ಕಬ್ಬೂರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರೂ ಚಾಲಕರು ಸೇರಿದಂತೆ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿರುವ ಘಟನೆ ಕಬ್ಬೂರ ಪಟ್ಟಣದ ನಿಪ್ಪಾಣಿ-ಮುಧೋಳ ರಸ್ತೆಯ ಚಿಕ್ಕೋಡಿ ಉಪಕಾಲುವೆ ಬಳಿ ನಡೆದಿದೆ.
ಈ ಭೀಕರ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಬಸ್ ಹಾಗೂ ಲಾರಿಯ ಮುಂಭಾಗಳು ನಜ್ಜುಗುಜ್ಜಾಗಿವೆ. ಅಪಘಾತದಿಂದ ಲಾರಿ ಒಳಗಡೆ ಸಿಲುಕಿದ ಚಾಲಕನನ್ನು ಹೊರ ತೆಗೆಯಲು ಸ್ಥಳೀಯರು ಪರದಾಡಿದರು.

ಇನ್ನು ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಆ ಎಲ್ಲ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರೀಶಿಲಿಸಿದರು. ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

Megha
 










