ಎಲ್ಲವೂ ಕೋರ್ಟ್ನಲ್ಲಿ ಇತ್ಯರ್ಥ ಆಗತ್ತೆ: 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಮ್ಯಾನೇಜರ್ ಸ್ಪಷ್ಟನೆ

ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ವಿರುದ್ಧ ಈಗ 3.15 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. 2016ರ ಜಗ್ಗು ದಾದ ಸಿನಿಮಾ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ ಈ ಆರೋಪ ಮಾಡಿದ್ದು, ಈಗ ಈ ವಿಚಾರ ಸೆನ್ಸೇಷನ್ ಸೃಷ್ಟಿಸಿದೆ.
ಈ ಹೇಳಿಕೆ ಬಗ್ಗೆ ಧ್ರುವ ಸರ್ಜಾ ಅವರ ಮ್ಯಾನೇಜರ್ ಅಶ್ವಿನ್ ಸ್ಪಷ್ಟನೆ ನೀಡಿದ್ದು, ಈ ರಾಘವೇಂದ್ರ ಹೆಗ್ಡೆ ಮಾಡಿರುವ ಆರೋಪ ಸಂಪೂರ್ಣ ಸುಳ್ಳು. ಅವರು 2018ರಲ್ಲಿ ಸೋಲ್ಜರ್ ಸಿನಿಮಾ ಮಾಡಲು 3.15 ಕೋಟಿ ರೂಪಾಯಿ ಹಣ ನೀಡಿದ್ದರು.
ಅಂದರೆ ನಂದಿನಿ ಎಂಟರ್ಟೇನ್ಮೆಂಟ್ನಿಂದ 20 ಲಕ್ಷ ರೂಪಾಯಿ ಹಾಗೂ ರಾಘವೇಂದ್ರ ಕಡೆಯಿಂದ 2.95 ಲಕ್ಷ ರೂಪಾಯಿ ಬಂದಿತ್ತು. ನಂದಿನಿ ಸಂಸ್ಥೆ ಹಾಗೂ ರಾಘವೇಂದ್ರ ಅವರಿಗೆ ಏನೋ ಸಮಸ್ಯೆ ಆಗಿದ್ದರಿಂದ 20 ಲಕ್ಷ ರೂಪಾಯಿ ಹಣವನ್ನು ನಾವು ಹಿಂದಿರುಗಿಸಿದ್ದೆವು. ಉಳಿದ ಹಣಕ್ಕೆ ಒಂದು ಸಿನಿಮಾ ಮಾಡಬೇಕಿತ್ತು. ಇದಕ್ಕಾಗಿ ಅವರು ಮೂರು ತಿಂಗಳು ಅವಕಾಶ ಕೇಳಿದ್ದರು ಎಂದು ಅಶ್ವಿನ್ ಹೇಳಿದ್ದಾರೆ.
ಇನ್ನು ಪ್ರತಿ ಬಾರಿ ನಾವೇ ಕಾಲ್ ಮಾಡಿದಾಗಲೂ ಅವರು ಬ್ಯುಸಿ ಇದ್ದಿದ್ದಾಗಿ ಹೇಳುತ್ತಲೇ ಬರುತ್ತಿದ್ದರು. ನಾಲ್ಕೂವರೆ ವರ್ಷ ಆದಮೇಲೆ ಸಿನಿಮಾ ಸ್ಕ್ರಿಪ್ಟ್ನ ಮೊದಲಾರ್ಧ ಕಳುಹಿಸಿದರು. ದ್ವೀತಿಯಾರ್ಧ ಇನ್ನೂ ಬಂದಿರಲಿಲ್ಲ. ನಾವು ಅವರ ಜತೆ ನಿರಂತರವಾಗಿ ಮಾತುಕತೆ ಮಾಡುತ್ತಲೇ ಇದ್ದೆವು. ಒಂದು ದಿನ ಬಂದು ಸೋಲ್ಜರ್ ಸಿನಿಮಾ ಮಾಡೋದು ಬೇಡ, ಬಜೆಟ್ ಜಾಸ್ತಿ ಆಗುತ್ತದೆ. ಮಾಡಿದರೂ ಕನ್ನಡದಲ್ಲಿ ಬೇಡ, ತೆಲುಗು ಅಥವಾ ಹಿಂದಿಯಲ್ಲಿ ಮಾಡೋಣ ಎಂದು ಹೇಳಿದರು ಆದರೆ, ಈ ಬೇಡಿಕೆಗೆ ಧ್ರುವ ಒಪ್ಪಿಲ್ಲ ಎಂದು ಅಶ್ವಿನ್ ಸ್ಪಷ್ಟಪಡಿಸಿದ್ದಾರೆ.
ಜತೆಗೆ ಕನ್ನಡದಲ್ಲೇ ಸಿನಿಮಾ ಮಾಡಬೇಕು ಎಂದು ಪಟ್ಟು ಹಿಡಿದರು. ಕಳೆದ ಜೂನ್ 28ರಂದು ನಾವು ಭೇಟಿ ಆದೆವು. ಆಗ ರಾಘವೇಂದ್ರ ಅವರು ಈ ಚಿತ್ರವನ್ನು ತೆಲುಗು ಅಥವಾ ಹಿಂದಿಯಲ್ಲೇ ಮಾಡೋಣ ಎಂದು ಮತ್ತೆ ಹೇಳಿದ್ದರು. ಆದರೆ, ಇದಕ್ಕೆ ಧ್ರುವ ಒಪ್ಪಿಲ್ಲ. ಕೊನೆಗೆ ಕನ್ನಡದಲ್ಲೇ ಸಿನಿಮಾ ಮಾಡೋದು ಎಂಬ ತೀರ್ಮಾನ ಆಯಿತು. ಅಕ್ಟೋಬರ್ನಿಂದ ಡೇಟ್ಸ್ ಬೇಕು ಎಂದು ರಾಘವೇಂದ್ರ ಕೇಳಿದರು. ನಾವು ಇದಕ್ಕೆ ರೆಡಿ ಇದ್ದೆವು ಎಂದು ಹೇಳಿದ್ದಾರೆ ಅಶ್ವಿನ್.
ಈ ನಡುವೆ ಕಳೆದ ಜುಲೈನಲ್ಲಿ ನೋಟಿಸ್ ಕೊಟ್ಟಿದ್ದಾರೆ. ನಾವು ಪ್ರತಿ ಸಿನಿಮಾ ಆದಾಗಲೂ ರೆಡಿನಾ ಎಂದು ಕೇಳುತ್ತಲೇ ಬರುತ್ತಿದ್ದೆವು. ಅವರೇ ಅದನ್ನು ಮುಂದಕ್ಕೆ ಹಾಕುತ್ತಿದ್ದರು. ನಮ್ಮ ಬಳಿ ಇಲ್ಲಿ ಒಂದು ರೀತಿ ಮಾತನಾಡೋದು, ಆಮೇಲೆ ಅಲ್ಲಿ ಬೇರೆ ರೀತಿ ನಡೆದುಕೊಳ್ಳೋದು ಮಾಡುತ್ತಿದ್ದರು.
ನಮಗೆ ಈ ಮೊದಲು ನೋಟಿಸ್ ಬಂದಿತ್ತು. ಆ ಬಳಿಕ 100 ಬಾರಿ ಕರೆ ಮಾಡಿದ್ದೇವೆ. ಆದರೆ, ಅವರು ಉತ್ತರಿಸಿಲ್ಲ. ಬೇಕೆಂದಲೇ ಈ ರೀತಿ ಮಾಡಿದ್ದಾರೆ. ನಾವು ಹಣ ಕೊಡೋದಿಲ್ಲ ಎಂದು ಯಾವಾಗಲೂ ಹೇಳಿಲ್ಲ. ಕುಳಿತು ಬಗೆಹರಿಸಿಕೊಳ್ಳುವುದಕ್ಕೆ ಕೋರ್ಟ್ಗೆ ಹೋಗಿದ್ದಾರೆ. ಎಲ್ಲವೂ ಕೋರ್ಟ್ನಲ್ಲಿ ಇತ್ಯರ್ಥ ಆಗಲಿದೆ ಎಂದು ಧ್ರುವ ಮ್ಯಾನೇಜರ್ ಹೇಳಿದ್ದಾರೆ.
Related

You Might Also Like
KSRTC: ಸರ್ಕಾರ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಲೇ ಬೇಕು- ಏಕೆಂದರೆ ELಗೆ ಶೇ.15ರಷ್ಟು ಹೆಚ್ಚುವರಿ…!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಮಾರ್ಚ್ 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ 2020 ಜನವರಿ 1ರಿಂದ ಅನ್ವಯವಾಗುವಂತೆ ಘೋಷಣೆ ಮಾಡಿರುವ ಶೇ.15ರಷ್ಟು...
ಕುಡಿದು ಠಾಣೆಗೆ ನುಗ್ಗಿ ಪೊಲೀಸರಿಗೇ ಅವಾಜ್ ಹಾಕಿ ಅಧಿಕಾರಿ ಸಹೋದರನ ರಂಪಾಟ
ಗದಗ: ಪೊಲೀಸ್ ಅಧಿಕಾರಿ ಸಹೋದರನೊಬ್ಬ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್...
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: FIR ದಾಖಲು
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅವರು ಸಿನಿಮಾ ಮಾಡುವುದಾಗಿ ನಂಬಿಸಿ 3.15 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪದಡಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ...
KSRTC ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಸಿಬ್ಬಂದಿ ಮಂಜುನಾಥ್ ಅಮಾನತು: ಎಸ್ಪಿ ಆದೇಶ
ಕೂಡ್ಲಿಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಕರ್ತವ್ಯ ನಿರತ ಚಾಲಕನ ಮೇಲೆ ಮನಬಂದಂತೆ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದ. ಈ ಸಂಬಂಧ ಇಂದು...
ರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಸಮಾಧಿ ತೆರವು- ಅಭಿಮಾನಿಗಳ ಆಕ್ರೋಶ
ಬೆಂಗಳೂರು: ರಾತ್ರೋರಾತ್ರಿ ಅಭಿಮಾನಿಗಳ ವಿರೋಧದ ನಡುವೆಯೂ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ...
ವೈ.ರಾಮಕೃಷ್ಣರ ಸೇವೆ-ಹೋರಾಟ ಇಂದಿಗೂ ಸ್ಮರಣೀಯ: ಸಚಿವ ಮುನಿಯಪ್ಪ
ಮೈಸೂರು: ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ವೈ.ರಾಮಕೃಷ್ಣ ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು...
ವಿಜಯಪಥ ವರದಿ ಪರಿಣಾಮ: ವರದಿ ಬಂದ ಅರ್ಥಗಂಟೆಯಲ್ಲಿ ಹಣ ಪಾವತಿ ಸಂಬಂಧ ಲೆಕ್ಕಾಧಿಕಾರಿಗೆ ಟಿಪ್ಪಣಿ ಬರೆದ ಡಿಸಿ
ವಿಜಯಪುರ: KKRTC ವಿಜಯಪುರ: ನಿವೃತ್ತ ನೌಕರನಿಗೆ 29ಲಕ್ಷ ಕೊಡುವಂತೆ ಹೈ ಕೋರ್ಟ್ ತೀರ್ಪು- ಈ ಆದೇಶವನ್ನೇ ಉಲ್ಲಂಘಿಸುತ್ತಿರುವ ಡಿಸಿ! ಎಂಬ ಶೀರ್ಷಿಕೆಯಡಿ ವಿಜಯಪಥ ದಲ್ಲಿ ವರದಿ ಬಂದ ಕೇವಲ...
ಲಾಲ್ಬಾಗ್: ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರ ಜೀವನ ಚರಿತ್ರೆ ಫಲಪುಷ್ಪಗಳಲ್ಲಿ ಅನಾವರಣ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್ಬಾಗ್ನಲ್ಲಿ ಆಯೋಜಿಸಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಅವರ...