ಜೂ. 27ರಂದು ಕನಿಷ್ಠ ₹7,500 ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ

ಬೆಂಗಳೂರು: ಕನಿಷ್ಠ ₹7,500 ನಿಗದಿ ಪಡಿಸಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇದೇ ಜೂ. 27ರಂದು ಬೆಳಗ್ಗೆ 10:30ಕ್ಕೆ “ನಿಧಿ ಆಪ್ಕೆ ನಿಕಟ್” ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆಯನ್ನು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದಾರೆ.
ಈ ಸಂಬಂಧ ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆಯ ಅಧ್ಯಕ್ಷ ನಂಜುಂಡೇಗೌಡ ಅವರು ಪತ್ರಿಕಾ ಹೇಳಿಕೆ ನೀಡಿದ್ದು, ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್ಆರ್ಟಿಸಿ ಹಾಗೂ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್, ಚಿಕ್ಕಬಳ್ಳಾಪುರ ವತಿಯಿಂದ ಇಪಿಎಸ್ ನಿವೃತ್ತರ ಪ್ರತಿಭಟನಾ ಹಾಗೂ ಮನವಿ ಸಲ್ಲಿಸುವ ಕಾರ್ಯಕ್ರಮವನ್ನು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.
ನಮ್ಮ ಈ 27ನೇ ಪ್ರತಿಭಟನೆ ಕೂಗು ದೆಹಲಿಗೆ ತಲುಪಬೇಕು ಹಾಗಾಗಿ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ ಈ ಎರಡು ಅಂಶಗಳಿಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದು, ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಮ್ ಸ್ವಾಮಿ, ಇತರೆ ಮುಖಂಡರು ಹಾಗೂ ನಮ್ಮ ಸಂಘದ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಲಿದ್ದಾರೆ.
ನಮ್ಮ ಹೋರಾಟ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ (ನ್ಯಾಯಾಲಯದ ತೀರ್ಪಿನ ಪ್ರಕಾರ) ಎರಡೂ ಅಂಶಗಳು ಈಡೇರಿರುವವರೆಗೂ ನಮ್ಮ ಹೋರಾಟ ನಿಲ್ಲದು. ಯಾವುದೇ ಸರ್ಕಾರಿ ಕಚೇರಿ ಆವರಣದಲ್ಲಿ ನಡೆಯುವ ಪ್ರತಿಭಟನೆಯ ಸಂಕ್ಷೀಪ್ತ ವಿವರಗಳನ್ನು ಆ ಕಚೇರಿಯ ಮುಖ್ಯಸ್ಥರು, ತಮ್ಮ ಉನ್ನತ ಮಟ್ಟದ ಮೇಲಧಿಕಾರಿಗಳಿಗೆ ವರದಿ ನೀಡಲೇಬೇಕು? ಹಾಗಾಗಿ ನಮ್ಮ ಎಲ್ಲ ಪ್ರತಿಭಟನಾ ಕಾರ್ಯಕ್ರಮಗಳು ಕೇಂದ್ರ ಸರ್ಕಾರಕ್ಕೆ ಮುಟ್ಟಿದೆ.
ಪಾರ್ಲಿಮೆಂಟ್ ಮುಂಗಾರು ಅಧಿವೇಶನ ಜುಲೈ 22, 2025 ರಿಂದ ಪ್ರಾರಂಭವಾಗಲಿದ್ದು, ಈ ದೆಶೆಯಲ್ಲಿ ನಾವೆಲ್ಲರೂ ಸಂಘಟಿತರಾಗಿ ಹೋರಾಟವನ್ನು ತೀವ್ರಗೊಳಿಸುವುದು ಅವಶ್ಯಕವಾಗಿದೆ. ನಮ್ಮ ಹೋರಾಟದ ಸಂದೇಶ ನವದೆಹಲಿ ತಲುಪಬೇಕು. ಈ ದೃಷ್ಟಿಯಿಂದ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲ ಇಪಿಎಸ್ ನಿವೃತ್ತರು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ನಂಜುಂಡೇಗೌಡ ಮನವಿ ಮಾಡಿದ್ದಾರೆ.
ಇನ್ನು ನಮ್ಮ ರಾಜ್ಯದವರೇ ಆದ ಬಸವರಾಜ ಬೊಮ್ಮಾಯಿ ಅವರು ಪಾರ್ಲಿಮೆಂಟರಿ ಕಮಿಟಿ ಅಧ್ಯಕ್ಷರಾಗಿದ್ದು, ಈ ಕಮಿಟಿಯು ಕೇಂದ್ರ ಸರ್ಕಾರಕ್ಕೆ ಇಪಿಎಸ್ ನಿವೃತ್ತರ ಪರವಾಗಿ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಿದ್ದಾರೆ. ಈಗ ನೀಡುತ್ತಿರುವ ಕನಿಷ್ಠ ಪಿಂಚಣಿ ₹1,000 ದಿಂದ ₹7,500ಕ್ಕೆ ನಿಗದಿಪಡಿಸಿ, ಬೆಲೆ ಏರಿಕೆಗೆ ಅನುಗುಣವಾಗಿ, ಭತ್ಯೆ ಸೇರಿಸಿ, ಪಿಂಚಣಿ ನೀಡಬೇಕೆಂದು ಶಿಫಾರಸು ಮಾಡಿದ್ದು, ಪ್ರಸ್ತಾವನೆ ಕೇಂದ್ರ ಸರ್ಕಾರದ ಉನ್ನತ ಸಚಿವರ ಕಾರ್ಯಾಲಯದಲ್ಲಿ ಸಕಾರಾತ್ಮಕ ಪರಿಶೀಲನೆಯಲ್ಲಿದೆ.
ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಮ್ ಸ್ವಾಮಿ, ಇತರೆ ಮುಖಂಡರು ಹಾಗೂ ನಮ್ಮ ಸಂಘದ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಎಲ್ಲ ಇಪಿಎಸ್ ನಿವೃತ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಮುಖಂಡರು ಪ್ರಚಲಿತ ಸಂಗತಿ ಹಾಗೂ ನಮ್ಮ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.
ಇಪಿಎಸ್ ನಿವೃತ್ತರ ಈ ಎಲ್ಲ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜೂ.27ರ ಶುಕ್ರವಾರ ಬೆಳಗ್ಗೆ 10:30 ಗಂಟೆಗೆ ಪ್ರತಿಭಟನೆಯನ್ನು ಪ್ರಾರಂಭಿಸಲಾಗುವುದು. ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗುವ ಪ್ರತಿಭಟನೆ ಹಾಗೂ ಅಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಸಚಿವರಿಗೆ ಮನವಿ ಪತ್ರ ಸಲ್ಲಿಸುವ ಸಭೆಗೆ ಎಲ್ಲ ಇಪಿಎಸ್ ನಿವೃತ್ತರು ಆಗಮಿಸಬೇಕೆಂದು ನಂಜುಂಡೇಗೌಡ ಮನವಿ ಮಾಡಿದ್ದಾರೆ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...