CrimeNEWSನಮ್ಮಜಿಲ್ಲೆವಿಡಿಯೋ

ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!!

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ಸನ್ನು ವಿಜಯಪುರದಲ್ಲಿ ಹತ್ತಿದ ಮಹಿಳೆಯೊಬ್ಬರು ತನ್ನ ನಿಲ್ದಾಣ ಬರುವ ಮೊದಲೇ ಅರ್ಧದಲ್ಲೇ ಬಸ್‌ ಇಳಿಯಲು ಮುಂದಾಗಿದ್ದಾರೆ ಈ ವೇಳೆ ನಿರ್ವಾಹಕರು ನಮಗೆ ತೊಂದರೆ ಆಗುತ್ತದೆ ನೀವು ಎಲ್ಲಿಗೆ ಟಿಕೆಟ್‌ ಪಡೆದುಕೊಂಡಿದ್ದೀರೋ ಅಲ್ಲೇ ಇಳಿಯ ಬೇಕು ಎಂದು ಹೇಳಿದ್ದಾರೆ.

ಅಷ್ಟಕ್ಕೆ ಆ ಮಹಿಳೆ ಮನೆಯಲ್ಲಿದ್ದ ತಮ್ಮವರನ್ನು ಕರೆಸಿಕೊಂಡು ಅವಾಜ್‌ ಹಾಕಿದ್ದಾರೆ. ಅಲ್ಲದೆ ಈ ವೇಳೆ ಅರ್ಧದಲ್ಲೇ ಬಸ್‌ ಇಳಿದ ಮಹಿಳೆ ಪರ ನಿಂತ ಮತ್ತೊಬ್ಬ ಮಹಿಳೆ ನಾನು ಪೊಲೀಸ್‌ ಇದ್ದೀನಿ ಏನು ಮಾಡುವುದು ಕೆಲವೊಮ್ಮೆ ಅರ್ಧದಲ್ಲೇ ಇಳಿಯಬೇಕಾಗುತ್ತದೆ ಎಂದು ಆಕೆ ಪರ ಬ್ಯಾಟ್‌ ಬೀಸಿದ್ದಾರೆ.

ಅದಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ನಿಮ್ಮ ಡಿಪಾರ್ಟ್‌ಮೆಂಟ್‌ನಲ್ಲಿ ಇದ್ದೋರು ಹೀಗೆ ಮಾತನಾಡುವುದಕ್ಕೆ ಹೇಳುತ್ತಾರ ಎಂದು ನಾನು ಪೊಲೀಸ್‌ ಎಂದ ಮಹಿಳೆಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ಆಕೆ ವಿಡಿಯೋ ಮಾಡುತ್ತಿದ್ದೀಯ ಎಂದು ಬಂದು ಫೋನ್‌ ಕಸಿಕೊಂಡಿದ್ದಾರೆ.

ಇದು ನಡೆದಿರುವುದು ಚಡಚಣ ಇಳಕಲ್‌ ಮಾರ್ಗಮಧ್ಯೆ ಸಂಗಮ ಕ್ರಾಸ್ ಬಳಿ. ಮಹಿಳಾ ಪ್ರಯಾಣಿಕರು ವಿಜಯಪುರದಿಂದ ಇಲಕಲ್‌ಗೆ ಟಿಕೆಟ್ ಪಡೆದು ಮಾರ್ಗಮಧ್ಯೆ ಅಂದರೆ ಸಂಗಮ ಕ್ರಾಸ್ ಬಳಿ ಇಳಿಯಲು ಪ್ರಯತ್ನಿಸಿದರು.

ಆಗ ನಿರ್ವಾಹಕರು ನಡುವೆ ಇಳಿಬೇಡಿ ಅಂದಾಗ ಮನೆಯಲ್ಲಿದ್ದ ಪುರುಷರನ್ನು ಫೋನ್‌ ಮಾಡಿ ಕರೆಸಿ ಚಾಲಕ ನಿರ್ವಾಹಕರಿಗೆ ಬೆದರಿಕೆ ಹಾಕಿಸಿ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಪುರುಷರೊಂದಿಗೆ ಬಂದಿದ್ದ ಪೊಲೀಸ್‌ ಎಂದು ಹೇಳಿಕೊಂಡ ಮಹಿಳೆಯೂ ಚಾಲನಾ ಸಿಬ್ಬಂದಿಗೆ ಏನು ಮಾಡೋಕಾಗುತ್ತೆ ಇಳಿಯಲೇ ಬೇಕು ಎಂದು ಹೇಳಿದ್ದಾರೆ.

ಇಂತಹ ಘಟನೆಗಳು ಪ್ರತಿದಿನ ನಡೆಯುತ್ತಿದ್ದು ಚಾಲನಾ ಸಿಬ್ಬಂದಿಗಳು ಭಯದ ವಾತಾವರಣದಲ್ಲೇ ಕರ್ತವ್ಯ ನಿರ್ವಹಿಸುವಂತಾಗಿದೆ. ಆದಕಾರಣ ಆಡಳಿತ ಮತ್ತು ಅಧಿಕಾರಿ ವರ್ಗದವರು ಚಾಲಕ, ನಿರ್ವಾಹಕರಿಗೆ ಸಣ್ಣ ಸಣ್ಣ ತಪ್ಪಿಗೂ ಶಿಕ್ಷೆ ವಿಧಿಸುವಂತೆ ತಪ್ಪು ಮಾಡಿದ ಪ್ರಯಾಣಿಕರಿಗೂ ಗಂಭೀರ ಪ್ರಕರಣ ದಾಖಲಿಸಬೇಕು ಎಂದು ಪ್ರಯಾಣಿಕರೇ ಆಗ್ರಹಿಸಿದ್ದಾರೆ.

ಈಗಿನ ಪರಿಸ್ಥಿತಿ ನೋಡಿದ್ರೆ ಭಾರಿ ಆತಂಕವಾಗುತ್ತಿದೆ ಎಂದು ಚಾಲನಾ ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಾರಿಗೆ ಸಚಿವರು ಗಮನಹರಿಸಿ ಇಂಥ ಪ್ರಕರಣಗಳಿಂದ ಮುಕ್ತ ಗೊಳಿಸಬೇಕಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು; ಇಲ್ಲದಿದ್ದರೇ ಬೆಂಗಳೂರಿಗೆ ನಾವು ಮೋಸ ಮಾಡಿದಂತೆ: ಡಿಸಿ... ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ “ಸಂಚಾರಿ ಪ್ರಯೋಗಾಲಯ”: ಡಿಸಿಎಂ ವೀಕ್ಷಣೆ "ನಮ್ಮ ರಸ್ತೆ 2025" ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಸ್ಪೈನಲ್ ಕಾರ್ಡ್ ಶಸ್ತ್ರ ಚಿಕಿತ್ಸೆ ಬಳಿಕ ಕುರುಬೂರು ಶಾಂತಕುಮಾರ್ ಆರೋಗ್ಯದಲ್ಲಿ ಚೇತರಿಕೆ ಸರ್ಕಾರ ನಿಮ್ಮಗಳ ದ್ವಂದ ನಿಲುವನ್ನು ಉಪಯೋಗಿಸಿಕೊಂಡು ಸಾರಿಗೆ ನೌಕರರ ಹೊಟ್ಟೆಗೆ ತಣ್ಣೀರುಬಟ್ಟೆ ಕಟ್ತಾ ಇದೆ ದೇಹಲಿ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇಖಾ ಗುಪ್ತಾ KSRTC ತುಮಕೂರು: ಡಿಸಿ ಚಂದ್ರಶೇಖರ್ ಅಮಾನತಿಗೆ ದೂರುಕೊಟ್ಟು ಎಂಡಿಗೆ ಒತ್ತಾಯ KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- ಮುಖ್ಯ ಸಿಬ್ಬಂದಿ ವ್ಯವಸ... KSRTC ಉತ್ತಮ ಸಾಧನೆ ತೋರಿದ ಡಿಸಿಗಳು, ಉಸ್ತುವಾರಿ ಅಧಿಕಾರಿಗಳು, ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!!