ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಕಟಪೂರ್ವ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರ ಭಾವಚಿತ್ರವುಳ್ಳ ಬ್ಯಾನರ್ಗಳು ಮತ್ತು ಕಟೌಟ್ಗಳಿಗೆ ಬಹುತೇಕ ಎಲ್ಲ ಘಟಕ ಮಟ್ಟದಲ್ಲಿ ಹಾಗೂ ರಾಜ್ಯಾದ್ಯಂತ ಹಾಲಿನಭಿಷೇಕ ಮಾಡಿ ನೌಕರರು ತಮ್ಮ ಬೇಡಿಕೆ ಈಡೇರಲಿದೆ ಎಂಬ ಸಂತಸದಲ್ಲಿದ್ದರು. ಆದರೆ ಅವರು ಮಾತ್ರ ಮಾಡಬಾರದ ಕೆಲಸ ಮಾಡಿ ಹೋದರು.
ಮುಷ್ಕರದ ಸಮಯದಲ್ಲಿ ಆಗಿರುವ ವಜಾ, ಅಮಾನತು, ವರ್ಗಾವಣೆ ಆಗಿರುವ ಎಲ್ಲ ನೌಕರರನ್ನು ಯಥಾವತ್ ಆಗಿ ಮುಷ್ಕರದ ಹಿಂದಿನಂತೆ ಖಡ್ಡಾಯವಾಗಿ ಮಾಡಿಕೊಡುವುದರ ಜೊತೆಗೆ ಸಾರಿಗೆ ನೌಕರರ ಕುಟುಂಬ ಸದಸ್ಯರಲ್ಲಿ ನಾನೂ ಒಬ್ಬ, ನಿಮ್ಮ ಎಲ್ಲ ಕಷ್ಟಗಳನ್ನು ನೋಡಿದ್ದೇನೆ. ನಾನು ಶತಾಯ ಗತಾಯ 6ನೇ ವೇತನ ಆಯೋಗವನ್ನು ಜಾರಿಗೆ ತಂದೇ ತರುತ್ತೇನೆ.
ನೌಕರರಿಗೆ ಅನುಕೂಲಕರವಾದ ಕಾನೂನುಗಳನ್ನು ತಂದು ಅವರ ಸಂಸಾರ ಸುಧಾರಿಸಿಕೊಳ್ಳುವ … ಹಾಗೆ ಹೀಗೆ ಎಂದು ಸುಳ್ಳು ಆಶ್ವಾಸನೆಗಳನ್ನು ಪ್ರತಿ ಸಭೆ ಸಮಾರಂಭಗಳಲ್ಲೂ ನೀಡಿ ಕೊನೆಗೆ ನೌಕರರನ್ನು ಇನ್ನಷ್ಟು ಸಮಸ್ಯೆಯ ಕೂಪಕ್ಕೆ ತಳ್ಳಿ ಹೊರ ಹೋದರು.
ಹೀಗೆ ಸಾರಿಗೆ ನೌಕರರ ಬಾಯಿಗೆ ಮಣ್ಣು ಹಾಕಿ ಕೈಗೆ ಚಿಪ್ಪು ಕೊಟ್ಟು ಹೋದರು. ಮುಂದಿನ ದಿನಗಳಲ್ಲಿ ಇಂತಹ ಲಕ್ಷಣ ಸವದಿಯವರಿಗೆ ನೌಕರರು ತಕ್ಕ ಪಾಠ ಕಲಿಸುವುದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲ. ಇದೀಗ ಬಸವರಾಜು ಬೊಮ್ಮಾಯಿ ಸಚಿವ ಸಂಪುಟದಲ್ಲಿ ಬಿ. ಶ್ರೀರಾಮುಲು ಅವರಿಗೆ ಸಾರಿಗೆ ಖಾತೆ ನೀಡಿರುವುದು 4 ನಿಗಮಗಳ ಸಾರಿಗೆ ನೌಕರರಿಗೆ ಹೆಮ್ಮೆಯ ವಿಷಯ ಮತ್ತು ಸಂತೋಷದ ಸಂಗತಿ.
ಇನ್ನು ಸಂಸ್ಥೆಯ ಅಭಿವೃದ್ಧಿಗಾಗಿ ಸದಾ ನೌಕರರು ದುಡಿದ ಪ್ರತಿಫಲವಾಗಿ 280 ರಿಂದ 300 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಪ್ರಪಂಚದಲ್ಲೇ ಉತ್ತಮ ಸಾರಿಗೆ ಸಂಸ್ಥೆ ಎಂದು ಹೆಸರುಗಳಿಸಿದೆ.
ಆದರೆ ಇತ್ತೀಚೆಗೆ ಸಂಸ್ಥೆ ಲಾಸ್ನಲ್ಲಿದೆ ಅಂತ ಹೇಳುತ್ತಿದ್ದಾರೆ. ನಿಜ ಏಕೆ ಲಾಸ್ನಲ್ಲಿದೆ ಎಂಬುದನ್ನು ನಾವು ಕೂಲಂಕಷವಾಗಿ ಪರಿಶೀಲಿಸಬೇಕಾಗಿದೆ. ನಮ್ಮ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 100ಕ್ಕೆ ಶೇ.80 ಲಂಚಕೋರ ಅಧಿಕಾರಿಗಳೇ ಇದ್ದಾರೆ.

ವಿಭಾಗೀಯ ನಿಯಂತ್ರಣ ಅಧಿಕಾರಿಗಳು ತನಿಖಾಧಿಕಾರಿಗಳ ಕೈಯಲ್ಲಿ ವಾಹನ ತನಿಖೆ ಮಾಡಿಸಿ ಕೇಸ್ ಬರೆಸುತ್ತಾರೆ. ನಂತರ ಅದೇ ತನಿಖಾಧಿಕಾರಿಗಳ ಮುಖಾಂತರ ಡೀಲಿಂಗ್ ಮಾಡಿಸುತ್ತಾರೆ. ತನಿಖಾಧಿಕಾರಿಗಳು ಕೇಂದ್ರ ಕಚೇರಿಯಿಂದ ತಮಗೆ ನೀಡಿರುವ ಮಾರ್ಗ ವಾಹನ ಸಂಖ್ಯೆ ಇಂತಹ ವಾಹನವನ್ನು ತನಿಖೆ ಮಾಡಿ ವರದಿ ಸಲ್ಲಿಸಬೇಕು ಅಂತ ಹೇಳಿದ್ದರೂ ಸಹಾ ಕೇಂದ್ರ ಕಚೇರಿಯ ಆಧೇಶಗಳನ್ನೇ ಗಾಳಿಗೆ ತೂರಿ ತಮಗಿಷ್ಟ ಬಂದಂತೆ ಅವರ ಅಧಿಕಾರ ಚಲಾವಣೆ ಮಾಡುತ್ತಾರೆ.
ತನಿಖಾಧಿಕಾರಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಿ ಬಾಡಿ ಕ್ಯಾಮರಾ ಅಳವಡಿಸಿಕೊಂಡು ತನಿಖೆ ಮಾಡಬೇಕು. ಈ ಆದೇಶಗಳನ್ನೂ ಸಹಾ ಗಾಳಿಗೆ ತೂರಿ ಸಮವಸ್ತ್ರಗಳನ್ನು ಧರಿಸದೇ ತನಿಖೆ ಮಾಡುತ್ತಾರೆ. ತಮಗೆ ಬೇಕಾದ ನಿರ್ವಾಹಕರು ಇದ್ದರೆ ವಾಹನವನ್ನೇ ಹತ್ತುವುದಿಲ್ಲ.
ಯಾವ ಅಧಿಕಾರಿಗಳು ನೌಕರರಿಗೆ ದೌರ್ಜನ್ಯ ಕಿರುಕುಳ ದಬ್ಬಾಳಿಕೆ ಮಾಡುತ್ತಿದ್ದಾರೋ ಅಂಥ ಅಧಿಕಾರಿಗಳನ್ನು ನಮ್ಮ ಈಗಿನ ಸಾರಿಗೆ ಸಚಿವರು ಮಟ್ಟ ಹಾಕಬೇಕಿದೆ. ಡಿಪೋಗಳಲ್ಲಿ ನೌಕರ ಸ್ನೇಹಿ ವಾತಾವರಣ ನಿರ್ಮಾಣವಾದರೆ ಸಂಸ್ಥೆಯನ್ನು ಅಬಿವೃದ್ಧಿ ಪಡಿಸಲು ನಮ್ಮ 4 ನಿಗಮಗಳ ನೌಕರರು 100ಕ್ಕೆ 100 ಭಾಗ ಲಾಭದಾಯಕವಾಗಿ ದುಡಿದು ಸಚಿವರಿಗೆ ಗೌರವ, ಘನತೆ ತಂದುಕೊಡುವುದರಲ್ಲಿ ಹಿಂದೆ ಸರಿಯುವುದಿಲ್ಲ. ನಾವೆಲ್ಲ ನೌಕರರು ಸ್ವ ಇಚ್ಛೆಯಿಂದ ದುಡಿಯಲು ಕಂಕಣಬದ್ದವಾಗಿರುತ್ತೇವೆಂದು ಈ ಮೂಲಕ ಪ್ರಮಾಣ ಮಾಡುತ್ತೇವೆ.
l ಟಿ.ಎ. ದ್ಯಾವಪ್ಪ, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ, ಅಖಿಲ ಕರ್ನಾಟಕ ರಸ್ತೆ ಸುರಕ್ಷತಾ ಸಂಘ ಕರ್ನಾಟಕ ರಾಜ್ಯ
Related


You Might Also Like
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...