NEWSಕೃಷಿನಮ್ಮರಾಜ್ಯ

ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ಒತ್ತಾಯಿಸಿದ್ದಾರೆ.

ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಾವಿನ ಹಣ್ಣಿಗೆ ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಪ್ರಸಿದ್ದಿಯಾಗಿದ್ದು ರೈತರು ನಿರ್ದಿಷ್ಟ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಈಗಾಗಲೇ ನೆರೆಯ ಆಂಧ್ರ ಪ್ರದೇಶ ಸರ್ಕಾರವು ನಮ್ಮ ತೋತಾಪುರಿ ಮಾವಿನ ಹಣ್ಣಿನ ಮಾರಾಟಕ್ಕೆ ನಿರ್ಬಂಧವಿದಿಸಿದ್ದು ಮಾವಿಗೆ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ ಎಂದರು.

ಇನ್ನು ಈಗಾಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ಇತ್ತ ನಮ್ಮ ಸರ್ಕಾರವು ರೈತರ ಪರವಾಗಿದ್ದು ರೈತರು ಬೆಳೆದ ಬೆಳೆಗೆ ಸಹಕಾರಿಯಾಗಲು ಬೆಂಬೆಲ ಬೆಲೆ ನಿಗದಿಪಡಿಸಲು ಮುಖ್ಯಮಂತ್ರಿಗಳು ಮನಸ್ಸು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಧ್ವನಿಗೂಡಿಸಿದರು.

Megha
the authorMegha

Leave a Reply

error: Content is protected !!