NEWSಕೃಷಿನಮ್ಮಜಿಲ್ಲೆ

ಕಬ್ಬಿಗೆ 3500 ರೂ. ಬೆಂಬಲ ಬೆಲೆ ಕೊಡಲೇಬೇಕು ಪಟ್ಟು ಬಿಡದೆ ರೈತರು ತ್ರೀವ್ರಗೊಂಡ ಹೋರಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸಿಹಿ ಕಬ್ಬಿನ ಬೆಲೆಗಾಗಿ ಹೊತ್ತಿದ್ದ ಕಿಚ್ಚು ಇನ್ನೂ ಆರಿಲ್ಲ. ಈಗಾಗಲೇ ಟನ್‌ ಕಬ್ಬಿಗೆ ಸರ್ಕಾರ 3300 ರೂ. ಘೋಷಣೆ ಮಾಡಿದೆ. ಇದನ್ನು ಕೆಲ ರೈತರು ಒಪ್ಪಿದ್ದಾರೆ. ಆದರೆ ಇನ್ನೂ ಕೆಲವು ಅನ್ನದಾತರು ನಮಗೆ 3500 ರೂ. ಬೇಕೇ ಬೇಕು ಎಂದು ಪಟ್ಟು ಹಿಡಿದು ಹೋರಾಟ ತೀವ್ರಗೊಳಿಸಿದ್ದಾರೆ.

ಹೀಗಾಗಿ ವಿಜಯಪುರ, ಕಲಬುರ್ಗಿ ನಂತರ ಬಾಗಲಕೋಟೆ, ಬೀದರ್​ನಲ್ಲಿ ರೈತರ ಹೋರಾಟ ಮುಂದುವರಿದಿದ್ದು, ಭಾರಿ ತೀವ್ರತೆ ಪಡೆದುಕೊಂಡಿದೆ.

ಬೆಳಗಾವಿಯ ಗುರ್ಲಪುರದ ಬಳಿಕ ಬಾಗಲಕೋಟೆಯಲ್ಲಿ ಶುರುವಾದ ರೈತಾಕ್ರೋಶ ಮೂರು ದಿನಗಳಾದ್ರೂ ತಣ್ಣಗಾಗಿಲ್ಲ. ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ನೂರಾರು ರೈತರು ಇಂದು ಮುಧೋಳದಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಕಸಬಾ ಜಂಬಗಿ ಕ್ರಾಸ್​ನಲ್ಲಿ ಹೆದ್ದಾರಿ ತಡೆದು, ರಸ್ತೆ ಮೇಲೆ ಮುಳ್ಳು ಕಂಟಿಹಾಕಿ ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲ, ರಸ್ತೆ ಮಧ್ಯೆಯೇ ಅಡುಗೆ ಮಾಡಿ ರೈತರು ಧರಣಿ ಕುಳಿತಿದ್ದಾರೆ. ಸರ್ಕಾರ ಸ್ಪಂದಿಸುವವರೆಗೂ ನಾವು ಹೋರಾಟ ನಿಲ್ಲಿಸಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

ಅಲ್ಲದೇ, ಪ್ರತಿಭಟನೆ ಮಾಡುತ್ತಿದ್ದ ಕಬ್ಬು ಬೆಳೆಗಾರರಿಗೆ ಕಸಬಾ ರೈತರು ಕೂಡ ಸಾಥ್ ನೀಡಿದ್ದಾರೆ. ಹೆದ್ದಾರಿ ತಡೆದಿದ್ದ ಪರಿಣಾಮ ಅನೇಕ ವಾಹನ ಸವಾರರಿಗೆ ಕಿರಿಕಿರಿ ಉಂಟಾಯಿತು. ಸ್ಥಳಕ್ಕೆ ಪೊಲೀಸ್ ವಾಹನ ಬಂದರೂ ಪಟ್ಟು ಬಿಡದೆ ರೈತರು ಪ್ರತಿಭಟನೆ ಮುಂದುವೆಸಿದ್ದರು.

ಬೀದರ್​ನಲ್ಲೂ ಕಬ್ಬು ಬೆಳೆಗಾರರ ಪ್ರತಿಭಟನೆ ತಾರಕಕ್ಕೇರಿತ್ತು. ಕೈಯಲ್ಲಿ ಕಬ್ಬು ಹಿಡಿದು ಬಂದಿದ್ದ ರೈತರು ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಕೈಯಲ್ಲಿ ಸಿದ್ದರಾಮಯ್ಯ ಹಾಗೂ ಶಿವಾನಂದ್ ಪಾಟೀಲ್​ ಅವ್ರ ಶ್ರದ್ಧಾಂಜಲಿ ಬ್ಯಾನರ್ ಹಿಡಿದು ಆಕ್ರೋಶ ಹೊರಹಾಕಿದರು.

ಇನ್ನು ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಬ್ಯಾನರ್​ ಇಳಿಸುವಂತೆ ಸೂಚನೆ ಕೊಟ್ಟರು ಇಷ್ಟಾದ್ರೂ ರೈತರ ಆಕ್ರೋಶ ತಣ್ಣಗಾಗಲಿಲ್ಲ. ಇದು ಇನ್ನಷ್ಟು ತೀವ್ರಗೊಂಡಿದೆ.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ