NEWSನಮ್ಮಜಿಲ್ಲೆನಮ್ಮರಾಜ್ಯ

ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ: ಪ್ರಶಸ್ತಿ ನಾಮ ನಿರ್ದೇಶನಗಳ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆಯ್ಕೆ ಸಮಿತಿ: ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ,ಶಾಂತಲಾ ಧರ್ಮರಾಜ್ ಹಾಗೂ ಎಂ.ಎಸ್.ಮಣಿ ಸದಸ್ಯರಾಗಿದ್ದಾರೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ: ಕನ್ನಡದ ಹಿರಿಯ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿನಲ್ಲಿ ಸರ್ಕಾರ ಟಿಯೆಸ್ಸಾರ್ ನಿಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತ 2 ಲಕ್ಷ ರೂ ಆಗಿದ್ದು, ಕನ್ನಡ ಪತ್ರಿಕೋದ್ಯಮ, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ 30 ವರ್ಷಗಳ ಸೇವೆ ಸಲ್ಲಿಸಿರಬೇಕು. ಜೊತೆಗೆ ಕನ್ನಡ ಕ್ಷೇತ್ರಕ್ಕೆ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರುವವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರತಿ ಕ್ಯಾಲೆಂಡರ್ ವರ್ಷಕ್ಕೆ ಒಬ್ಬರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುವುದು.

ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ: ಪತ್ರಿಕಾ ರಂಗದ ಭೀಷ್ಮರೆಂದೇ ಹೆಸರಾದ ಮೊಹರೆ ಹಣಮಂತರಾಯ ಅವರ ನೆನಪಿನಲ್ಲಿ ಸರ್ಕಾರವು ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತವು 2 ಲಕ್ಷ ರೂ ಆಗಿದ್ದು, ಕನ್ನಡದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಾವುದೇ ಪತ್ರಿಕೆಯನ್ನು ಅಥವಾ ಪತ್ರಿಕಾ ಸಮೂಹವನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ ಹಾಗೂ ಪ್ರವೃತ್ತಿಯಲ್ಲಿ ಪತ್ರಕರ್ತರಾಗಿ, ವೃತ್ತಿಯಲ್ಲಿ ಪತ್ರಿಕಾಲಯದ ಮಾಲೀಕರು, ಆಡಳಿತಗಾರರಾಗಿ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿರಬೇಕು.

ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು, ಮಾಧ್ಯಮ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳು ಪೂರ್ಣ ದಾಖಲೆಗಳೊಂದಿಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. 17, ಭಗವಾನ್ ಮಹಾವೀರರಸ್ತೆ, ಬೆಂಗಳೂರು – 560 001 ಇಲ್ಲಿಗೆ 2024ನೇ ಜುಲೈ 25ರ ಸಂಜೆ 5.30 ಗಂಟೆ ಒಳಗಾಗಿ ಕಳುಹಿಸಿಕೊಡಬಹುದಾಗಿದೆ. ಅಥವಾ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ ಮೂಲಕ ಇಲ್ಲವೇ [email protected] ಇಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿಕೊಡಬಹುದಾಗಿದೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ