- ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ
ಬೆಗಳೂರು ಗ್ರಾಮಾಂತರ: ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ಉಪ ನಿರ್ದೇಶಕರು ರೈತರಲ್ಲಿ ಮನವಿ ಮಾಡಿದ್ದಾರೆ.
ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಠಾನ ಮಾಡಲಾಗಿದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿದೆ. ತದನಂತರ ತೋಟಗಾರಿಕಾ/ ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿವೆ.
ಈ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವುದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.
ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ತಿಳಿಸಿದೆ.
ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ. ಈ ನಿಟ್ಟಿನಲ್ಲಿ ರೈತರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.
ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಕೃಷಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Related


You Might Also Like
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...