NEWSನಮ್ಮಜಿಲ್ಲೆ

ಇಂದು ನಿವೃತ್ತರಾದ ಹಾನಗಲ್‌ ಡಿಪೋ DM ಹನುಮಂತಪ್ಪ ಡಿ.ಜಾವೂರ್‌ಗೆ ಬೀಳ್ಕೊಡುಗೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಹಾಯಕ ಯಾಂತ್ರಿಕ ಅಭಿಯಂತರರು ಹಾಗೂ ಪ್ರಸ್ತುತ ಹಾನಗಲ್‌ ಡಿಪೋನಲ್ಲಿ ಘಟಕ ವ್ಯವಸ್ಥಾಪಕರಾಗಿದ್ದ ಹನುಮಂತಪ್ಪ ಡಿ.ಜಾವೂರ್ ಅವರು ಸೇವಾ ನಿವೃತ್ತಿಯಾಗಿದ್ದರಿಂದ ಅವರಿಗೆ ಬೀಳ್ಕೊಡಲಾಯಿತು.

ಹಾವೇರಿ ವಿಭಾಗೀಯ ಸಾರಿಗೆ ಅಧಿಕಾರಿ ಅಶೋಕ್ ರು.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಹನುಮಂತಪ್ಪ ಡಿ.ಜಾವೂರ್ ಅವನ್ನು ಸನ್ಮಾನಿಸುವ ಮೂಲಕ ನಿವೃತ್ತಿ ಜೀವನ ಸುಖಕರವಾಗಿರಲಿದೆ ಎಂದು ಹಾರೈಸಲಾಯಿತು.

ಈ ವೇಳೆ ವಿಭಾಗೀಯ ಸಾರಿಗೆ ಅಧಿಕಾರಿ ಅಶೋಕ್ ರು.ಪಾಟೀಲ್ ಮಾತನಾಡಿ, ಹನುಮಂತಪ್ಪ ಡಿ. ಜಾವೂರ್ ಅವರು ಸಂಸ್ಥೆಯಲ್ಲಿ ಒಟ್ಟು 30 ವರ್ಷ ಸುದೀರ್ಘ ಸೇವೆ ಸಲ್ಲಿಸಿ ಇಂದು ಸೇವೆಯಿಂದ ನಿವೃತ್ತಿಯಾಗುತ್ತಿದ್ದಾರೆ. ಸರಳ ಸಜ್ಜನಿಕೆ ಸಹನಾ ಶೀಲರು ಹಾಗೂ ಯಾಂತ್ರಿಕ ವಿಷಯದಲ್ಲಿ ಅಪಾರ ಅನುಭವ ಹೊಂದಿದ ಅಧಿಕಾರಿಯಾಗಿದ್ದರು ಎಂದು ಹೇಳಿದರು.

ಇನ್ನು ಹಾವೇರಿ ವಿಭಾಗದ ಶ್ರೇಯೋಭಿವೃದ್ಧಿಗೆ ಶ್ರಮವಹಿಸಿ ಕೆಲಸ ನಿರ್ವಹಿಸುತ್ತಿದ್ದರು. ಈ ನಡುವೆ ಇವರಿಗೆ 60 ವಸಂತಗಳು ತುಂಬಿದ್ದರಿಂದ ನಾವು ಸಂಸ್ಥೆ ಸೇವೆಯಿಂದ ನಿವೃತ್ತರಾಗುತ್ತಿರುವ ಇವರ ಮುಂದಿನ ನಿವೃತ್ತಿ ಜೀವನ ಒತ್ತಡರಹಿತವಾಗಿರಲಿ. ದೇವರು ಆಯುರ್ ಆರೋಗ್ಯ ಐಶ್ವರ್ಯ ಸಂಪತ್ತನ್ನು ಇನ್ನಷ್ಟು ಕರುಣಿಸಲಿ ಹಾಗೂ ನಿವೃತ್ತಿ ಜೀವನವು ಸುಖಮಯವಾಗಿರಲೆಂದು ಹಾರೈಸಿದರು.

ಈ ಸಂದರ್ಭದಲ್ಲಿ ವಿಭಾಗಿಯ ತಾಂತ್ರಿಕ ಶಿಲ್ಪಿ ಕೆ.ಆರ್. ನಾಯ್ಕ್, ಆಡಳಿತ ಅಧಿಕಾರಿ ಸುಮಂಗಲ ಹೊಂಗಲ್, ಉಗ್ರಾಣಾಧಿಕಾರಿ ಮಂಜುಳಾ ದಂಡಿಗದಾಸರ, ಸಹಾಯಕ ಭದ್ರತಾ ಅಧಿಕಾರಿ, ಮಂಜುನಾಥ ಕಡ್ಲಿಕೊಪ್ಪ, ಸಹಾಯಕ ಲೆಕ್ಕಾಧಿಕಾರಿ ಅತ್ತಾರ್, ಘಟಕ ವ್ಯವಸ್ಥಾಪಕ ಪ್ರಶಾಂತ್ ಸಂಗ್ರೇಶಿ ಉಪಸ್ಥಿತರಿದ್ದರು. ಐ. ಐ ಕಡ್ಲಿಮಟ್ಟಿ ಸಹಾಯಕ ಕಾರ್ಮಿಕ ಕಲ್ಯಾಣ ಅಧಿಕಾರಿಗಳು ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಚೌಡಕಿ ಸಹಾಯಕ ಅವರು ವಂದಿಸಿದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ