CRIMENEWSನಮ್ಮರಾಜ್ಯ

ಸುಳ್ಳು ಸುದ್ದಿ ಪ್ರಕರಣ: ಎಫ್‌ಐಆರ್‌ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಸಜಿಪನಡು ಗ್ರಾಮದ ದೇರಾಜೆ ಎಂಬಲ್ಲಿ ಕಳೆದ ಜೂ.21 ರಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲವಾರು ದಾಳಿ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡಿ ಆರೋಪದಡಿ ಡಿಟಿವಿ ಕನ್ನಡ  ವೆಬ್ ಪೋರ್ಟಲ್ ವಿರುದ್ಧ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಅಪರಾಧ ಕ್ರಮಾಂಕ 75/2025 ಕಲಂ 240 ಬಿಎನ್ಎಸ್ ರಡಿ ಪ್ರಕರಣ ದಾಖಲಾಗಿದ್ದು, ಇದನ್ನು ರದ್ದು ಪಡಿಸುವಂತೆ ಹೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಅರ್ಜಿಗೆ ಸಂಬಂಧಿಸಿದಂತೆ ಪ್ರಕರಣ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

ಪ್ರಕರಣ ರದ್ದು ಮಾಡುವಂತೆ ಕೋರಿ ಉಚ್ಚ ನ್ಯಾಯಾಲಯದಲ್ಲಿ ಪುತ್ತೂರು ನಿವಾಸಿ ಅಜರುದ್ದೀನ್ ಎಂಬವರು ಅರ್ಜಿ ಸಲ್ಲಿಸಿದ್ದರು. ಅಜರುದ್ದೀನ್ ಪರ ಸುಪ್ರೀಂ ಕೋರ್ಟ್‌ ಹಾಗೂ ಹೈ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ವಾದ ಮಂಡಿಸಿದ್ದರು. ಹಾಗೆಯೇ ಈ ಬಗ್ಗೆ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ‌ ವಕೀಲರಾದ ಆಸ್ಮಾ ವಾದ ಮಂಡನೆ ಮಾಡಿದರು.

ಅರ್ಜಿ ಪರ ವಕೀಲರಿಗೆ  ಜಾಮೀನು ಪಡೆದುಕೊಂಡಿದ್ದಾರೆಯೆ ಎಂದು ಮೌಖಿಕವಾಗಿ ನ್ಯಾಯಪೀಠ ಕೇಳಿತು. ಆ ವೇಳೆ ಇಲ್ಲ ಎಂದು ಹೇಳಿದ್ದಕ್ಕೆ ಮೊದಲು ಜಾಮೀನು ಪಡೆದುಕೊಳ್ಳಿ, ಬಳಿಕ ಮತ್ತೆ ಹೊಸ ಅರ್ಜಿ ಸಲ್ಲಿಸಲು ನಿಮಗೆ ಅವಕಾಶವಿದೆ ಎಂದು ಹೇಳಿತು.

ಈ ನಡುವೆ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ,  ಪೊಲೀಸರು ತನಿಖೆ ಮಾಡಿ ಸತ್ಯಾಸತ್ಯತೆ ತಿಳಿಯಲಿ ಎಂದು ತಿಳಿಸಿತು. ಹೀಗಾಗಿ ಪ್ರಕರಣದ ರದ್ದತಿಗಾಗಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅರ್ಜಿದಾರರು ಹಿಂಪಡೆದರು.

ಹೀಗಾಗಿ ಪ್ರಕರಣದ ತನಿಖೆಯು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ