NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳ ಸಂಘಟನೆಗಳ ಒಕ್ಕೂಟ ಇದೇ ಏ.8ರಿಂದ ಹಮ್ಮಿಕೊಂಡಿರುವ ಚಿತ್ರದುರ್ಗದಿಂದ- ಬೆಂಗಳೂರು ವರೆಗಿನ ಪಾದಯಾತ್ರೆಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಾಗಲಕೋಟೆ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾ ಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ತಿಳಿಸಿದ್ದಾರೆ.

ಶುಕ್ರವಾರ (ನಿನ್ನೆ) ನಡೆದ ಮಹಾ ಮಂಡಳದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು ನಮ್ಮ ಬೆಂಬಲವನ್ನು ಈ ಹೋರಾಟಕ್ಕೆ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಯ ಒಕ್ಕೂಟದವರು ಇದೇ ಏ.21ರಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದು, ಸಾರಿಗೆ ನೌಕರರಿಗೆ ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಬೇಡಿಕೆ, ಇಟ್ಟಿದ್ದಾರೆ.

ಅದೇ ರೀತಿ 01-01-2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ಮತ್ತು ಇತರೆ ಆರ್ಥಿಕ ಸೌಲಭ್ಯಗಳನ್ನು ನೀಡುವಂತೆ ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೇ ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಘೋಷಿಸುವಂತೆ ಬೇಡಿಕೆ ಇಟ್ಟಿದ್ದಾರೆ. 2020-21 ರ ಸಾರಿಗೆ ನೌಕರರ ಮುಷ್ಕರದ ಸಂದರ್ಭದಲ್ಲಿ ಹೊರಡಿಸಿರುವ ಶಿಕ್ಷಾದೇಶಗಳನ್ನು ರದ್ದು ಪಡಿಸುವಂತೆ ಕೋರಿದ್ದಾರೆ. ಈ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರೆ ಕೊಟ್ಟಿರುವ ಉಪವಾಸ ಸತ್ಯಾಗ್ರಹ ಹಾಗೂ ಈ ನಡೆಸುತ್ತಿರುವ ಪಾದಯಾತ್ರೆಗೆ ನಮ್ಮ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾಮಂಡಳವು ಸಂಪೂರ್ಣ ಬೆಂಬಲವನ್ನು ವ್ಯಕ್ತ ಪಡಿಸುತ್ತದೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಳೆ ಕನಿಷ್ಠ ಪಿಂಚಣಿ 7,500 ರೂ. ಮಾಡಲು ಆಗ್ರಹಿಸಿ ಪಿಎಫ್ ಕಚೇರಿ ಮುಂದೆ EPS-95, BMTC-KSRTC ನಿವೃತ್ತ ನೌಕರರ ಪ್ರತ... KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ...