NEWSನಮ್ಮರಾಜ್ಯಸಂಸ್ಕೃತಿ

ಮೈಸೂರು: ಸೆ.20ರಿಂದ ದರ್ಬಾರ್ ಹಾಲ್ ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ನವರಾತ್ರಿಯ ಸಂದರ್ಭದಲ್ಲಿ ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಈ ಹಿನ್ನೆಲೆಯಲ್ಲಿ ಸೆ.20ರಂದು ಸ್ಟ್ರಾಂಗ್ ರೂಮ್‌ನಿಂದ ಚಿನ್ನಾಭರಣಗಳನ್ನು ತಂದು ದರ್ಬಾರ್ ಹಾಲ್ ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ಜರುಗಲಿದೆ.

ಈ ಮೂಲಕ ಸಾಂಪ್ರದಾಯಿಕ ಕಾರ್ಯಕ್ರಮದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಅರಮನೆಯ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್ ರೂಮ್‌ನಿಂದ ಸಿಂಹಾಸನದ ಬಿಡಿ ಭಾಗಗಳನ್ನು ಸೆ.20ರಂದು ಬೆಳಗ್ಗೆ10ರಿಂದ ಬಿಗಿ ಭದ್ರತೆಯಲ್ಲಿ ದರ್ಬಾರ್ ಹಾಲ್‌ಗೆ ತಂದು ಜೋಡಿಸುವ ಕಾರ್ಯ ನಡೆಯಲಿದೆ.

ಇನ್ನು ಅಂದು ಬೆಳಗ್ಗೆ ವಿವಿಧ ಪೂಜಾ ಕಾರ್ಯ ಜರುಗಲಿದೆ. ಹೋಮ, ಶಾಂತಿ ನೆರವೇರಿಸಿದ ಬಳಿಕವಷ್ಟೇ ಸ್ಟ್ರಾಂಗ್ ರೂಮ್ ತೆರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಅರಮನೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಸಿಂಹಾಸನ ಜೋಡಣಾ ಕಾರ್ಯಕ್ಕೆ ಬಳಸಿಕೊಳ್ಳುವ ಸಿಬ್ಬಂದಿಗಳಿಗೆ ಮೊಬೈಲ್ ತೆಗೆದುಕೊಂಡು ಬರದಂತೆ ಸೂಚನೆ ನೀಡಲಾಗಿದ್ದು, ಸಿಸಿ ಕ್ಯಾಮರಾಗಳಿಗೂ ಪರದೆ ಹಾಕಲಾಗುತ್ತದೆ. ಪ್ರತಿಯೊಂದು ಬಿಡಿಭಾಗವನ್ನು ಶಸ್ತ್ರಸಜ್ಜಿತ ಸಿಬ್ಬಂದಿಯೊಂದಿಗೆ ತರಲಾಗುತ್ತದೆ.

ಸೆ.26ಕ್ಕೆ ಸಿಂಹ ಜೋಡಣಾ: ನವರಾತ್ರಿ ಮೊದಲ ದಿನವಾದ ಸೆ.26ರಂದು ಚಿನ್ನದ ಸಿಂಹಾಸನಕ್ಕೆ ‘ಸಿಂಹ ಜೋಡಣಾ ಕಾರ್ಯ ನಡೆದ ನಂತರ ಖಾಸಗಿ ದರ್ಬಾರ್ ನಡೆಯುತ್ತದೆ. ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಆಯುಧ ಪೂಜೆ ದಿನವಾದ ಅ.4ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೆ ಹಾಗೂ ವಿಜಯದಶಮಿ ದಿನವಾದ ಅ.5ರಂದು ದಿನವಿಡೀ ಅರಮನೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ಅ.20ರಂದು ದರ್ಬಾರ್ ಹಾಲ್‌ನಿಂದ ಸಿಂಹಾಸನವನ್ನು ಬಿಡಿಭಾಗವಾಗಿ ಪ್ರತ್ಯೇಕಿಸಿ ಸ್ಟ್ರಾಂಗ್ ರೂಮ್‌ಗೆ ಕೊಂಡೊಯ್ಯಲಾಗುತ್ತದೆ. ಆ ದಿನವೂ ಬೆಳಗ್ಗೆ 10ರಿಂದ ಮಧ್ಯಾಹ್ನ1 ಗಂಟೆವರೆಗೆ ಅರಮನೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...