NEWSಕೃಷಿದೇಶ-ವಿದೇಶವಿಡಿಯೋ

 ದೆಹಲಿಯಲ್ಲಿ ಬೃಹತ್ ರೈತರ ರ‍್ಯಾಲಿ- ರೈತರ ಸಾಲ ಮನ್ನಾ ಮಾಡಬೇಕು : ಕುರುಬೂರು ಶಾಂತಕುಮಾರ್ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲಿ ಮೂರುವರೆ ಲಕ್ಷ ರೈತರು ಕೃಷಿ ಸಂಕಷ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ಕೊರೊನಾ ಲಾಕ್ಡೌನ್ ಸಂಕಷ್ಟದಿಂದ ನಲುಗಿದ್ದಾರೆ. ಆದಕಾರಣ ದೇಶದ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ ರೀತಿಯಲ್ಲಿ, ರೈತರ ಸಾಲ ಮನ್ನಾ ಮಾಡ ಬೇಕು ಎಂದು ದಕ್ಷಿಣ ಭಾರತ ರಾಜ್ಯಗಳ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದೆಹಲಿಯ ಜಂತರ್ ಮಂತರ್‌ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಕರ್ನಾಟಕ ವತಿಯಿಂದ ಇಂದು (ಆ.22) ಹಮ್ಮಿಕೊಂಡಿದ್ದ ರೈತರ ಬೃಹತ್ ರ‍್ಯಾಲಿಯಲ್ಲಿ ಮಾತನಾಡಿದರು.

ಫಸಲ್ ಭೀಮಾ ಬೆಳೆವಿಮೆ ಯೋಜನೆ ಮಾನದಂಡ ಬದಲಾಯಿಸ ಬೇಕು. ವಿಶ್ವವ್ಯಾಪಾರ ಒಪ್ಪಂದ ಡಬ್ಲ್ಯುಟಿಒ ನಿಂದ ಭಾರತ ಸರ್ಕಾರ ಹೊರಬರ ಬೇಕು. ಲಕ್ಷ್ಮೀಪುರ ಕೇರಿ ಪ್ರಕರಣದಲ್ಲಿ ಭಾಗಿಯಾಗಿರುವ ಕೇಂದ್ರದ ರಾಜ್ಯ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ಇನ್ನು ಪ್ರಮುಖವಾಗಿ ದೆಹಲಿ ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗ ಕೇಂದ್ರ ಸರ್ಕಾರ ನವೆಂಬರ್ ತಿಂಗಳಲ್ಲಿ ಮೂರು ಕೃಷಿ ಕಾಯ್ದೆ ರದ್ದು ಮಾಡಿದಾಗ ನೀಡಿದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಭರವಸೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ MSP ಕಾತರಿ ಕಾನೂನು ಜಾರಿಗೆ ತರಬೇಕು, ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. 2022ರ ವಿದ್ಯುತ್ ಕಾಯ್ದೆ ಖಾಸಗೀಕರಣ ತಿದ್ದುಪಡಿ ಕೈಬಿಡಬೇಕು ಎಂದು ಒತ್ತಾಯಿಸಿದರು.

ಕಬ್ಬಿನ ಎಫ್‌ಆರ್‌ಪಿ ದರ ಪುನರ್ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ನಿಗದಿ ಮಾಡಬೇಕು. ಕೃಷಿ ಉತ್ಪನ್ನಗಳು ಹಾಗೂ ಉಪಕರಣಗಳ ಮೇಲಿನ ಜಿಎಸ್ಟಿ ರದ್ದುಪಡಿಸ ಬೇಕು ಎಂಬುವುದು ಸೇರಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಮೋರ್ಚಾ ವತಿಯಿಂದ ಬೃಹತ್ ರೈತರ ರ‍್ಯಾಲಿ ನಡೆಸುತ್ತಿದ್ದು, ಇಂದು ದೇಶದ ಪ್ರಧಾನಿಯವರನ್ನು ಎಚ್ಚರಿಸುವ ಸಲುವಾಗಿ ಈ ರ‍್ಯಾಲಿ ನಡೆಸಲಾಗುತ್ತಿದೆ. ಇದರಿಂದ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್‌ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

ರೈತರ ರ‍್ಯಾಲಿಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳಿಂದ ನೂರಾರು ರೈತರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ