ಬೆಂಗಳೂರು: ಕನಿಷ್ಠ ಪಿಂಚಣಿಗೆ ಆಗ್ರಹಿಸಿ ಇಂದು ಬೆಳಗ್ಗೆ 10.30ಕ್ಕೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ಕಳೆದ ಸೆಪ್ಟೆಂಬರ್ 01, 2014ರ ನಂತರ ನಿವೃತ್ತರಾದ ಇಪಿಎಸ್ ಪಿಂಚಣಿದಾರರಿಗೆ ಸಂಬಂಧಿಸಿದಂತೆ, ಸರ್ವೋಚ್ಚ ನ್ಯಾಯಾಲಯವು ನವೆಂಬರ್ 04, 2022 ರಂದು ನೀಡಿದ ತನ್ನ ತೀರ್ಪಿನಲ್ಲಿ, ಕಂಡಿಕೆ 44 (iv) ರಲ್ಲಿ ಸ್ಪಷ್ಟ ಆದೇಶ ನೀಡಿ, ವಿನಾಯ್ತಿ ಅಥವಾ ವಿನಾಯ್ತಿಯೇತರ ( exempted or unexempted) ಸಂಸ್ಥೆಯ ಎಲ್ಲ ನೌಕರರಿಗೆ ಅಧಿಕ ಪಿಂಚಣಿಯನ್ನು ಲೆಕ್ಕಾಚಾರ ಮಾಡಿ ನೀಡಬೇಕೆಂದು ಉಲ್ಲೇಖಿಸಿದೆ.
ಅದರಂತೆ ಇಪಿಎಫ್ಒ ಅಧಿಕಾರಿಗಳು ನಮ್ಮಿಂದ ಜಂಟಿ ಆಯ್ಕೆ ಪತ್ರ ಪಡೆದು, ಎರಡುವರೆ ವರ್ಷಗಳ ನಂತರ, ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿ, ವಿನಾಯ್ತಿ ಸಂಸ್ಥೆಗಳ ನಿವೃತ್ತ ನೌಕರರ ಜಂಟಿ ಆಯ್ಕೆ ಪತ್ರಗಳನ್ನು ತಿರಸ್ಕರಿಸಿ, ಅಧಿಕಾರಿಗಳು ನೀಡಿರುವ ಹಿಂಬರಹ ಅಕ್ಷಮ್ಯ ಅಪರಾದವಾಗಿದೆ. ಮಾತ್ರವಲ್ಲದೇ ನ್ಯಾಯಾಲಯದ ತೀರ್ಪಿನ ಉಲ್ಲಂಘನೆಯಾಗಿದೆ.
ಹೀಗಾಗಿ ಅಧಿಕ ಪಿಂಚಣಿ ಬಯಸಿ, ಜಂಟಿ ಆಯ್ಕೆ ಪತ್ರ ಸಲ್ಲಿಸಿರುವ ಎಲ್ಲ ಇಪಿಎಸ್ ಪಿಂಚಣಿದಾರರು ಈ ಹೋರಾಟದಲ್ಲಿ ಭಾಗಿಯಾಗಬೇಕು. ಈ ಸಂಬಂಧ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಪಿಎಫ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರೆ ನೀಡಿದ್ದಾರೆ.
ಕನಿಷ್ಠ ಹೆಚ್ಚುವರಿ ಪಿಂಚಣಿಗೆ ₹7,500 + ಭತ್ಯೆ, ವೈದ್ಯಕೀಯ ಸೌಲಭ್ಯವನ್ನು ನೀಡಬೇಕೆಂದು ಆಗ್ರಹಿಸಿ, ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥ ಕಮಾಂಡರ್ ಅಶೋಕ್ ರಾಹುತ್ ಅವರ ನೇತೃತ್ವದಲ್ಲಿ, ಇಪಿಎಸ್ ನಿವೃತ್ತರ ಪರ ದೇಶಾದ್ಯಂತ ನಡೆಯುತ್ತಿರುವ ಹೋರಾಟ ಅಂತಿಮ ಘಟ್ಟ ತಲುಪಿದೆ.
ಇನ್ನು ನಮ್ಮ ರಾಜ್ಯದವರೇ ಆದ ಬಸವರಾಜ ಬೊಮ್ಮಾಯಿ ಅವರು ಪಾರ್ಲಿಮೆಂಟರಿ ಕಮಿಟಿ ಅಧ್ಯಕ್ಷರಾಗಿದ್ದು, ಈ ಕಮಿಟಿಯು ಕೇಂದ್ರ ಸರ್ಕಾರಕ್ಕೆ ಇಪಿಎಸ್ ನಿವೃತ್ತರ ಪರವಾಗಿ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಿದ್ದು, ಈಗ ನೀಡುತ್ತಿರುವ ಕನಿಷ್ಠ ಪಿಂಚಣಿ ₹1,000 ದಿಂದ ₹7,500ಕ್ಕೆ ನಿಗದಿಪಡಿಸಿ, ನಿಯತಕಾಲಿಕ ಭತ್ಯೆ ಸೇರಿಸಿ, ಪಿಂಚಣಿ ನೀಡಬೇಕೆಂದು ಶಿಫಾರಸ್ಸು ಮಾಡಿದ್ದು, ಪ್ರಸ್ತಾವನೆ ಕೇಂದ್ರ ಸರ್ಕಾರದ ಉನ್ನತ ಸಚಿವರ ಕಾರ್ಯಾಲಯದಲ್ಲಿ ಸಕಾರಾತ್ಮಕ ಪರಿಶೀಲನೆಯಲ್ಲಿದೆ. ಇದು ಜಾರಿಯಾದಲ್ಲಿ, ಎಲ್ಲ 78 ಲಕ್ಷ್ಯ ಇಪಿಎಸ್ ನಿವೃತ್ತರಿಗೆ ಅನ್ವಯವಾಗಲಿದೆ.(ಯಾರು ಸಹ ಯುಟ್ಯೂಬ್ ಸಂದೇಶಗಳನ್ನು ನಂಬಬೇಡಿ) ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್ಆರ್ಟಿಸಿ ಹಾಗೂ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್, ಚಿಕ್ಕಬಳ್ಳಾಪುರ ವತಿಯಿಂದ ಇಪಿಎಸ್ ನಿವೃತ್ತರ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.
ನಮ್ಮ ಕೂಗು ದೆಹಲಿಗೆ ತಲಪಬೇಕು, ಹಾಗಾಗಿ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ ಈ ಎರಡು ಅಂಶಗಳಿಗೆ ಸಂಬಂಧಿಸಿದಂತೆ ಶಾಂತಿಯುತ ಪ್ರತಿಭಟನೆ ಹಾಗೂ ಮನವಿಪತ್ರ ಸಲ್ಲಿಸಲು ಎನ್ಎಸಿ ಮುಖ್ಯ ಸಂಯೋಜಕ ರಮಕಾಂತ ನರಗುಂದ ಹಾಗೂ ರಾಜ್ಯಾಧ್ಯಕ್ಷ ಜಿಎಸ್ಎಮ್ ಸ್ವಾಮಿ, ಇತರೆ ಮುಖಂಡರು ಹಾಗೂ ನಮ್ಮ ಸಂಘದ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಎಲ್ಲ ಇಪಿಎಸ್ ನಿವೃತ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಮುಖಂಡರು ಪ್ರಚಲಿತ ಸಂಗತಿ ಹಾಗೂ ನಮ್ಮ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.
ಇಪಿಎಸ್ ನಿವೃತ್ತರ ಈ ಎಲ್ಲ ಬೇಡಿಕೆಗಳಿಗೆ ಸಂಬಂಧಿಸಿದಂತೆ ಏ.28ರ ಸೋಮವಾರ ಬೆಳಗ್ಗೆ 10:30 ಗಂಟೆಗೆ (ಬೇಸಿಗೆ ಬಿಸಿಲು ವಿಪರೀತ ಇರುವುದರಿಂದ, ಪ್ರತಿಭಟನೆಯನ್ನು 10:30 ಕ್ಕೆ ಸರಿಯಾಗಿ ಪ್ರಾರಂಭಿಸಲಾಗುವುದು) ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದು, ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಬೇಕೆಂದು ಕಾರ್ಯಕಾರಿ ಸಮಿತಿ ಪರವಾಗಿ ನಂಜುಂಡೇಗೌಡ ಮನವಿ ಮಾಡಿದ್ದಾರೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...