- ಎಚ್ಡಿಡಿ ಅವರ ಹುಟ್ಟುಹಬ್ಬ ವೃದ್ಧಾಶ್ರಮದಲ್ಲಿ ಅಭಿಮಾನಿಗಳಿಂದ ಸೇವಾ ಕಾರ್ಯ
ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹುಟ್ಟುಹಬ್ಬವನ್ನು ಅರವಿಂದ್ ನಗರದ ಜೆಎಸ್ಎಸ್ ವೃದ್ಧಾಶ್ರಮದಲ್ಲಿ ಆಚರಿಸಲಾಯಿತು.
ಎಚ್.ಡಿ.ದೇವೇಗೌಡರ ಅಭಿಮಾನಿ ಬಳಗ ಹಾಗೂ ಎಸ್.ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ದೇವೇಗೌಡರ 93ನೇ ಹುಟ್ಟು ಹಬ್ಬದ ಅಂಗವಾಗಿ ವೃದ್ಧಾಶ್ರಮದ ಹಿರಿಯ ನಾಗರಿಕರಿಗೆ ಸೀರೆ ಹಾಗೂ ಪಂಚೆ ಮತ್ತು ದಿನಸಿ ಸಾಮಗ್ರಿ ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಲಾಯಿತು
ಬಳಿಕ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ದೇಶ ಕಂಡ ಅಪ್ರತಿಮ ರೈತ ನಾಯಕ ಹಾಸನ ಜಿಲ್ಲೆಯಿಂದ ಗೆದ್ದು ಕರ್ನಾಟಕ ರಾಜ್ಯದಿಂದ ಏಕ ಮಾತ್ರ ಪ್ರಧಾನ ಮಂತ್ರಿಯಾಗಿ ಆಡಳಿತ ಮಾಡಿದ ದೇವೇಗೌಡ ಅವರ ಜನ್ಮದಿನವನ್ನು ಆಚರಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ನೂರಾರು ವರ್ಷ ಆರೋಗ್ಯವಾಗಿ ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.
ಇನ್ನು ದೇವೇಗೌಡರ ಗರಡಿಯಲ್ಲಿ ಬೆಳೆದ ಸಾಕಷ್ಟು ಜನ ಮುಖ್ಯಮಂತ್ರಿಗಳಾಗಿ ಸಚಿವರಾಗಿ ಕೇಂದ್ರ ಮಂತ್ರಿಗಳಾಗಿ ಅಧಿಕಾರ ವಹಿಸಿದ್ದಾರೆ ದೇವೇಗೌಡರ ಆಶೀರ್ವಾದ ಇನ್ನು ನಮಗೆಲ್ಲರಿಗೂ ಅಗತ್ಯವಿದೆ ದೇವೇಗೌಡರೇ ಒಂದು ಶಕ್ತಿ ಎಂದು ಹೇಳಿದರು.
ಕರ್ನಾಟಕದ ಸರ್ದಾರ್ ಪಟೇಲ್ ಎಚ್ಡಿಡಿ: ಹಿರಿಯ ಸಮಾಜಸೇವಕ ಕೆ.ರಘುರಾಮ ವಾಜಪೇಯಿ ಮಾತನಾಡಿ, ಭಾರತ ಕಂಡಂತಹ ಉತ್ತಮ ಪ್ರಧಾನಿಗಳಲ್ಲಿ ನಮ್ಮ ಕನ್ನಡಿಗರೇ ಆದ ದೇವೇಗೌಡ ಅವರು ಒಬ್ಬರು ಎಂಬುದು ಹೆಮ್ಮೆಯ ವಿಷಯ. ರೈತಾಪಿ ಹಿನ್ನೆಲೆಯಿಂದ ಬಂದ ಕರ್ನಾಟಕದ ಸರ್ದಾರ್ ಪಟೇಲ್ ಎಂದೆ ಖ್ಯಾತಿ, ಇಂದು ಅವರ 93ನೇ ಹಬ್ಬದ ಆಚರಣೆಯನ್ನು ನಾವು ಜೆಎಸ್ಎಸ್ ವೃದ್ಧಾಶ್ರಮದಲ್ಲಿ ಆಚರಿಸುತ್ತಿರುವುದು ಅರ್ಥಪೂರ್ಣ ಕಾರ್ಯಕ್ರಮವಾಗಿದ್ದು ಅವರು ಇನ್ನೂ 100 ಕಾಲ ಆರೋಗ್ಯವಾಗಿ ಬಾಳಲಿ ಎಂಬುವುದು ಅಭಿಮಾನಿಗಳ ಅಪೇಕ್ಷೆ ಆಗಿದೆ ಎಂದರು.
ಹಿರಿಯ ನಾಗರಿಕರಿಂದ ಹಾರೈಕೆ: ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಮೈಸೂರು ನಗರ ಜೆಡಿಎಸ್ ಕಾರ್ಯ ಅಧ್ಯಕ್ಷ ಎಸ್.ಪ್ರಕಾಶ್ ಪ್ರಿಯಾದರ್ಶನ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಗಾಯಕ ಯಶವಂತ್ ಕುಮಾರ್, ಛಾಯಾ, ಪಿಂಕಿ ಕುಮಾರಿ ರಾಜೇಶ್ ಕುಮಾರ್ ವೀರಭದ್ರ ಸ್ವಾಮಿ ಸುಬ್ರಮಣಿ ರಮೇಶ್ ರಾಮಪ್ಪ, ಗಗನ್, ಶ್ರೀಧರ್ ಜೆಡಿಎಸ್ ಮುಖಂಡ ಹರ್ಷ ಎಲ್ಐಸಿ ವೆಂಕಟೇಶ್ ಶ್ರೀಧರ್ ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್ ಹರ್ಷಿತ್ ಎಸ್ ನಾಗೇಶ್, ದತ್ತ ಇನ್ನಿತರರು ಇದ್ದರು.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...