ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಪರಿಹಾರ ಕೊಡಿ: ಇಂಧನ ಸಚಿವ ಜಾರ್ಜ್ಗೆ ರೈತ ಸಂಘ ಮನವಿ

ಮೈಸೂರು: ರೈತರ ಜಮೀನಿನ ಮೇಲೆ 66/11 ಕೆವಿ ಮತ್ತು 220 ಕೆವಿ ಸಾಮರ್ಥ್ಯದ ವಿದ್ಯುತ್ ಪ್ರಸರಣ ನಿಗಮದ ತಂತಿ ಹಾದು ಹೋಗಿದ್ದು, ಕೆಳಗೆ ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಭೂ ಪರಿಹಾರ ಕೊಡಿ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದ ವತಿಯಿಂದ ಇಂಧನ ಸಚಿವರಿಗೆ ಒತ್ತಾಯಿಸಲಾಯಿತು.
ಇಂದು ಮೈಸೂರು ಜಿಲ್ಲಾ ಘಟಕ ನಿಯೋಗ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಹುಣಸೂರು ಉಪ ವಿಭಾಗದ ಗೆಜ್ಜೆಯನವಡ್ಡರಗುಡಿ ಗ್ರಾಮದ ಮಿನಿ ಸ್ಟೇಷನ್ನಿಂದ ಹಾದು ಹೋಗುವ ಲೈನುಗಳ ಊರುಗಳು ಗೆಜ್ಜೆಯನ ವಡ್ಡರಗುಡಿ, ಧರ್ಮಾಪುರ, ಕರಿಮುದ್ದನಹಳ್ಳಿ, ಆಸ್ಪತ್ರೆ ಕಾವಲ್, ಬಸ್ತಿ ಮಾರನಹಳ್ಳೀ, ಹಳ್ಳದ ಕೊಪ್ಪಲು, ಉದ್ದೂರು ಕಾವಲ್, ತರಿಕಲ್, ತರಿಕಲ್ ಕಾವಲ್ ಮುಂತಾದ ಗ್ರಾಮಗಳ ರೈತರ ಜಮೀನುಗಳ ಮೇಲೆ ವಿದ್ಯುತ್ ಲೈನ್ ಹಾದು ಹೋಗಿರುವ ಮತ್ತು ಟವರ್ ನಿರ್ಮಾಣ ಮಾಡಿರುವ ಜಾಗಕ್ಕೆ ಭೂಮಿ ಪರಿಹಾರ ನೀಡುವ ಬಗ್ಗೆ ಯಾವುದೇ ಸ್ಪಷ್ಟವಾದ ಕ್ರಮ ಜಾರಿಯಾಗಿಲ್ಲ ಎಂದು ಸಚಿವರ ಗಮನಕ್ಕೆ ತಂದರು.
ಇನ್ನು ಅಧಿಕಾರಿಗಳು ಈ ಸಂಬಂಧ ಕಾರ್ಯ ನಿರ್ವಹಿಸಲು ಸಭೆ ನಡೆಸಿದ್ದು, ಜಮೀನಿನ ರೈತರ ಗಮನಕ್ಕೂ ತರದೆ ಹಾಗೂ ಅನುಮತಿ ಪಡೆಯದೆ ಸುಳ್ಳು ವರದಿ ಸೃಷ್ಟಿಸಿ, ರೈತರ ಕಣ್ಣಿಗೆ ಮಣ್ಣು ಎರಚುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಹಕ್ಕಿನ ಆದೇಶದ ಪ್ರತಿಯಂತೆ ರೈತರು ಮತ್ತು ಭೂ ಮಾಲೀಕರನ್ನು ಕರೆದು ದರ ನಿರ್ಧಾರ ಮಾಡಿದ್ದೇವೆಂದು 05-03-2024 ರಂದು ಉಪವಿಭಾಗಾಧಿಕಾರಿಗಳು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ.
ಪುನಃ ಮಾಹಿತಿ ಹಕ್ಕಿನಡಿಯಲ್ಲಿ ಯಾವ ರೈತರು, ಜಮೀನುಗಳ ಮಾಲೀಕರು ಸಭೆಯಲ್ಲಿ ಹಾಜರಿದ್ದರು ಎಂದು ಮಾಹಿತಿ ಹಕ್ಕಿನಡಿ ಕೋರಿದಾಗ ಯಾರು ಸಭೆಯಲ್ಲಿ ಹಾಜರಾತಿಗೆ ಸಮ್ಮತಿಸದೇ ನಿರಾಕರಿಸಿದ್ದಾರೆ ಎಂದು ಸುಳ್ಳು ಹೇಳಿರುತ್ತಾರೆ. ಇದು ರೈತರು ಸಭೆಗೆ ಗೈರು ಆಗಿರುವ ಬಗ್ಗೆ ಸ್ಪಷ್ಟ ಸಂದೇಶ ನೀಡುತ್ತದೆ.
ಮತ್ತೆ ರೈತರ ಜಮೀನಿಗೆ ನ್ಯಾಯ ಸಮ್ಮತ ದರ ನಿರ್ಧಾರವಾಗಿರುವುದು ಕಂಡು ಬಂದಿಲ್ಲ. ಈ ಭಾಗದ ರೈತರ ಜಮೀನುಗಳ ಬೆಲೆ 1 ಕುಂಟೆಗೆ 2 ಲಕ್ಷ ರೂಪಾಯಿ ಮಾರಾಟವಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರು ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದು ನ್ಯಾಯಸಮ್ಮತ ಬೆಲೆ ನಿಗದಿಮಾಡಿ ನಾಲ್ಕು ಪಟ್ಟು ಹೆಚ್ಚಿಗೆ ಕೊಡಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ವಿದ್ಯುತ್ ನಿಗಮದ ಅಧಿಕಾರಿಗಳು ರೈತರ ಅನುಮತಿ ಪಡೆಯದೇ, ಲೈನ್ಗಳನ್ನು ಚಾರ್ಜ್ ಮಾಡಿರುತ್ತಾರೆ ರೈತರು ಸಭೆಗೆ ಭಾಗವಹಿಸದೇ ಇರುವ ಬಗ್ಗೆ ಮಾಹಿತಿ ಹಕ್ಕಿನ ಪ್ರತಿ ಲಗತ್ತಿಸಿದೆ. ಕೇವಲ ವಿದ್ಯುತ್ ಪ್ರಸರಣಾ ನಿಗಮದ ಅಧಿಕಾರಿಗಳು ನಿರ್ಧಾರ ಮಾಡಿ ಭೂಮಿ ಮೌಲ್ಯವನ್ನು ನಿಗದಿ ಪಡಿಸಿರುವ ಬಗ್ಗೆ ಆದೇಶದ ಪ್ರತಿಯನ್ನೂ ಲಗತ್ತಿಸಿದೆ.
ಅದೇ ರೀತಿ ಮೈಸೂರು ತಾಲೂಕು ಕಡಕೋಳದಿಂದ ವಾಜಮಂಗಲಕ್ಕೆ ಹೋಗುವ 220 ಕೆವಿ ಈ ಯೋಜನೆಗೆ ಸಂಬಂಧಪಟ್ಟಂತೆ ಕೂಡನಹಳ್ಳಿ, ದೇವಲಾಪುರ, ಮಾರಶೆಟ್ಟಳ್ಳಿ, ಜೋರನಹಳ್ಳಿ, ವರುಣ, ವಾಜಮಂಗಲ ಹಳ್ಳಿಗಳ ರೈತರಿಗೂ ಸರಿಯಾದ ಪರಿಹಾರ ನೀಡದೆ ದಬ್ಬಾಳಿಕೆಯಿಂದ ಕೆಲಸ ಮಾಡಲು ಹೋಗಿದ್ದಾರೆ. ಹಳ್ಳಿಗಳಲ್ಲಿರುವ ರೈತರ ಜಮೀನುಗಳ ಅಕ್ಕ ಪಕ್ಕದಲ್ಲಿ ಲೇಔಟ್ಗಳು ಇದ್ದು ಒಂದು ಗುಂಟೆಗೆ ₹6 ಲಕ್ಷದಿಂದ 10 ಲಕ್ಷಗಳವರೆಗೆ ಬೆಲೆ ಆಗುತ್ತಿದೆ. ಇಲಾಖೆಯವರು ಕೇವಲ 50,000- 60,000 ರೂ. ಹೇಳುತ್ತಿದ್ದಾರೆ ಆದ್ದರಿಂದ ಒಂದು ಗುಂಟೆಗೆ ಕನಿಷ್ಠ 6 ಲಕ್ಷ ರೂ. ನಿಗದಿ ಮಾಡಬೇಕೆಂದು ಮನವಿ ಮಾಡಿದರು.
ಕೃಷಿ ಪಂಪ್ ಸೆಟ್ ಬಳಕೆ ರೈತರಿಗೆ ಆಧಾರ್ ನೋಂದಣಿ ಮಾಡಿ ಮೀಟರ್ ಅಳವಡಿಕೆ ಕೈ ಬಿಡಬೇಕು. ಅಕ್ರಮ ಸಕ್ರಮ ಯೋಜನೆ ಮುಂದುವರಿಸಿ ಕೃಷಿ ಪಂಪ್ ಸೆಟ್ ವಿದ್ಯುತ್ ಬಳಕೆ ರೈತರಿಗೆ 5000 ರೂ. ಕಟ್ಟಿಸಿಕೊಂಡು ಸಂಪರ್ಕ ಕಲ್ಪಿಸಿ ಕೊಡಬೇಕು. ಹೈ ಪವರ್ ವಿದ್ಯುತ್ ತಂತಿ ಹಾದು ಹೋಗಿರುವ ಜಮೀನುಗಳ ರೈತರಿಗೆ ಕೃಷಿ ಪಂಪ್ ಸೆಟ್ ವಿದ್ಯುತ್ ಬಳಕೆಗೆ ಸರ್ಕಾರದಿಂದಲೇ ಉಚಿತ ಸಂಪರ್ಕ ಕಲ್ಪಿಸಿ ಕೊಡಬೇಕು.
ರೈತರು ತಮ್ಮ ತೋಟ ಹಾಗೂ ಕೃಷಿ ಜಮೀನಿನಲ್ಲಿ ವಾಸದ ಮನೆ ನಿರ್ಮಾಣ ಮಾಡಿ ಕೊಂಡಿರುವ ರೈತರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಟ್ಟು ವಿದ್ಯಾರ್ಥಿಗಳಿಗೆ ಹಾಗೂ ವಯೋ ವೃದ್ಧರಿಗೆ ಬೆಳಕಿನ ವ್ಯವಸ್ಥೆಗೆ ಅನುಕೂಲ ಮಾಡಿಕೊಡಬೇಕು. ಮೇಲ್ಕಂಡ ಸಮಸ್ಯೆಗಳ ಬಗ್ಗೆ ಗಂಭೀರತೆಯಿಂದ ಅಗತ್ಯ ಕ್ರಮ ಕೈಗೊಂಡು ರೈತರಿಗೆ ಅನುಕೂಲ ಮಾಡಿ ಕೊಡಬೇಕೆಂದು ಜಿಲ್ಲಾ ಘಟಕದಿಂದ ಒತ್ತಾಯಿಸಿಲಾಯಿತು.
ಇಂದಿನ ನಿಯೋಗದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಗೌರವಾಧ್ಯಕ್ಷ ಧನಗಹಳ್ಳಿ ಕೆಂಡಗಣಪ್ಪ, ಮುಖಂಡರಾದ ವರಕೊಡು ನಾಗೇಶ್, ವಾಜಮಂಗಲ ಮಹಾದೇವ, ಕೂಡನಹಳ್ಳಿ ಸೋಮಣ್ಣ, ದೊಡ್ಡ ಕಾಟೂರು ಮಾದೇವಸ್ವಾಮಿ, ಬನ್ನೂರು ಸೂರಿ, ಸಾತಗಳ್ಳಿ ಬಸವರಾಜು, ವಡ್ಡರಗುಡಿ ಮಾದೇವಸ್ವಾಮಿ, ಚಂದ್ರು, ಪುಟ್ಟಸ್ವಾಮಿ, ಶಿವಣ್ಣ, ಮಹೇಶ್, ಮಲ್ಲಣ್ಣ, ಸೇರಿದಂತೆ 40 ಕ್ಕೂ ಹೆಚ್ಚು ರೈತರು ಇದ್ದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...