NEWSಕೃಷಿನಮ್ಮರಾಜ್ಯ

ತ್ರೀವ್ರಗೊಂಡ ರೈತರ ಹೋರಾಟ: ಕಬ್ಬು ತುಂಬಿದ 50ಕ್ಕೂ ಹೆಚ್ಚು ಟ್ರ‍್ಯಾಕ್ಟರ್ ಟ್ರೇಲರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಬಾಗಲಕೋಟೆಯ ಮುಧೋಳದ ಮಾಹಾಲಿಂಗಪುರ ಪಟ್ಟಣ ಬಳಿಯ ಸಂಗಾನಟ್ಟಿ ಕ್ರಾಸ್ ಬಳಿ ಕಬ್ಬಿನ ಟ್ರ‍್ಯಾಕ್ಟರ್ ಟ್ರೇಲರ್ ಪಲ್ಟಿ ಮಾಡಿ ಕಬ್ಬಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 50ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದು, ಸಾವಿರಾರು ಟನ್‌ ಕಬ್ಬು ಭಸ್ಮವಾಗಿದೆ.

ಆರಂಭದಲ್ಲಿ ನಿಪ್ಪಾಣಿ- ಮಹಾಲಿಂಗಪುರ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಪ್ರತಿ ಟನ್ ಕಬ್ಬಿಗೆ 3,500 ರೂ. ಕೊಡಬೇಕೆಂದು ಆಗ್ರಹಿಸಿದ್ದ ರೈತರು, ಸೈದಾಪುರ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.

ಆ ಬಳಿಕ ತಾಳ್ಮೆ ಕಳೆದುಕೊಂಡ ರೈತರು ಮಹಲಿಂಗಪುರ-ನಿಪ್ಪಾಣಿ ರಸ್ತೆಯಲ್ಲಿರುವ ಸೈದಾಪುರ ಸಕ್ಕರೆ ಕಾರ್ಖಾನೆ ಅವರಣದಲ್ಲಿನ ಕಬ್ಬು ತುಂಬಿದ ಟ್ರ‍್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. 50ಕ್ಕೂ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿ ಕಣ್ಣೀರಿಟ್ಟಿದ್ದಾರೆ. ಇದರಿಂದ ಸಾವಿರಾರು ಟನ್‌ ಕಬ್ಬು ಸುಟ್ಟು ಭಸ್ಮವಾಗಿದೆ. ಸ್ಥಳದಲ್ಲಿ 200ಕ್ಕೂ ಅಧಿಕ ಟ್ರ್ಯಾಕ್ಟರ್‌ಗಳನ್ನ ನಿಲ್ಲಿಸಲಾಗಿತ್ತು.

ಇನ್ನೂ ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಯ ವೇಳೆ ಕಲ್ಲು ತೂರಿದ ಆರು ಆರೋಪಿಗಳನ್ನು ಬಂಧಿಸಲಾಗಿದೆ.

ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ನವೆಂಬರ್ 7ರಂದು ಘಟನೆ ನಡೆದಿತ್ತು. ರೈತರ ಹೋರಾಟದಲ್ಲಿ ಕಿಡಿಗೇಡಿಗಳು ಸೇರಿದ್ದಾರೆ ಎಂದು ಮಾಹಿತಿ ಸಿಕ್ಕಿತ್ತು. ಕೆಲವರನ್ನು ವಶಕ್ಕೆ ಪಡೆಯುತ್ತಿದ್ದ ವೇಳೆ ಕಲ್ಲು ತೂರಾಟ ಆಗಿತ್ತು. ಈ ವೇಳೆ ಡಿವೈಎಸ್ಪಿ ಮಹಾಂತೇಶ್ ಸಜ್ಜನ್ ಸೇರಿ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಆರೋಪಿಗಳ ವಿರುದ್ಧ ದೊಂಬಿ, ಗುಂಪು ಗಲಭೆ, ಮಾರಣಾಂತಿಕ ಹಲ್ಲೆ ಪ್ರಕರಣದಡಿ ಕೇಸ್ ದಾಖಲಾಗಿದೆ. ಇತ್ತ, ನ.6ರಂದು ಬಿಡದಿ ಟೌನ್‌ಶಿಪ್ ವಿರುದ್ಧ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ 9 ರೈತರ ಮೇಲೆ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ