NEWSಸಂಸ್ಕೃತಿ

ಹಾಸನಾಂಬ ದೇವಿ ದರ್ಶನದ ವೇಳೆ ಕರ್ತವ್ಯ ಲೋಪ: ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು ಮಾಡಿ ಡಿಸಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಹಾಸನಾಂಬ ದೇವಿ ದರ್ಶನದ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಆರ್‌ಐ ಗೋವಿಂದರಾಜ್ ಹಾಗೂ ಯೋಗಾನಂದ್, ವಿಎ ಸಂತೋಷ್ ಅಂಬಿಗರ ಹಾಗೂ ಶಿರಾಜ್ ಮಹಿಮಾ ಪಟೇಲ್ ಅಮಾನತಾದ ಕಂದಾಯ ಇಲಾಖೆ ಸಿಬ್ಬಂದಿ.

ಗೋಲ್ಡ್ ಕಾರ್ಡ್ ಕೌಂಟರ್‌ನಲ್ಲಿ ಕಾರ್ಡ್ ಸ್ಕ್ಯಾನ್ ಮಾಡದೇ ಭಕ್ತರನ್ನು ದೇವಾಲಯದ ಒಳಬಿಟ್ಟ ಆರೋಪದ ಮೇಲೆ ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಮೊದಲ ದಿನ ಕೂಡ ಕರ್ತವ್ಯದ ಐಡಿ ಕಾರ್ಡ್ ದುರುಪಯೋಗ ಆರೋಪದಲ್ಲಿ ಇಬ್ಬರು ವಾರ್ಡನ್‍ಗಳನ್ನು ಅಮಾನತು ಮಾಡಲಾಗಿತ್ತು.

ಈ ಮೂಲಕ ಕರ್ತವ್ಯ ಪಾಲನೆಯಲ್ಲಿ ಬೇಜವಾಬ್ದಾರಿತನ ತೋರುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯ ಸಂದೇಶವನ್ನು ಜಿಲ್ಲಾಡಳಿತ ನೀಡಿದೆ.

ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನಕ್ಕೆ ಶನಿವಾರ (ಅ.11) ಸಾವಿರಾರು ಭಕ್ತರು ಮುಂಜಾನೆ 4 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದಿದ್ದಾರೆ.

ಕೆಲವರು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ಕಾದು ನಿಂತಿದ್ದರು. ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಸಹಜವಾಗಿಯೇ ಹೆಚ್ಚುಗಿತ್ತು. 1 ಸಾವಿರ ಟಿಕಟ್‌ನ ಸಾಲು ಖಾಲಿ ಇದ್ದರೆ, 300 ರೂ. ಟಿಕೆಟ್‌ನ ದರ್ಶನದ ಸರತಿ ಸಾಲು ಸಂಪೂರ್ಣ ಭರ್ತಿಯಾಗಿದ್ದವು. ಇಂದು (ಅ.12) ರಜೆ ಇರುವುದರಿಂದ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ