NEWSಕೃಷಿದೇಶ-ವಿದೇಶನಮ್ಮರಾಜ್ಯ

ಮೈಸೂರಿನಿಂದ ರೈತರ ದೆಹಲಿ ಚಲೋಗೆ ಹೊರಟ ಅನ್ನದಾತರು: ಕುರುಬೂರು ಶಾಂತಕುಮಾರ್ ನೇತೃತ್ವ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು, ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು. 60ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಂಡಿರುವ ರೈತರ ದೆಹಲಿ ಚಲೋಗೆ ಮೈಸೂರಿನಿಂದ ನೂರಾರು ರೈತರು ಹೊರಟಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ದೆಹಲಿಯತ್ತ ಹೊರಡಲು ಸಿದ್ಧರಾಗಿ ಬಂದಿದ್ದ ರೈತರು, ರೈತ ಮಹಿಳೆಯರನ್ನು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ರೈತ ರತ್ನ ಕುರುಬೂರು ಶಾಂತಕುಮಾರ್ ಸ್ವಾಗತಿಸಿರು.

ದೆಹಲಿಯಲ್ಲಿ ಇದೇ ಫೆ.13 ರಂದು ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ಸಂಘಟನೆ ಕರೆ ನೀಡಿರುವುದನ್ನು ಬೆಂಬಲಿಸಿ ಕರ್ನಾಟಕದಿಂದಲೂ ನೂರಾರು ರೈತರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ದೆಹಲಿ ಕಡೆ ಅನ್ನದಾತರು ಹೊರಟರು.

ಇದೇ ವೇಳೆ ರೈಲ್ವೆ ನಿಲ್ದಾಣದಲ್ಲಿ ಮಾತನಾಡಿದ ಕುರುಬೂರ್ ಶಾಂತಕುಮಾರ್, ಕೇಂದ್ರ ಸರ್ಕಾರ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ರೈತರ ಹಿತ ಶಕ್ತಿಯನ್ನು ಕಾಪಾಡಬೇಕು. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಭಾರತರತ್ನ ನೀಡಿ ಗೌರವಿಸುವ ಸರ್ಕಾರ ಅವರು ರೈತರ ಪರ ನೀಡಿರುವ ವರದಿಯನ್ನು ಯಾಕೆ ಜಾರಿ ಮಾಡುತ್ತಿಲ್ಲ ಎಂಬ ಅನುಮಾನ ಬರಿಸುತ್ತಿದೆ ಎಂದರು.

ಇನ್ನು ರೈತರ ಹಕ್ಕೂತ್ತಾಯಗಳ ಈಡೇರಿಸಬೇಕು ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆ ರೈತರ ಪಾಲಿಗೆ ಕರಾಳ ಚುನಾವಣೆಯಾಗುತ್ತದೆ ಎಂದು ಎಚ್ಚರಿಸಿದರು. ರಾಜ್ಯದ ಬೇರೆ ಬೇರೆ ಭಾಗದಿಂದ ಬೇರೆ ಬೇರೆ ರೈಲುಗಳ ಮೂಲಕ ಸಾವಿರಾರು ಸಂಖ್ಯೆಯಲ್ಲಿ ದೆಹಲಿ ಚಲೋ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ರೈತ ಮುಖಂಡರುಗಳ ಬರಡನಪುರ ನಾಗರಾಜ್, ಉಡಿಗಾಲ ರೇವಣ್ಣ, ಮೂಕಳ್ಳಿ ಮಹದೇವಸ್ವಾಮಿ, ಕುರುಬೂರು ಸಿದ್ದೇಶ್, ಗೌರಿಶಂಕರ, ಶಿವಮೂರ್ತಿ, ಕಮಲಮ್ಮ, ಪ್ರದೀಪ್, ನಾಗರಾಜ್ ಮೂರ್ತಿ ಮುಂತಾದವರು ದೆಹಲಿಯ ಕಡೆ ಪ್ರಯಾಣ ಬೆಳೆಸಿದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ