NEWSನಮ್ಮಜಿಲ್ಲೆನಮ್ಮರಾಜ್ಯ

ಶೇ.15ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ – ಮಾ.24ರಿಂದ ಮುಷ್ಕರ ಪಕ್ಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ನಿನ್ನೆ (ಮಾ.17) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಈ ಆದೇಶ ಏಕಪಕ್ಷೀಯವಾಗಿದ್ದು ನಮಗೆ ಸರಿ ಸಮಾನ ವೇತನ ಕೊಡಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಇದೇ ಮಾ.24ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವೇತನ ಸಂಬಂಧ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳೊಂದಿಗೆ ಕಳೆದ ಇದೇ ಮಾ.8ರಿಂದಲೂ ಹಲವಾರು ಸಭೆಗಳನ್ನು ಮಾಡಿದ್ದು, ಭಾರಿ ಚರ್ಚೆಕೂಡ ನಡೆಸಲಾಗಿದೆ. ಆದರೆ, ಈ ಕೆಎಸ್ಆರ್‌ಟಿಸಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ನಡುವೆ ಸಚಿವ ಶ್ರೀರಾಮುಲು ನಡೆಸಿದ ಎಲ್ಲ ಸಭೆಗಳು ವಿಫಲವಾಗಿವೆ.

ಹೀಗಾಗಿ ವೇತನ ಹೆಚ್ಚಳದ ಚೆಂಡು ಮುಖ್ಯಮಂತ್ರಿಗಳ ಅಂಗಳ ತಲುಪಿತ್ತು. ಸಿಎಂ ಬಸವರಾಜ ಬೊಮ್ಮಯಿ ಅವರು ಸಾರಿಗೆ ನೌಕರರ ಸಂಘಟನೆಗಳ ಜತೆ ಚರ್ಚಿಸದೆ ಏಕಪಕ್ಷೀಯವಾಗಿ ಶೇ.15ರಷ್ಟು ವೇತನ ಹೆಚ್ಚಳ ಮಾಡಿ ಶುಕ್ರವಾರ ರಾತ್ರಿ 8.30ರಲ್ಲಿ ಆದೇಶ ಹೊರಡಿಸಿದ್ದಾರೆ. ಈ ಆದೇಶ ಏಕಪಕ್ಷೀಯವಾಗಿದ್ದು ಇದನ್ನು ನಾವು ಒಪ್ಪಲ್ಲ, ನಮಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನವನ್ನು ವೇತನ ಆಯೋಗದ ಮಾದರಿ ನೀಡಬೇಕು ಎಂದು ಆಗ್ರಹಿಸಿ ನೌಕರರು ಮತ್ತು ಅವರ ಕುಟುಂಬ ಸಮೇತ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸಜ್ಜಾಗಿದ್ದಾರೆ.

ಮಾ.1ರಿಂದ ಬೇಡಿಕೆ ಈಡೇರಿಕೆಗೆಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಸಮಾನ ಮನಸ್ಕರ ವೇದಿಕೆ ವತಿಯಿಂದ ನೂರಾರು ನೌಕರರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಆ ವೇಳೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಮಾ.4ರಂದು ಧರಣಿ ಕೈ ಬಿಟ್ಟು, 15 ದಿನಗಳ ಬಳಿಕ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಹಮ್ಮಿಕೊಳ್ಳುವುದಾಗಿ ನೌಕರರು ಎಚ್ಚರಿಕೆ ನೀಡಿದ್ದರು.

ಆ ವೇಳೆ ಸರ್ಕಾರವೇ ಕೊಟ್ಟಿರುವ  ಲಿಖಿತ ಭರವಸೆಯನ್ನು ಈಡೇರಿಸುವಂತೆ ಹಾಗೂ ಸಮಸ್ಯೆಗಳ ಶಾಶ್ವತ ನಿವಾರಣೆಗಾಗಿ ನಾವು ಮಾ.8ರಂದು ಕಾರ್ಮಿಕ ಆಯುಕ್ತರಿಗೆ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಮಾಡುವ ಬಗ್ಗೆ ನೋಟಿಸ್ ನೀಡಿ 14 ದಿನಗಳ ನಂತರ ಮುಷ್ಕರ ಪ್ರಾರಂಭಿಸಲು ಸಮಾನ ಮನಸ್ಕರ ವೇದಿಕೆ ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್. ಚಂದ್ರಶೇಖರ್ ತಿಳಿಸಿದ್ದರು.

ಅದರಂತೆ ಈಗಾಗಲೇ ಕಾರ್ಮಿಕ ಇಲಾಖೆ ಆಯುಕ್ತರಿಗೆ ತಮ್ಮ ಬೇಡಿಕೆ ಈಡೇರಿಕೆ ಸಂಬಂಧ ನೋಟಿಸ್‌ ನೀಡಲಾಗಿದೆ. ಹೀಗಾಗಿ ನೌಕರರು ಮತ್ತು ಸಾರಿಗೆ ಅಧಿಕಾರಿಗಳ ರಾಜೀಸಂಧಾನ ಸಭೆಯನ್ನು ಇದೇ ಮಾ.20ರಂದು ಮಧ್ಯಾಹ್ನ 2.30ಕ್ಕೆ ಆಯೋಜನೆ ಮಾಡಲಾಗಿದೆ.

ಈ ನಡುವೆಯೇ ನಿನ್ನೆ ಶೇ.15ರಷ್ಟು ವೇತನ ಹೆಚ್ಚಳ ಮಾಡಿರುವುದಾಗಿ ಸರ್ಕಾರ ಆದೇಶ ಹೊರಡಿಸಿದ್ದು, ಇದನ್ನು ಸುತರಾಮ್‌ ಒಪ್ಪದ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಇಂದು (ಮಾ.18) ಮಧ್ಯಾಹ್ನ 1ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು, ಈ ಸುದ್ದಿಗೋಷ್ಠಿಯಲ್ಲಿ ಮುಷ್ಕರ ಸಂಬಂಧ ಮಾಹಿತಿ ಹಂಚಿಕೊಳ್ಳಲಿದ್ದಾರೆ.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !