NEWSಆರೋಗ್ಯನಮ್ಮರಾಜ್ಯ

ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಂಜಾಬ್‌ನ ಪಟಿಯಾಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶುಕ್ರವಾರ ಕರ್ನಾಟಕದ ರೈತ ನಾಯಕ ಕುರುಬೂರು ಶಾಂತಕುಮಾರ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಅವರು ಪಟಿಯಾಲದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೀಗಾಗಿ ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸಿದ್ದು, ಕುರುಬೂರು ಶಾಂತಕುಮಾರ್ ಅವರನ್ನು ಪಂಬಾಜ್‌ನಿಂದ ಬೆಂಗಳೂರಿಗೆ ಕರೆತರಲು ಸೂಕ್ತ ವ್ಯವಸ್ಥೆ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ನಮ್ಮ ಸರ್ಕಾರ ವ್ಯವಸ್ಥೆ ಮಾಡಿದೆ. ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಿದ್ದಾರೆ. ಇನ್ನು ಈ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದೆಹಲಿಯಿಂದ ಕನೂರಿಯಲ್ಲಿ ಆಯೋಜಿಸಿದ್ದ ರೈತರ ಸಭೆಗೆ ತೆರಳುತ್ತಿದ್ದಾಗ ಪಂಜಾಬ್‌ನಲ್ಲಿ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ತುಮಕೂರು: ಡಿಸಿ ಚಂದ್ರಶೇಖರ್ ಅಮಾನತಿಗೆ ದೂರುಕೊಟ್ಟು ಎಂಡಿಗೆ ಒತ್ತಾಯ KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- ಮುಖ್ಯ ಸಿಬ್ಬಂದಿ ವ್ಯವಸ... KSRTC ಉತ್ತಮ ಸಾಧನೆ ತೋರಿದ ಡಿಸಿಗಳು, ಉಸ್ತುವಾರಿ ಅಧಿಕಾರಿಗಳು, ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!! KSRTC ಚಾಲನಾ ಸಿಬ್ಬಂದಿಗಳು ಅಮ್ಮನ್.., ಅಕ್ಕನ್.. ಅಂತ ಬೈಸಿಕೊಳ್ಳೋದಕ್ಕೆ ಇರುವವರಲ್ಲ: ಶಿಲ್ಪ ಆರ್‌.ಗೌಡ ಗೆದ್ದಲು ಹಿಡಿದು ನುಸಿಯಾದ ಕೆನರಾ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ ಈ ಬಾರಿ ಬೀಡನಹಳ್ಳಿ ಹೊರತುಪಡಿಸಿ ಆರೂರುಗಳಲ್ಲಿ ಇಂದು- ನಾಳೆ ಮಾರಿಹಬ್ಬ ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್‌ ಮಂಡನೆ: ಸಿಎಂ ಸಿದ್ದರಾಮಯ್ಯ KSRTC: ಸರಿಸಮಾನ ವೇತನ ಘೋಷಣೆ ಮಾಡಿ ಇಲ್ಲ ತೀವ್ರ ಹೋರಾಟ- ಎಚ್ಚರಿಕೆ ಕೊಟ್ಟ 4 ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರು ಮಂಡ್ಯ: ಆಟವಾಡುತ್ತ ಅಣ್ಣ ಸಿಡಿಸಿದ ಗುಂಡಿಗೆ ಮೂರು ವರ್ಷದ ತಮ್ಮ ಬಲಿ