ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು
ಅರ್ಜಿ ಆಹ್ವಾನಿಸಲಾಗಿದೆ.
ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದನ್ನು 2025 ರ ಜನವರಿ 06 ರ ವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ: 08022866966.
ದೊಡ್ಡಬಳ್ಳಾಪುರ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9986874857, ನೆಲಮಂಗಲ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 8660197516, ದೇವನಹಳ್ಳಿ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9591176959.
ಹೊಸಕೋಟೆ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 7676905779 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)