ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 36 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆ ಮಂಗಳವಾರವೂ ಮುಂದುವರಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಯಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಕೆಲವೆಡೆ ಮನೆಗಳಿಗೆ ನೀರುನುಗ್ಗಿ ಅವಾಂತರ ಸೃಷ್ಟಿಸಿದರೆ ಇನ್ನೂ ಹಲವೆಡೆ ಸಂಚಾರ ದಟ್ಟಣೆ ಉಂಟಾಯಿತು.
ಇನ್ನು ಈ ಮಳೆಯಿಂದ ರಾಜ್ಯದಲ್ಲಿ ಭಾರಿ ಅನಾಹುತಗಳೆ ನಡೆದಿದ್ದು ಐವರು ಮೃತಪಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಸಾಯಿ ಲೇಔಟ್ ದ್ವೀಪದಂತ್ತಾಗಿದೆ. ಇಲ್ಲಿನ ಮನೆಗಳ ನೆಲ ಮಹಡಿ ಅರ್ಧ ಮುಳುಗಿದ್ದು, ಜನರು ಮನೆಗಳಿಂದ ಹೊರಬರಲು ಸಾಧ್ಯವಾಗದಷ್ಟು ಅವಾಂತರ ಸೃಷ್ಟಿಸಿದೆ.
ಸೋಮವಾರ ಅಂದರೆ ನಿನ್ನೆ ಸುಮಾರು 150 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾಯಿ ಲೇಔಟ್ನಲ್ಲಿ ಜನರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆಕೂಡ ಮಾಡಿತ್ತು.
ಇತ್ತ ಸಾಯಿ ಲೇಔಟ್ನ ನಿವಾಸಿಗಳ ಸಂಕಷ್ಟಕ್ಕೆ ಪಾಲಿಕೆ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳು ಕೂಡ ನಿವಾಸಿಗಳಿಂದ ಕೇಳಿ ಬರುತ್ತಿವೆ. ನಗರದ ಹೆಣ್ಣೂರಿನಲ್ಲಿರುವ ಅನಾಥಾಶ್ರಮವು ಸಹ ಮಳೆಯ ತೀವ್ರತೆಯನ್ನು ಅನುಭವಿಸಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ, ವಿಪತ್ತು ನಿರ್ವಹಣಾ ಪಡೆ ಅನಾಥಾಶ್ರಮದ ಜನರನ್ನು ರಕ್ಷಿಸಿ ಸುರಕ್ಷಿತವಾಗಿರಿಸಿದೆ.
ಬಹುರಾಷ್ಟ್ರೀಯ ಕಂಪನಿಗಳ ಕಚೇರಿಗಳನ್ನು ಹೊಂದಿರುವ ಮಾನ್ಯತಾ ಟೆಕ್ ಪಾರ್ಕ್ ಬಳಿ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ಸೇರಿದಂತೆ ಹಲವು ಸ್ಥಳಗಳಲ್ಲಿ ಮೊಣಕಾಲಿನವರೆಗೆ ತುಂಬಿದ ನೀರಿನಲ್ಲಿ ಪ್ರಯಾಣಿಕರು ಕಷ್ಟಪಟ್ಟು ಪ್ರಯಾಣಿಸಬೇಕಾಯಿತು. ನಗರದ ರಸ್ತೆಗಳಲ್ಲಿ ಹೊಸ ಗುಂಡಿಗಳು ಕಾಣಿಸಿಕೊಂಡು ವಾಹನ ಸವಾರರಿಗೆ ಅಪಾಯವನ್ನುಂಟುಮಾಡಿದವು. ನೀರು ತುಂಬಿದ್ದರಿಂದ ವಾಹನಗಳು ಹಳ್ಳಕ್ಕೆ ಬಿದ್ದು ಸಿಲುಕಿಕೊಂಡಿದ್ದವು. ಇದರಿಂದ ಹಲವು ಭಾಗಗಳಲ್ಲಿ ದೀರ್ಘಕಾಲದವರೆಗೂ ಸಂಚಾರ ದಟ್ಟಣೆ ಉಂಟಾಯಿತು.
ಇನ್ನು ಮೈಕೋ ಲೇಔಟ್ ಒಂದರ ಅಪಾರ್ಟ್ಮೆಂಟ್ಗೆ ನುಗ್ಗಿದ ಮಳೆನೀರನ್ನು ಹೊರಹಾಕಲು ಪ್ರಯತ್ನಿಸುತ್ತಿದ್ದಾಗ 12 ವರ್ಷದ ಬಾಲಕ ಸೇರಿದಂತೆ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬಿಟಿಎಂ 2 ನೇ ಹಂತದ ಬಳಿಯ ಎನ್ಎಸ್ ಪಾಳ್ಯದ ಮಧುವನ್ ಅಪಾರ್ಟ್ಮೆಂಟ್ ನಿವಾಸಿ ಮನಮೋಹನ್ ಕಾಮತ್ (63) ನಿನ್ನೆ ಸಂಜೆ ತನ್ನ ಮನೆಯಿಂದ ನೀರನ್ನು ಹೊರಹಾಕಲು ಪಂಪ್ ಬಳಸಲು ಪ್ರಯತ್ನಿಸಿದ್ದರು.
ಪಂಪ್ನ್ನು ಸಾಕೆಟ್ಗೆ ಸಂಪರ್ಕಿಸಿದಾಗ, ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಆಘಾತಕ್ಕೆ ಒಳಗಾದರು. ಕಾಮತ್ ಬಳಿಯ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಕೆಲಸ ಮಾಡುತ್ತಿದ್ದ ನೇಪಾಳದ ವ್ಯಕ್ತಿಯ ಮಗ ದಿನೇಶ್ (12) ಕೂಡ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಎರಡೂ ಪ್ರಕರಣಗಳಲ್ಲಿ ಅಸ್ವಾಭಾವಿಕ ಸಾವಿನ ವರದಿಗಳು (ಯುಡಿಆರ್ಗಳು) ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ: ಸೋಮವಾರ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಂಪನಿಯಲ್ಲಿ ಕೆಲಸದಾಕೆ ಶಶಿಕಲಾ (35) ಎಂಬುವರ ಮೇಲೆ ಕಾಂಪೌಂಡ್ ಗೋಡೆ ಬಿದ್ದು ಮೃತಪಟ್ಟಿದ್ದಾರೆ. ಇನ್ನು ರಾಯಚೂರು ಮತ್ತು ಕಾರವಾರದಲ್ಲಿ ಸಿಡಿಲಿಗೆ ಇಬ್ಬರು ಮೃತಪಟ್ಟಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸುಮಾರು 30 ಮಿ.ಮೀ ಮಳೆಯಾಗಿದೆ. ಮೂರು ದಿನಗಳಿಂದ ಸುರಿದ ವರುಣನಿಂದ ನಗರದಲ್ಲಿ 105 ಮಿ.ಮೀ ಮಳೆ ದಾಖಲಾಗಿದೆ.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....