NEWSಸಂಸ್ಕೃತಿ

ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕ : ಮಾಜಿ ಶಾಸಕಿ ಪರಿಮಳ ನಾಗಪ್ಪ

ವಿಜಯಪಥ ಸಮಗ್ರ ಸುದ್ದಿ

ಹನೂರು : ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕವಾಗಿವೆ. ಅದು ಮನುಷ್ಯನಿಗೆ ಬದುಕುವ ದಾರಿಯನ್ನು ತೋರಿಸುತ್ತದೆ ಮಾಜಿ ಶಾಸಕಿ ಪರಿಮಳನಾಗಪ್ಪ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪಟ್ಟಣಸ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನಡೆದ ತಾಲೂಕು ಕನ್ನಡ ಜನಪದ ಪರಿಷತ್ ಘಟಕ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನಪದ ಸಾಹಿತ್ಯವನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಮೌಲ್ಯಗಳನ್ನು ತಿಳಿಸಿಕೊಡುವ ಕಾರ್ಯವನ್ನು ಜನಪದ ಪರಿಷತ್ ಮಾಡಬೇಕು. ಈ ಬಳಗವು ಗ್ರಾಮೀಣ ಪ್ರದೇಶದ ಮನೆ, ಮನೆಗೆ ಹೋಗಿ ಪ್ರತಿಭೆಗಳನ್ನು ಗುರುತಿಸಿ, ಹೊರತರುವ ಪ್ರಯತ್ನವನ್ನು ಮಾಡಬೇಕು ಎಂದರು.

ತಾಲೂಕು ಜಾನಪದ ಪರಿಷತ್‌ನ ಅಧ್ಯಕ್ಷರಾದ ಸಿ.ಕೆ.ಕೃಷ್ಣಕುಮಾರ್ ಮಾತನಾಡಿ, ಜನಪದ ಕಲೆ ರಾಜ್ಯಾದ್ಯಂತ ಪ್ರಬುದ್ದವಾಗಿ ಬೆಳೆಯುತ್ತಿದೆ, ಅದರಲ್ಲೂ ನಮ್ಮ ಜಿಲ್ಲೆಯು ಜನಪದ ತವರೂರು ಈ ಭಾಗದಲ್ಲಿ ನೆಲೆಸಿರುವ ಸಿದ್ದಪ್ಪಾಜಿ, ಮಂಟೇಸ್ವಾಮಿ, ಮಹದೇಶ್ವರ ಮೂಲ ಜಾನಪದಗಾರರು, ಆಗಾಗಿ ನಮ್ಮ ತಾಲೂಕಿನಲ್ಲಿ ಜಾನಪದ ಕಲೆ ಬೆಳೆಸುವ ಮೂಲಕ ರಾಜ್ಯದ ಎಲ್ಲೇಡೆ ಜಾನಪದ ಪರಿಷತ್ತು ಪಸರಿಸುವಂತಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಜನಪದ ಪರಿಷತ್ ಘಟಕದ ಅಧ್ಯಕ್ಷರಾಗಿ ಸಿ.ಕೆ ಕೃಷ್ಣಕುಮಾರ್, ಕಾರ್ಯದರ್ಶಿಯಾಗಿ ಮಹೇಶ್ ಎಂ, ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣ, ಜಂಟಿ ಕಾರ್ಯದರ್ಶಿಯಾಗಿ ಒಡೆಯರಪಾಳ್ಯದ ಸೋಮಶೇಖರ್, ಖಜಾಂಜಿಯಾಗಿ ಶ್ರೀನಿವಾಸ್, ಸಂಚಾಲಕರಾಗಿ ಬಸವರಾಜ್, ಬಂಗಾರಪ್ಪ, ಸದಸ್ಯರುಗಳಾಗಿ ಜಯಂತ್ ಕುಮಾರ್, ಭರತ್‌ಕುಮಾರ್, ಅನಿಲ್‌ಕುಮಾರ್, ಶಿವು ಪದಗ್ರಹಣ ಮಾಡಿದರು.

ಇದೇ ಸಂದರ್ಭದಲ್ಲಿ ಬಂಡಳ್ಳಿ ಮಠದ ಫಲಹಾರಪ್ರಭುದೇವಸ್ವಾಮಿಜಿ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಕನ್ನಡ ಜನಪದ ಪರಿಷತ್ ಘಟಕ ರಾಜ್ಯಾಧ್ಯಕ್ಷ ಜಾನಪದ ಬಾಲಾಜಿ, ಜಿಲ್ಲಾಧ್ಯಕ್ಷ ಸುರೇಶ್ ನಾಗ್, ಮುಖಂಡರಾದ ಪ್ರೀತನ್ ನಾಗಪ್ಪ, ಮುರುಡೇಶ್ವರ ಸ್ವಾಮಿ, ರಾಚಪ್ಪ, ಕಲಾವಿದ ರಾಮದಾಸ್, ಸಾಹಿತಿ ಗುರುಸ್ವಾಮಿ ಇದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ