ನು ನೀಡಬೇಕೆಂದು ಆಗ್ರಹಿಸಿ, ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥ ಕಮಾಂಡರ್ ಅಶೋಕ್ ರಾಹುತ್ ಅವರ ನೇತೃತ್ವದಲ್ಲಿ, ಇಪಿಎಸ್ ನಿವೃತ್ತರ ಪರ ದೇಶಾದ್ಯಂತ ನಡೆಯುತ್ತಿರುವ ಹೋರಾಟ ಅಂತಿಮ ಘಟ್ಟ ತಲುಪಿದೆ.
ಇನ್ನು ನಮ್ಮ ರಾಜ್ಯದವರೇ ಆದ ಬಸವರಾಜ ಬೊಮ್ಮಾಯಿ ಅವರು ಪಾರ್ಲಿಮೆಂಟರಿ ಕಮಿಟಿ ಅಧ್ಯಕ್ಷರಾಗಿದ್ದು, ಈ ಕಮಿಟಿಯು ಕೇಂದ್ರ ಸರ್ಕಾರಕ್ಕೆ ಇಪಿಎಸ್ ನಿವೃತ್ತರ ಪರವಾಗಿ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಿದ್ದು, ಈಗ ನೀಡುತ್ತಿರುವ ಕನಿಷ್ಠ ಪಿಂಚಣಿ ₹1,000 ದಿಂದ ₹7,500ಕ್ಕೆ ನಿಗದಿಪಡಿಸಿ, ನಿಯತಕಾಲಿಕ ಭತ್ಯೆ ಸೇರಿಸಿ, ಪಿಂಚಣಿ ನೀಡಬೇಕೆಂದು ಶಿಫಾರಸ್ಸು ಮಾಡಿದ್ದು, ಪ್ರಸ್ತಾವನೆ ಕೇಂದ್ರ ಸರ್ಕಾರದ ಉನ್ನತ ಸಚಿವರ ಕಾರ್ಯಾಲಯದಲ್ಲಿ ಸಕಾರಾತ್ಮಕ ಪರಿಶೀಲನೆಯಲ್ಲಿದೆ. ಇದು ಜಾರಿಯಾದಲ್ಲಿ, ಎಲ್ಲ 78 ಲಕ್ಷ್ಯ ಇಪಿಎಸ್ ನಿವೃತ್ತರಿಗೆ ಅನ್ವಯವಾಗಲಿದೆ.(ಯಾರು ಸಹ ಯುಟ್ಯೂಬ್ ಸಂದೇಶಗಳನ್ನು ನಂಬಬೇಡಿ) ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್ಆರ್ಟಿಸಿ ಹಾಗೂ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್, ಚಿಕ್ಕಬಳ್ಳಾಪುರ ವತಿಯಿಂದ ಇಪಿಎಸ್ ನಿವೃತ್ತರ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.
ನಮ್ಮ ಕೂಗು ದೆಹಲಿಗೆ ತಲಪಬೇಕು, ಹಾಗಾಗಿ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ ಈ ಎರಡು ಅಂಶಗಳಿಗೆ ಸಂಬಂಧಿಸಿದಂತೆ ಶಾಂತಿಯುತ ಪ್ರತಿಭಟನೆ ಹಾಗೂ ಮನವಿಪತ್ರ ಸಲ್ಲಿಸಲು ಎನ್ಎಸಿ ಮುಖ್ಯ ಸಂಯೋಜಕ ರಮಕಾಂತ ನರಗುಂದ ಹಾಗೂ ರಾಜ್ಯಾಧ್ಯಕ್ಷ ಜಿಎಸ್ಎಮ್ ಸ್ವಾಮಿ, ಇತರೆ ಮುಖಂಡರು ಹಾಗೂ ನಮ್ಮ ಸಂಘದ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಎಲ್ಲ ಇಪಿಎಸ್ ನಿವೃತ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಮುಖಂಡರು ಪ್ರಚಲಿತ ಸಂಗತಿ ಹಾಗೂ ನಮ್ಮ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.
ಇಪಿಎಸ್ ನಿವೃತ್ತರ ಈ ಎಲ್ಲ ಬೇಡಿಕೆಗಳಿಗೆ ಸಂಬಂಧಿಸಿದಂತೆ ಏ.28ರ ಸೋಮವಾರ ಬೆಳಗ್ಗೆ 10:30 ಗಂಟೆಗೆ (ಬೇಸಿಗೆ ಬಿಸಿಲು ವಿಪರೀತ ಇರುವುದರಿಂದ, ಪ್ರತಿಭಟನೆಯನ್ನು 10:30 ಕ್ಕೆ ಸರಿಯಾಗಿ ಪ್ರಾರಂಭಿಸಲಾಗುವುದು) ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದು, ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಬೇಕೆಂದು ಕಾರ್ಯಕಾರಿ ಸಮಿತಿ ಪರವಾಗಿ ನಂಜುಂಡೇಗೌಡ ಮನವಿ ಮಾಡಿದ್ದಾರೆ.
Related

You Might Also Like
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ₹4,195 ಕೋಟಿ ಬಿಡುಗಡೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ...