NEWSದೇಶ-ವಿದೇಶಸಂಸ್ಕೃತಿ

ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ʼಭಾರತ ರತ್ನʼ ಪ್ರಶಸ್ತಿ: ಪ್ರಧಾನಿ ಮೋದಿ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (96) ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ʼಭಾರತ ರತ್ನʼ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.

ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್‌ ಮೂಲಕ ಹಂಚಿಕೊಂಡಿದ್ದಾರೆ. ಎಲ್.ಕೆ. ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡುತ್ತಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ. ಈ ಕುರಿತು ಅವರಿಗೆ ದೂರವಾಣಿ ಮೂಲಕ ನಾನೇ ಖುದ್ದಾಗಿ ತಿಳಿಸಿದ್ದು ಅದನ್ನು ಕೇಳಿ ಅವರು ಬಹಳ ಖುಷಿಪಟ್ಟರು ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

ಕಳೆದ ತಿಂಗಳು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಂಡಿತು. ರಾಮ ಮಂದಿರ ಹೋರಾಟದ ರೂವಾರಿ, ಬಿಜೆಪಿ ಭೀಷ್ಮ ಎಂದೇ ಜನಪ್ರಿಯರು ಅಡ್ವಾಣಿಯವರು. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡ ಬೆನ್ನಲ್ಲೇ ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿತ್ತು. ಅದಾದ ಒಂದೇ ವಾರದಲ್ಲಿ ಅಡ್ವಾಣಿಯವರಿಗೆ ಭಾರತ ರತ್ನ ಘೋಷಣೆಯಾಗಿದೆ.

ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ 2002 ರಿಂದ 2004 ರವರೆಗೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಇದಕ್ಕೂ ಮೊದಲು ಕೇಂದ್ರ ಗೃಹ ಖಾತೆ ಸೇರಿದಂತೆ ಹಲವು ಸಚಿವಾಲಯಗಳ ಮುಖ್ಯಸ್ಥರಾಗಿದ್ದರು. 1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು.

ಎಲ್‌ಕೆ ಅಡ್ವಾಣಿ ಅವರು 1980 ರಲ್ಲಿ ಭಾರತೀಯ ಜನತಾ ಪಕ್ಷದ ಪ್ರಾರಂಭದಿಂದಲೂ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸಮ್ಮಿಶ್ರ ಸರ್ಕಾರಗಳ ಮುಖ್ಯಸ್ಥರಾಗಿ 90 ರ ದಶಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದರ ಬೆಳವಣಿಗೆಯನ್ನು ರೂಪಿಸಿದ ಕೀರ್ತಿಯೂ ಇವರಿಗೆ ಸಲ್ಲುತ್ತದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ