NEWSನಮ್ಮಜಿಲ್ಲೆನಮ್ಮರಾಜ್ಯ

ದಶಕದಿಂದ ಇಪಿಎಸ್ ನಿವೃತ್ತರು ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಕಿವಿಗೊಡದ ಕೇಂದ್ರ: ನಂಜುಂಡೇಗೌಡ ಅಸಮಾಧಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ನಿವೃತ್ತರು ದಶಕದಿಂದ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಸಹಾ ಕೇಂದ್ರ ಸರ್ಕಾರ ಕಿವಿಗೊಡದೆ ಇರುವುದು ಅತ್ಯಂತ ಶೋಚನೀಯ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲಾಲ್‌ಬಾಗ್‌ ಆರವರಣದಲ್ಲಿ ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ನಿವೃತ್ತ ನೌಕರರ ಸಂಘ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಟ್ರಸ್ಟ್ ವತಿಯಿಂದ ಭಾನುವಾರ ಜರುಗಿದ ಇಪಿಎಸ್ ಪಿಂಚಣಿದಾರರ 90ನೇ ಮಾಸಿಕ ಸಭೆಯಲ್ಲಿ ಮಾತನಾಡಿದರು.

ಜುಲೈ 11ರಂದು ಸಿಬಿಟಿ ಸಭೆ ಇದ್ದು, ಜುಲೈ 21 ರಿಂದ ಪಾರ್ಲಿಮೆಂಟ್‌ನ ಮುಂಗಾರು ಅಧಿವೇಶನ ಪ್ರಾರಂಭವಾಗುತ್ತಿದೆ. ಈ ಬಾರಿಯಾದರೂ ನಮ್ಮ ರಾಜ್ಯದ ಸಂಸದರು ಸಂಸತ್‌ನಲ್ಲಿ ಧ್ವನಿಯೆತ್ತಲೇ ಬೇಕು ಸಭೆಯ ಮೂಲಕ ಸಂಸದರಿಗೆ ಆಗ್ರಹಿಸಿದರು.

ಇನ್ನು ಏನೇ ಆಗಲಿ 78 ಲಕ್ಷ ಇಪಿಎಸ್ ನಿವೃತ್ತರ ಪರ ನಡೆಸುತ್ತಿರುವ ಈ ಹೋರಾಟಕ್ಕೆ ಇಂದಲ್ಲ ನಾಳೆ ಜಯ ಶತಸಿದ್ಧ. ಆಗಸ್ಟ್ 04 ಮತ್ತು 05, 2025 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ರಾಷ್ಟ್ರೀಯ ಸಂಘರ್ಷ ಸಮಿತಿ ವತಿಯಿಂದ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ದೇಶಾದ್ಯಂತ ಇರುವ ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಬೇಕೆಂದು ಎನ್ಎಸಿ ತಿಳಿಸಿದ್ದಾರೆ.

ಆ ಹೋರಾಟದಲ್ಲಿ ನಮ್ಮ ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯ ನಿವೃತ್ತರು ಭಾಗವಹಿಸಬೇಕೆಂದು ಸಭೆಯಲ್ಲಿ ಮನವಿ ಮಾಡಿದ್ದರು. ಈ ಹೋರಾಟದಲ್ಲಿ ಭಾಗವಹಿಸಲು ಇಚ್ಛಿಸುವ ನಿವೃತ್ತರು ಕೂಡಲೇ ತಮ್ಮ ಮುಂಗಡ ರೈಲ್ವೆ ಟಿಕೆಟ್ ಕಾಯ್ದಿರಿಸುವ ಮೂಲಕ ಎನ್ಎಸಿ ಕಾರ್ಯಕಾರಿ ಸಮಿತಿ ಸದಸ್ಯರಿಗೆ ತಿಳಿಸಬೇಕೆಂದು, ಸಭೆಯಲ್ಲಿ ಮನವಿ ಮಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ಬಣ್ಣ ಮಾತನಾಡಿ, ನಮ್ಮ ಹೋರಾಟ ಇಷ್ಟಕ್ಕೆ ಮುಗಿಯುವುದಿಲ್ಲ, ಕಮಾಂಡರ್ ಅಶೋಕ್ ರಾಹುತ್ ಅವರು ಪ್ರತಿಪಾದಿಸುತ್ತಿರುವ ಕನಿಷ್ಠ ಹೆಚ್ಚುವರಿ ಪಿಂಚಣಿ ರೂ. 7500 ಮತ್ತು ಭತ್ಯೆ, ವೈದ್ಯಕೀಯ ಸೌಲಭ್ಯ ಇವೆಲ್ಲವೂ ನಮ್ಮ ಬ್ಯಾಂಕ್ ಖಾತೆಗೆ ಬಂದು ಬೀಳುವವರೆಗೆ ಈ ಹೋರಾಟ ನಿಲ್ಲದು ಎಂದು ಹೇಳಿದರು.

ಇನ್ನು ಇದೇ ಜುಲೈ 27 ರಂದು ಹುಬ್ಬಳ್ಳಿಯಲ್ಲಿ ಇಪಿಎಸ್ ನಿವೃತ್ತರ ಬೃಹತ್ ಸಮಾವೇಶ ನಡೆಯುತ್ತಿದ್ದು, ನಾವೆಲ್ಲರೂ ಭಾಗವಹಿಸೋಣ ಎಂದು ಕರೆ ನೀಡಿದರು.

ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ ಮಾತನಾಡಿ, ಇಪಿಎಫ್ಒ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು, ನಾವೆಲ್ಲರೂ “ದೆಹಲಿ ಯಾತ್ರೆ” ಕೈಗೊಳ್ಳುವುದು ಒಂದೇ ಮಾರ್ಗ, ಒಟ್ಟಾಗಿ ಆಗಸ್ಟ್ 4 ಮತ್ತು 5 ರಂದು ದೆಹಲಿಯಲ್ಲಿ ನಡೆಯುವ ಬೃಹತ್ ಆಂದೋಲನದಲ್ಲಿ ಭಾಗವಹಿಸೋಣ ಎಂದರು.

ಸಭೆಗೂ ಮೊದಲು ಎಲ್ಲ ನಿವೃತ್ತರನ್ನು ಸಂಘದ ಖಜಾಂಚಿ ಡೋಳಪ್ಪನವರು ಸ್ವಾಗತಿಸಿ, ಜೂನ್ 27 ರಂದು ಇಪಿಎಫ್ಓ ಕಚೇರಿ ಆವರಣದಲ್ಲಿ ಜರುಗಿದ ಪ್ರತಿಭಟನೆ ಅತ್ಯಂತ ಪರಿಣಾಮಕಾರಿಯಾಗಿತ್ತು, ಭಾಗಿಯಾಗಿದ್ದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಸಂಘದ ಪದಾಧಿಕಾರಿಗಳಾದ ನಾಗರಾಜ, ರುಕ್ಮೇಶ್ & ಕೃಷ್ಣಮೂರ್ತಿ ಸಭೆಯ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು. ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳಿಗೆ ನಾವು ಬದ್ಧ ಎಂದು ಸದಸ್ಯರು ಹರ್ಷ ವ್ಯಕ್ತಪಡಿಸಿದರು.

Megha
the authorMegha

Leave a Reply

error: Content is protected !!
Latest news
ಸಿದ್ದಾರ್ಥ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ಚಿರತೆ: ಪ್ರಾಣದ ಹಂಗು ತೊರೆದು ಅಮ್ಮನ ರಕ್ಷಿಸಿದ ಮಗಳು ಸಾರಿಗೆ ನೌಕರರ ಎಲ್ಲ ಸಂಘಟನೆಯವರು ಒಂದಾಗಿ ನೌಕರರಿಗೆ ಸಮಾನ ವೇತನ ಕೊಡಿಸಲು ಮುಂದಾಗಿ: ನೌಕರನ ಮನವಿ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರವು ಕಬ್ಬು ಬೇಸಾಯದಲ್ಲಿ ಎಐ ತಂತ್ರಜ್ಞಾನ ಜಾರಿಗೆ ತರಲಿ: ಕುರುಬೂರು ಶಾಂತಕುಮಾರ್ ಹುಚ್ಚಮ್ಮ ದೇವಿಯ 650 ಕುರಿಗಳ ಮೆರವಣಿಗೆ, 12 ಟನ್ ಮಟನ್ ಸಾರು: ಇತಿಹಾಸ ನಿರ್ಮಿಸಿದ ಲಕ್ಷಕ್ಕೂ ಹೆಚ್ಚು ಭಕ್ತರಿಗೆ ಅನ್ನ... KSRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿರುವ ಪಾದಯಾತ್ರೆಗೂ ಅಡ್ಡಿ ಮಾಡುತ್ತಿರುವ ಜಂಟಿ ಸಂಘಟನೆ... ಸಾವಿರಾರು ಜನರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸಲು ಆರೋಗ್ಯ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ನೌಕರರು... ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್