CRIMENEWSನಮ್ಮಜಿಲ್ಲೆ

ಸಿಲಿಂಡ‌ರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ಹೊತ್ತಿಕೊಂಡ ಬೆಂಕಿ: ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತ

ವಿಜಯಪಥ ಸಮಗ್ರ ಸುದ್ದಿ

ಹುಣಸೂರು: ಮನೆಯಲ್ಲಿ ಗ್ಯಾಸ್ ಸಿಲಿಂಡ‌ರ್ ಬದಲಾಯಿಸುವ ವೇಳೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಗರದ ಕಲ್ಕುಣಿಕೆ ಬಡಾವಣೆಯಲ್ಲಿ ನಡೆದಿದೆ.

ನಗರದ ಕಲ್ಕುಣಿಕೆ ಕುರ್ಜನ್ ಬೀದಿಯ ನಿವಾಸಿಗಳಾದ ನಿಂಗರಾಜ್ ಎಂಬುವರ ಪತ್ನಿ ಜ್ಯೋತಿ (38) ಹಾಗೂ ಲೇ.ಜಯರಾಮ ಎಂಬುವರ ಪತ್ನಿ ನಾಗಮ್ಮ (55) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ನಗರದ ಕಲ್ಕುಣಿಕೆ ಕುರ್ಜನ್ ಬೀದಿಯ ಆಟೋ ಚಾಲಕ ನಿಂಗರಾಜು ಅವರ ಮನೆಯಲ್ಲಿ ಗ್ಯಾಸ್ ಸಿಲಿಂಡ‌ರ್ ಬದಲಾಯಿಸುವ ವೇಳೆ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಐವರಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು.

ಬಳಿಕ ಅವರನ್ನು ಹುಣಸೂರಿನ ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜ್ಯೋತಿ ಹಾಗೂ ನಾಗಮ್ಮ ಅಸುನೀಗಿದ್ದಾರೆ.

ಇನ್ನು ನಿಂಗರಾಜ್, ರಾಣಿಯಮ್ಮ, ಶೀಲ ಸೇರಿದಂತೆ ಮೂವರು ಕೆ.ಆರ್.ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಂಗರಾಜು ಅವರ ಮಕ್ಕಳು ಅಜ್ಜಿಯ ಮನೆಗೆ ತೆರಳಿದ್ದರಿಂದ ಯಾವುದೇ ಅನಾಹುತವಾಗಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ