NEWSನಮ್ಮಜಿಲ್ಲೆ

ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!!

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ಸನ್ನು ವಿಜಯಪುರದಲ್ಲಿ ಹತ್ತಿದ ಮಹಿಳೆಯೊಬ್ಬರು ತನ್ನ ನಿಲ್ದಾಣ ಬರುವ ಮೊದಲೇ ಅರ್ಧದಲ್ಲೇ ಬಸ್‌ ಇಳಿಯಲು ಮುಂದಾಗಿದ್ದಾರೆ ಈ ವೇಳೆ ನಿರ್ವಾಹಕರು ನಮಗೆ ತೊಂದರೆ ಆಗುತ್ತದೆ ನೀವು ಎಲ್ಲಿಗೆ ಟಿಕೆಟ್‌ ಪಡೆದುಕೊಂಡಿದ್ದೀರೋ ಅಲ್ಲೇ ಇಳಿಯ ಬೇಕು ಎಂದು ಹೇಳಿದ್ದಾರೆ.

ಅಷ್ಟಕ್ಕೆ ಆ ಮಹಿಳೆ ಮನೆಯಲ್ಲಿದ್ದ ತಮ್ಮವರನ್ನು ಕರೆಸಿಕೊಂಡು ಅವಾಜ್‌ ಹಾಕಿದ್ದಾರೆ. ಅಲ್ಲದೆ ಈ ವೇಳೆ ಅರ್ಧದಲ್ಲೇ ಬಸ್‌ ಇಳಿದ ಮಹಿಳೆ ಪರ ನಿಂತ ಮತ್ತೊಬ್ಬ ಮಹಿಳೆ ನಾಉ ಪೊಲೀಸ್‌ ಇದ್ದೀನಿ ಏನು ಮಾಡುವುದು ಕೆಲವೊಮ್ಮೆ ಅರ್ಧದಲ್ಲೇ ಇಳಿಯಬೇಕಾಗುತ್ತದೆ ಎಂದು ಆಕೆ ಪರ ಬ್ಯಾಟ್‌ ಬೀಸಿದ್ದಾರೆ.

ಅದಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ನಿಮ್ಮ ಡಿಪಾರ್ಟ್‌ಮೆಂಟ್‌ನಲ್ಲಿ ಇದ್ದೋರು ಹೀಗೆ ಮಾತನಾಡುವುದಕ್ಕೆ ಹೇಳುತ್ತಾರೆ ಎಂದು ನಾಣು ಪೊಲೀಸ್‌ ಎಂದ ಮಹಿಳೆಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ಆಕೆ ವಿಡಿಯೋ ಮಾಡುತ್ತಿದ್ದೀಯ ಎಂದು ಬಂದು ಫೋನ್‌ ಕಸಿಕೊಂಡಿದ್ದಾರೆ.

ಇದು ನಡೆದಿರುವುದು ಚಡಚಣ ಇಲಕಲ್ಲ ಮಾರ್ಗಮಧ್ಯೆ ಸಂಗಮ ಕ್ರಾಸ್ ಬಳಿ. ಮಹಿಳಾ ಪ್ರಯಾಣಿಕರು ವಿಜಯಪುರದಿಂದ ಇಲಕಲ್‌ಗೆ ಟಿಕೆಟ್ ಪಡೆದು ಮಾರ್ಗಮಧ್ಯೆ ಅಂದರೆ ಸಂಗಮ ಕ್ರಾಸ್ ಬಳಿ ಇಳಿಯಲು ಪ್ರಯತ್ನಿಸಿದರು.

ಆಗ ನಿರ್ವಾಹಕರು ನಡುವೆ ಇಳಿಬೇಡಿ ಅಂದಾಗ ಮನೆಯಲ್ಲಿದ್ದ ಪುರುಷರನ್ನು ಕರೆಸಿ ಚಾಲಕ ನಿರ್ವಾಹಕರಿಗೆ ಬೆದರಿಕೆ ಹಾಕಿ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಪುರುಷರೊಂದಿಗೆ ಬಂದಿದ್ದ ಪೊಲೀಸ್‌ ಎಂದು ಹೇಳಿಕೊಂಡ ಮಹಿಳೆಯೂ ಚಾಲನಾ ಸಿಬ್ಬಂದಿಗೆ ಏನು ಮಾಡೋಕಾಗುತ್ತೆ ಇಳಿಯಲೇ ಬೇಕು ಎಂದು ಹೇಳಿದ್ದಾರೆ.

ಇಂತಹ ಘಟನೆಗಳು ಪ್ರತಿದಿನ ನಡೆಯುತ್ತಿದ್ದೂ ಚಾಲನಾ ಸಿಬ್ಬಂದಿಗಳು ಭಯದ ವಾತಾವರಣದಲ್ಲೇ ಕರ್ತವ್ಯ ನಿರ್ವಹಿಸುವಂತಾಗಿದೆ. ಆದಕಾರಣ ಆಡಳಿತ ಮತ್ತು ಅಧಿಕಾರಿ ವರ್ಗದವರು ಚಾಲಕ, ನಿರ್ವಾಹಕರಿಗೆ ಸಣ್ಣ ಸಣ್ಣ ತಪ್ಪಿಗೂ ಶಿಕ್ಷೆ ವಿಧಿಸುವಂತೆ ತಪ್ಪು ಮಾಡಿದ ಪ್ರಯಾಣಿಕರಿಗೂ ಗಂಭೀರ ಪ್ರಕರಣ ದಾಖಲಿಸಬೇಕು ಎಂದು ಪ್ರಯಾಣಿಕರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಿನ ಪರಿಸ್ಥಿತಿ ನೋಡಿದ್ರೆ ಭಾರಿ ಆತಂಕವಾಗುತ್ತಿದೆ ಎಂದು ಚಾಲನಾ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಾರಿಗೆ ಸಚಿವರು ಗಮನಹರಿಸಿ ಇಂಥ ಪ್ರಕರಣಗಳಿಂದ ಮುಕ್ತ ನೀಡಬೇಕಿದೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ